ಮತಯಾಚನೆಗೆ ಪಾದಯಾತ್ರೆ !


Team Udayavani, Apr 19, 2018, 6:20 AM IST

Election-campaign-Dakshina.jpg

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರ ಕಾರ್ಯ ಸ್ವಾರಸ್ಯವಾಗಿರುತ್ತದೆ. ಯಾವುದೇ ಕ್ಷೇತ್ರದಲ್ಲಿ ಸ್ಪರ್ಧೆ ಎಷ್ಟೊಂದು ತೀವ್ರವಾಗಿದ್ದರೂ ಪ್ರಚಾರ ಕಾರ್ಯ ಮಾತ್ರ ಶಾಂತಿಯುತವಾಗಿ ನಡೆಯುವುದು ಇಲ್ಲಿನ ವೈಶಿಷ್ಟé. ಮತದಾನದ ಪ್ರಕ್ರಿಯೆಯೂ ಇಲ್ಲಿ ಶಾಂತಿಯುತ ವಾಗಿಯೇ ಇರುತ್ತದೆ. ಆದ್ದರಿಂದ ಇಲ್ಲಿನ ಚುನಾವಣಾ ರಾಜಕೀಯ ಪರಂಪರೆ ಶ್ಲಾಘನೀಯವಾಗಿದೆ.

ವಿವಿಧ ಪಕ್ಷಗಳ ರಾಷ್ಟ್ರೀಯ – ರಾಜ್ಯ ನಾಯಕರು ಈ ಪ್ರದೇಶಕ್ಕೆ ಸ್ವಾತಂತ್ರ್ಯಪೂರ್ವ ದಿನಗಳಿಂದಲೇ ಮಹತ್ವ ನೀಡು
ತ್ತಿದ್ದರು. ಈ ಬಾರಿಯೂ  ಈ ಪರಂಪರೆ ಮುಂದುವರಿಯುತ್ತಿದೆ. ಇನ್ನು ಚುನಾವಣೆ ಪ್ರಕ್ರಿಯೆ ಆರಂಭವಾದ ಬಳಿಕ ಮತ್ತಷ್ಟು ರಾಷ್ಟ್ರೀಯ ನಾಯಕರನ್ನು ನಿರೀಕ್ಷಿಸಲಾಗುತ್ತಿದೆ.ಸಾರ್ವಜನಿಕ ಸಭೆಗಳು ಜಿಲ್ಲೆಯಾದ್ಯಂತ ಸಂಘಟನೆ ಯಾಗುತ್ತಿದ್ದು ಪ್ರಭಾವೀ ನಾಯಕರು ಇರುವಲ್ಲಿ ಹೆಚ್ಚಿನ ಸಭೆಗಳು ಸಾಮಾನ್ಯ.

90ರ ದಶಕದಲ್ಲಿ ಆಗಿನ ಮುಖ್ಯ ಚುನಾವಣಾ ಆಯುಕ್ತ ಟಿ.ಎನ್‌.  ಶೇಷನ್‌ ಅವರು ಚುನಾವಣಾ ನೀತಿಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿದರು. ಅದಕ್ಕೆ ಮೊದಲು, ಜಿಲ್ಲೆಯಲ್ಲಿ ನಡುರಾತ್ರಿ ಕಳೆದು ಮುಂಜಾನೆಯ ವೇಳೆಗೂ ಸಾರ್ವಜನಿಕ ಸಭೆಗಳು ವಿಸ್ತರಣೆಯಾದ ಘಟ‌ನೆಗಳು ಸಂಭವಿಸಿದ್ದವು.

ಶೇಷನ್‌ ಪರಿಣಾಮವೆಂದರೆ ಈ ಎಲ್ಲ ದುಂದುವೆಚ್ಚಗಳ ನಿಯಂತ್ರಣ. ಸಂಜೆ ಏಳರೊಳಗೆ ಸಾರ್ವಜನಿಕ ಪ್ರಚಾರ ಸಭೆಗಳ ಮುಕ್ತಾಯ. ಪ್ರತೀ ದಿನ ಅಭ್ಯರ್ಥಿಗಳು ತಮ್ಮ ಖರ್ಚು ವೆಚ್ಚಗಳ ಬಗ್ಗೆ ಮಾಹಿತಿ ದಾಖಲಿಸುವ ಅನಿವಾರ್ಯತೆ. ನೀತಿಸಂಹಿತೆ ಉಲ್ಲಂಘಿಸಿದರೆ ಚುನಾ ವಣಾ ಆಯೋಗದಿಂದ ಶಿಸ್ತುಕ್ರಮ.

ಸರಕಾರಿ ವಾಹನಗಳ (ದುರ್‌) ಬಳಕೆಗೆ ನಿಷೇಧ. ಇವೆಲ್ಲವು ಗಳಿಂದಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಚುನಾವಣಾ ಪ್ರಚಾರದ ಶೈಲಿಯೇ ಬದಲಾಯಿತು. ಮೊದಲೇ ಶಾಂತಿ ಯುತವಾಗಿದ್ದ ಪರಂಪರೆ ಮತ್ತಷ್ಟು ಶಿಸ್ತುಬದ್ಧವಾಯಿತು.

ಪಾದಯಾತ್ರೆ
90ರ ದಶಕದಲ್ಲಿ ಜಿಲ್ಲೆಯಲ್ಲಿ ಹೆಚ್ಚು ಪ್ರಚಲಿತ ವಾದದ್ದು ಚುನಾವಣಾ ಸಂದರ್ಭದ ಪಾದಯಾತ್ರೆ. ಬಹುತೇಕ ಅಭ್ಯರ್ಥಿಗಳು ಪಾದಯಾತ್ರೆಯ ಕ್ರಮವನ್ನು ಇಲ್ಲಿ ರೂಢಿಸಿಕೊಂಡರು. ಈ ಮೂಲಕ ಮನೆ ಮನೆಗಳಿಗೆ ತೆರಳಿ ಮತದಾರರನ್ನು ಭೇಟಿಯಾಗತೊಡಗಿದರು. ಈ ಮೂಲಕ ಅಭ್ಯರ್ಥಿಗಳಿಗೆ ಮತದಾರರೊಂದಿಗೆ ನೇರ ಸಂವಹನ ನಡೆಸಲು ಸಾಧ್ಯವಾಯಿತು. ಮತದಾರರು ಕೂಡ ತಮ್ಮ ಸಮಸ್ಯೆಗಳನ್ನು (ಪರಿಹಾರದ ವಿಷಯ ತಾರ್ಕಿಕ) ನೇರವಾಗಿ ಅಭ್ಯರ್ಥಿಗಳಲ್ಲಿ ಹೇಳಿಕೊಳ್ಳಲು ಸಾಧ್ಯವಾಯಿತು. ಕಡಿಮೆ ಮತದಾರರಿರುವ ಕ್ಷೇತ್ರಗಳಲ್ಲಿ ಇದು ಹೊಸ ಜಾಗೃತಿಯನ್ನು ಮೂಡಿಸುವಲ್ಲಿಯೂ ಸಫಲವಾಯಿತು. ಅಭ್ಯರ್ಥಿಗಳು ಕೂಡ ಈ ಮೂಲಕ ಸಾಕಷ್ಟು ಸಾಮಾಜಿಕ ಕಾಳಜಿಯನ್ನು ರೂಢಿಸಿಕೊಳ್ಳಲು ಸಾಧ್ಯವಾಯಿತು. ವಿಸ್ತಾರವಾದ ಕ್ಷೇತ್ರಗಳಲ್ಲಿ ಇದು ಸುಲಭ ಸಾಧ್ಯವಲ್ಲವಾದರೂ ಅಂತಹ ಪ್ರದೇಶಗಳಲ್ಲಿ ಸಾರ್ವಜನಿಕ ಸಭೆಗಳ ಮೂಲಕ ಅಭ್ಯರ್ಥಿಗಳು, ಮತದಾರರ ನಡುವಣ ಸಂವಹನ ಸಾಧ್ಯವಾಗುತ್ತದೆ.

ವಿಜೇತ-ಪರಾಜಿತರೆನ್ನದೆ ಅಭ್ಯರ್ಥಿಗಳು ಚುನಾವಣೆಯ ಬಳಿಕವೂ ನಿರ್ದಿಷ್ಟ ಪ್ರದೇಶಗಳ ಮೂಲ ಸೌಕರ್ಯಗಳ ಬಗ್ಗೆ ಸ್ಪಂದಿಸಿದ ಮತ್ತು ಸ್ಪಂದಿಸುತ್ತಿರುವ ನಿದರ್ಶನಗಳಿವೆ. ಇದು 90ರ ದಶಕದ ಪಾದಯಾತ್ರೆ ಪರಿಕಲ್ಪನೆಯಿಂದಾದ ಲಾಭ. 

ಅಂದ ಹಾಗೆ …
ಈ ಬಾರಿ ಸ್ಪರ್ಧಿಸಲು ತೀವ್ರ ಆಕಾಂಕ್ಷಿಯಾಗಿರುವ “ಅವರು’ ತಮ್ಮ ಪರವಾಗಿ ಬೆಂಬಲಿಗರಿಂದ, ಕೆಲವು ನಾಯಕರ ಮೂಲಕ ಪಕ್ಷದ ವರಿಷ್ಠರಿಗೆ ಸತತವಾಗಿ ಶಿಫಾರಸು ಪತ್ರಗಳನ್ನು ಕಳುಹಿಸುತ್ತಿದ್ದಾರೆ. ಕೆಲವು ಪತ್ರಗಳಲ್ಲಿ “ಅವರು’ ಜಯಿಸಿದರೆ ಕನಿಷ್ಠ ಐದು ಲಕ್ಷ ಮತಗಳ ಅಂತರದಿಂದ ಜಯಿಸುವರೆಂದು ಶಿಫಾರಸು ಮಾಡಲಾಗಿದೆ. ನಿಜಕ್ಕಾದರೆ, ಪ್ರಸ್ತುತ ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆಯೇ ಎರಡು ಲಕ್ಷ ಮೀರಿಲ್ಲ !

 - ಮನೋಹರ ಪ್ರಸಾದ್‌

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.