Eid-Ul-Fitr 2024 ; ಕರಾವಳಿಯಲ್ಲಿ ಸಂಭ್ರಮದ ಈದುಲ್ ಫಿತ್ರ ಆಚರಣೆ
Team Udayavani, Apr 11, 2024, 12:39 AM IST
ಮಂಗಳೂರು/ಉಡುಪಿ: ಕರಾವಳಿಯಾದ್ಯಂತ ಬುಧವಾರ ಮುಸ್ಲಿಮರು ಸಡಗರ, ಸಂಭ್ರಮದಿಂದ “ಈದುಲ್ ಫಿತ್ರ’ ಆಚರಿಸಿದರು.
ದ.ಕ., ಉಡುಪಿ ಜಿಲ್ಲೆಯ ಎಲ್ಲ ಜುಮಾ ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್, ಈದ್ ಖುತಾº, ಈದ್ ಸಂದೇಶ, ಪ್ರವಚನ ನಡೆದವು.
ಮಂಗಳೂರು ನಗರದ ಬಾವುಟ ಗುಡ್ಡದ ಈದ್ಗಾ ಜುಮಾ ಮಸ್ಜಿದ್ನಲ್ಲಿ ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಖುತಾº ಪಾರಾಯಣಗೈದರು. ಬಂದರ್ ಝೀನತ್ ಬಕ್Ò ಕೇಂದ್ರ ಜುಮಾ ಮಸೀದಿಯ ಖತೀಬ್ ಅಲ್ಹಾಜ್ ಅಬುಲ್ ಅಕ್ರಂ ಮುಹಮ್ಮದ್ ಬಾಖವಿ ಈದ್ ನಮಾಜ್ಗೆ ನೇತೃತ್ವ ನೀಡಿದರು.
ಈ ಸಂದರ್ಭ ಬಂದರ್ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಮತ್ತು ಈದ್ಗಾ ಜುಮಾ ಮಸೀದಿಯ ಅಧ್ಯಕ್ಷ ಅಲ್ಹಾಜ್ ಯೇನಪೊಯ ಅಬ್ದುಲ್ಲಾ ಕುಂಞಿ, ಉಪಾಧ್ಯಕ್ಷ ಕೆ. ಅಶ್ರಫ್, ಕೋಶಾ ಧಿಕಾರಿ ಎಸ್.ಎಂ. ರಶೀದ್ ಹಾಜಿ ಮತ್ತಿತರರು ಪಾಲ್ಗೊಂಡಿದ್ದರು.
ಉಳ್ಳಾಲ ಕೇಂದ್ರ ಜುಮಾ ಮಸ್ಜಿದ್ನಲ್ಲಿ ಖತೀಬ್ ಇಬ್ರಾಹೀಂ ಸಅದಿ ನೇತೃತ್ವದಲ್ಲಿ ಈದ್ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು.
ಉಡುಪಿಯಲ್ಲಿ ಆಚರಣೆ
ಉಡುಪಿಯ ಜಾಮೀಯ ಮಸೀದಿಯಲ್ಲಿ ಮೌಲಾನಾ ಅಬ್ದುರ್ರಶೀದ್ ನದ್ವಿ ನೇತೃತ್ವದಲ್ಲಿ ಮತ್ತು ಅಂಜುಮಾನ್ ಮಸೀದಿಯಲ್ಲಿ ಮೌಲಾನಾ ಇನಾಯುತುಲ್ಲಾ ರಝ್ವಿ ನೇತೃತ್ವದಲ್ಲಿ, ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ನೇತೃತ್ವದಲ್ಲಿ, ಕುಂದಾಪುರ ಜುಮಾ ಮಸೀದಿಯಲ್ಲಿ ಕುಂದಾಪುರದ ಈದ್ಗಾ ಮೈದಾನದಲ್ಲಿ ಧರ್ಮಗುರು ಮೌಲಾನ ಕರಾರ್ ಹುಸೇನ್ ನೇತೃತ್ವದಲ್ಲಿ, ಗಂಗೊಳ್ಳಿಯ ಜುಮಾ ಮಸೀದಿಯಲ್ಲಿ ಮೌಲಾನ ಮಝಮ್ಮಿಲ್ ನದ್ವಿ, ಮೊಹಿದೀನ್ ಜುಮ್ಮಾ ಮಸೀದಿಯಲ್ಲಿ ಖತೀಬ್ ಮೌಲಾನ ಅಬ್ದುಲ್ ಕರೀಂ ನದ್ವಿ, ಶಾಹಿ ಜುಮಾ ಮಸೀದಿಯಲ್ಲಿ ಮೌಲಾನ ಅಬ್ದುಲ್ ಮತಿನ್ ಸಿದ್ದಿಕಿ ನೇತೃತ್ವದಲ್ಲಿ ಈದ್ ನಮಾಝ್ ನಡೆಯಿತು.
ಉಳಿದಂತೆ ಉಭಯ ಜಿಲ್ಲೆಗಳ ಎಲ್ಲ ಮಸೀದಿ-ಈದ್ಗಾಗಳಲ್ಲಿ ವಿಶೇಷ ನಮಾಝ್, ಪ್ರವಚನದ ಬಳಿಕ ಪರಸ್ಪರ ಹಸ್ತಲಾಘವ, ಆಲಿಂಗನದ ಮೂಲಕ ಹಬ್ಬದ ಶುಭಾಶಯ ವಿನಿಮಯ, ಮನೆಗಳಲ್ಲಿ ವಿಶೇಷ ಹಬ್ಬದೂಟದ ಜತೆಗೆ ನೆರೆಮನೆ, ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿ ಇತ್ಯಾದಿ ನಡೆದವು.