ಸರಕಾರಿ ಜಾಗ ಅತಿಕ್ರಮಣ ಯತ್ನ: ಸ್ಥಳೀಯರಿಂದ ಆಕ್ಷೇಪ


Team Udayavani, Jan 18, 2018, 3:41 PM IST

18-Jan-19.jpg

ಉಪ್ಪಿನಂಗಡಿ : ಮಹಿಳೆಯೊಬ್ಬರು ಸರಕಾರಿ ಜಾಗ ಅತಿಕ್ರಮಿಸಲು ನಡೆಸಿದ ಯತ್ನವನ್ನು ಸ್ಥಳೀಯರು ತಡೆದ ಘಟನೆ 34ನೇ  ನೆಕ್ಕಿಲಾಡಿ ಗ್ರಾಮದ ಆದರ್ಶನಗರದಲ್ಲಿ ಮಂಗಳವಾರ ನಡೆದಿದೆ.

ಆದರ್ಶನಗರದಲ್ಲಿರುವ ಸರಕಾರಿ ಜಾಗದಲ್ಲಿ ನಿರ್ಮಾಣಗೊಂಡಿರುವ ಜಿ.ಪಂ.ನ ಶುದ್ಧ ಕುಡಿಯುವ ನೀರಿನ ಘಟಕದ ಬಳಿ ಖಾಲಿ ಸರಕಾರಿ ಜಾಗವಿತ್ತು. ಅದನ್ನು ಬೇರೆ ಗ್ರಾಮದ ಮಹಿಳೆಯೊಬ್ಬರು ಬಂದು ಜೆಸಿಬಿಯಿಂದ ಸಮತಟ್ಟು ಮಾಡಿಸಲು ಮುಂದಾದರು. ಇದನ್ನು ಸ್ಥಳೀಯರು ಆಕ್ಷೇಪಿಸಿದಾಗ, 34ನೇ ನೆಕ್ಕಿಲಾಡಿ ಗ್ರಾ.ಪಂ. ಅಧ್ಯಕ್ಷರೇ ತನಗೆ ಈ ಜಾಗ ತೋರಿಸಿದ್ದಾರೆ ಎಂದು ಮಹಿಳೆ ಹೇಳಿದ್ದು ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಯಿತು.

ಕುಡಿಯುವ ನೀರಿನ ಘಟಕಕ್ಕೆ ಕುತ್ತು?
ಉಪ್ಪಿನಂಗಡಿ- ಪುತ್ತೂರು ರಾಜ್ಯ ಹೆದ್ದಾರಿಯ ಬದಿಯಲ್ಲಿರುವ ಈ ಸರಕಾರಿ ಜಾಗವನ್ನು ಸಮತಟ್ಟುಗೊಳಿಸಲಾಗಿದ್ದು, ಇದರಿಂದ ಅಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಗ್ರಾ.ಪಂ.ನ ಕೊಳವೆ ಬಾವಿಗೆ ಕುತ್ತು ಬರುವ ಸಾಧ್ಯತೆಯಿದೆ ಎಂದು ಸ್ಥಳೀಯರು ಆತಂಕ ವ್ಕಕ್ತಪಡಿಸಿದ್ದಾರೆ.

ಗ್ರಾ.ಪಂ. ಅಧ್ಯಕ್ಷರೇ ಜಾಗ ತೋರಿಸಿದ್ದಾರೆ ಎಂದು ಮಹಿಳೆ ಹೇಳಿದ್ದರಿಂದ ಸ್ಥಳೀಯರು ಗ್ರಾ.ಪಂ. ಉಪಾಧ್ಯಕ್ಷ ಅಸ್ಕರ್‌ ಅಲಿ ಹಾಗೂ ಶೇಖಬ್ಬ ಅವರಿಗೆ ಮಾಹಿತಿ ನೀಡಿದರು. ಅವರು ಸ್ಥಳಕ್ಕೆ ಆಗಮಿಸಿ, ನಮಗೆ ಏನೂ ತಿಳಿದಿಲ್ಲ ಎಂದರಲ್ಲದೆ, ಸ್ಥಳೀಯರ ಪರ ನಿಂತರು. 34ನೇ ನೆಕ್ಕಿಲಾಡಿ ಗ್ರಾಮದಲ್ಲೇ ನಿವೇಶನರಹಿತ ಹಲವು ಕುಟುಂಬಗಳು ಇರುವಾಗ ಬೇರೆ ಗ್ರಾಮದ ಮಹಿಳೆಗೆ ಜಾಗ ತೋರಿಸುವ ಅಗತ್ಯವಾದರೂ ಏನು? ಸರಕಾರಿ ಜಾಗದ ಹಕ್ಕು ಸಾಧಿಸಲು ಪಂಚಾಯತ್‌ ಅಧ್ಯಕ್ಷರಿಗೆ ಅಧಿಕಾರವಿದೆಯೇ? ಜಾಗ ಅತಿಕ್ರಮಿಸಿದ ಮಹಿಳೆಯ ಹೇಳಿಕೆಯಿಂದ ಅಧ್ಯಕ್ಷರ ಮೇಲೆಯೇ ಸಂಶಯ ಮೂಡಿಸಿದೆ. ಸರಕಾರಿ ಜಾಗ ಅತಿಕ್ರಮಿಸಲು ಅವಕಾಶ
ನೀಡಬಾರದು ಎಂದು ಒತ್ತಾಯಿಸಿ, ಸ್ಥಳೀಯರು 34ನೇ ನೆಕ್ಕಿಲಾಡಿ ಗ್ರಾ.ಪಂ.ಗೆ ಮನವಿಯನ್ನೂ ನೀಡಿದ್ದಾರೆ. 

ತೆರವಿಗೆ ಸೂಚನೆ
ಈ ಕುರಿತು ಉದಯವಾಣಿ – ಸುದಿನ ಪ್ರಶ್ನಿಸಿದಾಗ, ಸರಕಾರಿ ಜಾಗದಲ್ಲಿ ಈ ಮಹಿಳೆ ಮನೆ ಕಟ್ಟಲು ಅನುಮತಿ ಕೇಳಿದ್ದರು. ಆದರೆ, ಅಲ್ಲಿ ಪಕ್ಕದಲ್ಲೇ ಕುಡಿಯುವ ನೀರಿನ ಟ್ಯಾಂಕ್‌ ಇರುವ ಕಾರಣ ಸ್ಥಳೀಯರು ಆಕ್ಷೇಪಿಸಿದ್ದಾರೆ. ಇದನ್ನು ಮನಗಂಡು, ಅಕ್ರಮ ನಿರ್ಮಾಣವನ್ನು ತೆರವು ಮಾಡುವಂತೆ ಸೂಚಿಸಿದ್ದೇನೆ ಎಂದು 34ನೇ ನೆಕ್ಕಿಲಾಡಿ ಗ್ರಾ.ಪಂ. ಅಧ್ಯಕ್ಷೆ ರತಿ ಎಸ್‌. ನಾೖಕ್‌ ಪ್ರತಿಕ್ರಿಯಿಸಿದ್ದಾರೆ.

ಟಾಪ್ ನ್ಯೂಸ್

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.