ಐತ್ತೂರು: ಕೆಎಫ್ಡಿಸಿ ರಬ್ಬರ್ ತೋಟಕ್ಕೆ ಬೆಂಕಿ
Team Udayavani, May 6, 2019, 6:10 AM IST
ಕಡಬ: ಐತ್ತೂರು ಗ್ರಾಮದ ಸುಂಕದಕಟೆಯಲ್ಲಿ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ (ಕೆಎಫ್ಡಿಸಿ)ದ ರಬ್ಬರ್ ತೋಟಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಸಾವಿರಾರು ರಬ್ಬರ್ ಗಿಡಗಳು ಬೆಂಕಿಗಾಹುತಿಯಾದ ಘಟನೆ ರವಿವಾರ ಮಧ್ಯಾಹ್ನ ಸಂಭವಿಸಿದೆ.
ನಿಗಮದ ಅಧಿಕಾರಿಗಳು ಹಾಗೂ ಸಿಬಂದಿ ಸ್ಥಳೀಯರ ನೆರವಿ ನೊಂದಿಗೆ ಬೆಂಕಿ ನಂದಿಸಲು ಶ್ರಮಿಸಿದರು. ಮಧ್ಯಾಹ್ನ 1 ಗಂಟೆ ಸುಮಾರಿಗೆ ಕಾಣಿಸಿಕೊಂಡ ಬೆಂಕಿ ತೋಟದೊಳಗೆಲ್ಲ ವ್ಯಾಪಿಸಿಕೊಂಡಿತು.
ಈ ಹಿಂದೆ ನಿಗಮದ ತೋಟಕ್ಕೆ ಬೆಂಕಿ ಬಿದ್ದಾಗ ಸುಮಾರು 150ಕ್ಕೂ ಹೆಚ್ಚು ಮಂದಿ ಸ್ಥಳೀಯರು ಸೇರಿ ಬೆಂಕಿ ನಂದಿಸಲು ನೆರವಾಗಿದ್ದರು. ಆದರೆ ಬೆಂಕಿ ನಂದಿಸುವ ವೇಳೆ ಜನರು ತೋಟದ ಬೇಲಿಯನ್ನು ಹಾನಿಗೊಳಿಸಿದ್ದಾರೆ ಎಂದು ನಿಗಮದ ಅಧಿಕಾರಿಗಳು ಜನರ ಮೇಲೆ ಆರೋಪ ಹೊರಿಸಿದ್ದರು. ಈ ಕಾರಣದಿಂದಾಗಿ ಈ ಬಾರಿ ಸ್ಥಳೀಯರು ಬೆಂಕಿ ನಂದಿಸಲು ಹೆಚ್ಚಿನ ಮುತುವರ್ಜಿ ತೋರಿಸಲಿಲ್ಲ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ