ಸವಾಲುಗಳ ಮಧ್ಯೆ ಚುನಾವಣೆ ಕಾರ್ಯ ಯಶಸ್ವಿ


Team Udayavani, May 26, 2019, 6:00 AM IST

DK-DC

ಲೋಕಸಭಾ ಚುನಾವಣೆಯಲ್ಲಿ ಮತದಾನ-ಮತ ಎಣಿಕೆ ಸಹಿತ ಎಲ್ಲ ಹಂತಗಳನ್ನು ಜಿಲ್ಲಾ ಚುನಾವಣಾಧಿಕಾರಿಗಳ ತಂಡ ಅತ್ಯಂತ ಯಶಸ್ವಿಯಾಗಿ ನಿಭಾಯಿಸಿದೆ. ಈ ಬಾರಿಯ ಚುನಾವಣೆಯನ್ನು ಯಶಸ್ವಿಯಾಗಿ ನಡೆಸುವಲ್ಲಿ ಮುಖ್ಯ ನೆಲೆಯಲ್ಲಿ ಕೆಲಸ ಮಾಡಿದವರು ದ.ಕ. ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್. ಈ ಕುರಿತಂತೆ ಉದಯವಾಣಿ ಸುದಿನ ಜತೆಗೆ ವಿಶೇಷ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ.

ಲೋಕಸಭಾ ಚುನಾವಣೆಯ ಯಶಸ್ವಿ ನಿರ್ವಹಣೆ ಬಗ್ಗೆ ತಮ್ಮ ಅಭಿಪ್ರಾಯವೇನು?
ಬಿಎಲ್ಒಗಳಿಂದ ಆರಂಭವಾಗಿ ಎಲ್ಲ ಹಂತದ ಅಧಿಕಾರಿಗಳ ತಂಡದ ಉತ್ತಮ ಕಾರ್ಯರಚನೆಯ ಮೂಲಕವಾಗಿ ಚುನಾವಣೆ ಯಶಸ್ವಿಯಾಗಿದೆ. ಮತ ದಾರರು ಹಾಗೂ ಪಕ್ಷಗಳ ನಾಯಕರು ಕೂಡ ಚುನಾವಣೆಯ ಯಶಸ್ವಿಯಲ್ಲಿ ಕೈಜೋಡಿಸಿದ್ದಾರೆ. ಪ್ರಜಾಪ್ರಭುತ್ವದ ಹಬ್ಬವಾಗಿ ಚುನಾವಣೆ ನಡೆದಿರುವುದರಿಂದ ತುಂಬ ಸಂತೋಷವಾಗುತ್ತಿದೆ.

ಚುನಾವಣೆಯ ಮಧ್ಯೆ ನಗರದಲ್ಲಿ ವಿವಿಧ ಸಮಸ್ಯೆಗಳು ಎದುರಾಗಿರುವುದನ್ನು ಹೇಗೆ ನಿಭಾಯಿಸಿದಿರಿ ?
ಚುನಾವಣೆ ಎದುರಾದಾಗ ಹೊಸ ಯೋಜನೆಗೆ ಅವಕಾಶವಿರದಿದ್ದರೂ, ಜಾರಿಗೆಗೊಂಡಿದ್ದ ಕಾಮಗಾರಿ ಮುಂದುವರಿಸಲು ತೊಂದರೆ ಇರಲಿಲ್ಲ. ಆದರೆ, ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆಗೆ ದೊಡ್ಡ ಸವಾಲಾಗಿರುವುದರಿಂದ ವಿಶೇಷ ಒತ್ತು ನೀಡಬೇಕಾಯಿತು. ಜತೆಗೆ, ಮಳೆಗಾಲ ಎದುರಿಸಲು ರಾಜಕಾಲುವೆಯ ಹೂಳು ತೆಗೆಯುವ ಕಾರ್ಯ ಕೂಡ ನಡೆಸಲಾಗಿದೆ. ಸಮರ್ಥ ಅಧಿಕಾರಿಗಳ ತಂಡವಿದ್ದಾಗ ಇದು ಸಾಧ್ಯವಾಗುತ್ತದೆ.

ಈ ಬಾರಿಯ ಚುನಾವಣೆ ಎದುರಿ ಸುವ ಸಂದರ್ಭ ಎದುರಾಗಿದ್ದ ಸವಾಲುಗಳು, ಉಲ್ಲೇಖನೀಯ ಸಂಗತಿ ಯಾವುದು?
ಬೇರೆ ಬೇರೆ ರೀತಿಯಲ್ಲಿ ಸವಾಲು ಇದ್ದರೂ ಅದನ್ನು ಹೇಳುವಂತಿಲ್ಲ. ಆಯಾ ಸಂದರ್ಭಕ್ಕೆ ಅನುಗುಣವಾಗಿ ಸವಾಲನ್ನು ನಿಭಾಯಿಸಲಾಗಿದೆ. ಸವಾಲುಗಳ ಮಧ್ಯೆಯೇ ಚುನಾವಣೆ ಕಾರ್ಯವನ್ನು ಯಶಸ್ವಿಯಾಗಿ ನಿಭಾಯಿಸಲಾಗಿದೆ.

ಉಳಿದಂತೆ ಮತಗಟ್ಟೆಯಲ್ಲಿ ಅಧಿಕಾರಿಗಳಿಗೆ ಊಟ-ತಿಂಡಿ ಸಹಿತ ಸೂಕ್ತ ವ್ಯವಸ್ಥೆ ಮಾಡಿದ ಕಾರಣದಿಂದ ಮತದಾನವಾದ ಬಳಿಕ ಕೆಲವು ಅಧಿಕಾರಿಗಳು ನನ್ನ ಬಳಿಗೆ ಬಂದು ಶುಭ ಕೋರಿದ್ದಾರೆ. ಅದು ಖುಷಿಯಾಗಿದೆ. ಜತೆಗೆ ವಿವಿಧ ಶ್ರೇಣಿಯ ಅಧಿಕಾರಿಗಳು, ಪೊಲೀಸ್‌ ಅಧಿಕಾರಿಗಳು ರಾತ್ರಿಯೆಲ್ಲ ಮನೆಗೆ ಹೋಗದೆ ಚುನಾವಣೆಯ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಇದು ಉಲ್ಲೇಖನೀಯ ಸಂಗತಿ.

ಜಿಲ್ಲೆಯಲ್ಲಿ ಈ ಬಾರಿ ಮತದಾನದ ಪ್ರಮಾಣದಲ್ಲಿಯೂ ಏರಿಕೆಯಾಗಿ ರು ವುದಕ್ಕೆ ಏನನ್ನಿಸುತ್ತದೆ?
ಜಿಲ್ಲೆಯ ಮತದಾರರು ವಿಶೇಷ ಆದ್ಯತೆ ನೆಲೆಯಲ್ಲಿ ಮತದಾನದಿಂದ ಪ್ರಮಾಣದಲ್ಲಿ ಏರಿಕೆಯಾಗಿದೆ. ಮತದಾರರು ಜಿಲ್ಲಾಡಳಿತದ ಜತೆಗೆ ಕೈಜೋಡಿಸಿದ ಕಾರಣಕ್ಕಾಗಿ ಉತ್ತಮ ಮತದಾನವಾಗಿದೆ. ಮತದಾನ ಜಾಗೃತಿ ನಡೆಸಿದವರು, ಮಾಧ್ಯಮದವರ ಕಾರ್ಯ ಶ್ಲಾಘನೀಯ.

ಲೋಕಸಭಾ ಚುನಾವಣೆ ಮುಗಿದ ಕೆಲವೇ ತಿಂಗಳಿನಲ್ಲಿ ಮತ್ತೆ ಮಂಗಳೂರು ಪಾಲಿಕೆಗೆ ಚುನಾವಣೆ ಎದುರಾಗಲಿರುವ ಕಾರಣದಿಂದ ಸಿದ್ಧತೆ ಯಾವಾಗಿನಿಂದ ಆರಂಭವಾಗುತ್ತದೆ?
ಚುನಾವಣೆ ಎನ್ನುವುದು ಪ್ರಜಾಪ್ರಭುತ್ವದ ಮಹತ್ವದ ಕಾರ್ಯ. ಹೀಗಾಗಿ ಎಲ್ಲ ಶ್ರೇಣಿಯ ಚುನಾವಣೆ ಕೂಡ ಸಮಯದ ಗಡಿಯಲ್ಲಿ ಎದುರಾಗುತ್ತದೆ. ಸದ್ಯ ಪಾಲಿಕೆಯಲ್ಲಿ ಆಡಳಿತಾಧಿಕಾರಿ ಅಧಿಕಾರದಲ್ಲಿದ್ದಾರೆ. ಹೀಗಾಗಿ ಅವರು ಈ ಕುರಿತ ಜವಾಬ್ದಾರಿ ನಿಭಾಯಿಸಲಿದ್ದು, ಚುನಾವಣೆ ಆಯೋಗದ ಸೂಚನೆಯ ಪ್ರಕಾರ ಮುಂದಿನ ಹೆಜ್ಜೆಯಿಡಲಾಗುವುದು.

“ಎಲ್ಲ ಪಕ್ಷಗಳ ಶಿಸ್ತಿನ ಪ್ರಚಾರವೇ ವಿಶೇಷ’

ನಿಮ್ಮ ಪ್ರಕಾರ ದ.ಕ. ಜಿಲ್ಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು ಶಾಂತಿಯುತ ಚುನಾವಣೆಗೆ ಯಾವ ರೀತಿಯಲ್ಲಿ ಸ್ಪಂದಿಸಿವೆೆ?
ಜಿಲ್ಲೆಯ ವಿಶೇಷವೆಂಬಂತೆ ಎಲ್ಲ ಪಕ್ಷಗಳು ಅತ್ಯಂತ ಶಿಸ್ತಿನಿಂದ ಅವರವರ ಪಕ್ಷದ ಪ್ರಚಾರದಲ್ಲಿ ಭಾಗವಹಿಸುತ್ತಾರೆ. ಇದು ಬೇರೆ ಕಡೆಗಳಿಗೆ ಹೋಲಿಸಿದಾಗ ಅತ್ಯಂತ ಗಮನಾರ್ಹ ಸಂಗತಿ. ಚುನಾವಣೆ ಘೋಷಣೆಯಾದ ತತ್‌ಕ್ಷಣದಿಂದ ಇಲ್ಲಿನ ಎಲ್ಲ ರಾಜಕೀಯ ಪಕ್ಷದವರು ಜಿಲ್ಲಾಡಳಿತದ ಎಲ್ಲ ಕಾರ್ಯಯೋಜನೆಗಳಿಗೆ ಸೂಕ್ತ ಸ್ಪಂದನೆಯನ್ನು ನೀಡುತ್ತಾ ಬಂದಿದ್ದಾರೆ. ಹೀಗಾಗಿ ವಿಶೇಷ ಅಭಿಯಾನ ಕಾರ್ಯಕ್ರಮವನ್ನು ಮುಕ್ತವಾಗಿ ಮಾಡಲು ಸಾಧ್ಯವಾಗಿದೆ. ಬೇರೆ ಜಿಲ್ಲೆಯಲ್ಲಾದರೆ, ಆ ಪಕ್ಷದವರು ಜಿಲ್ಲಾಡಳಿತದ ಜತೆಗೆ ನಾವಿದ್ದೇವೆ ಎಂದು ಹೇಳುತ್ತ ಅವರು ಭಾಗವಹಿಸುವುದಿಲ್ಲ. ಆದರೆ, ದ.ಕ. ಜಿಲ್ಲೆ ಇದಕ್ಕೆ ಅಪವಾದ. ಜಿಲ್ಲಾಡಳಿತ ಹೇಳಿದ ಎಲ್ಲ ಸಂದರ್ಭದಲ್ಲಿ ಪಕ್ಷಗಳು ಪಾಲ್ಗೊಂಡಿವೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.