ದ.ಕ.: ಮತದಾರರ ಪಟ್ಟಿಯಿಂದ  21,537 ಮೃತರ ಹೆಸರು ರದ್ದು


Team Udayavani, Dec 9, 2022, 8:20 AM IST

ದ.ಕ.: ಮತದಾರರ ಪಟ್ಟಿಯಿಂದ  21,537 ಮೃತರ ಹೆಸರು ರದ್ದು

ಮಂಗಳೂರು: ಜಿಲ್ಲೆಯಲ್ಲಿ ಕಳೆದ 10 ವರ್ಷಗಳಿಂದ ಮೃತಪಟ್ಟವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆಯುವ ಕಾರ್ಯ ನಡೆದಿರಲಿಲ್ಲ, ಅದನ್ನು ಈ ಬಾರಿ ನಡೆಸಲಾಗುತ್ತಿದೆ. ಈಗಾಗಲೇ 21,537 ಮಂದಿ ಮೃತರ ಹೆಸರನ್ನು ತೆರವು ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್‌ ಎಂ.ಆರ್‌. ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

2022ರ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅಂತಿಮ ಮತದಾರರ ಪಟ್ಟಿಯ ಅನಂತರ 29,410 ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದ್ದರೆ, ಆ ಅವಧಿಯಲ್ಲಿ 73,783 ಹೆಸರುಗಳನ್ನು ತೆಗೆದುಹಾಕಲಾಗಿದೆ. ಇದರಲ್ಲಿ 21,537 ಹೆಸರುಗಳನ್ನು ಮರಣ ಹೊಂದಿದ ಕಾರಣಕ್ಕೆ, 30580 ಮಂದಿಯ ಹೆಸರನ್ನು ಅವರು ಬೇರೆಡೆಗೆ ಸ್ಥಳಾಂತರಗೊಂಡಿರುವ ಕಾರಣಕ್ಕೆ ಮತ್ತು 21,666 ಹೆಸರುಗಳನ್ನು ಅವರ ಹೆಸರು ಅಥವಾ ಫೋಟೋ ಒಂದೇ ರೀತಿ ಇದ್ದ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದೆ ಎಂದರು.

ಮರಣ ಪ್ರಮಾಣ ಪತ್ರ ದಾಖಲೆಗಳನ್ನು ನೀಡದ ಕಾರಣ ಮತದಾರರ ಪಟ್ಟಿಯಲ್ಲಿ ಉಳಿದಿದ್ದ ಹೆಸರುಗಳನ್ನು ತೆಗೆದು ಹಾಕುವಂತೆ ರಾಜಕೀಯ ಪಕ್ಷಗಳ ಮೂಲಕವೂ ಒತ್ತಾಯ ಬಂದಿತ್ತು. ಅದರಂತೆ ನಗರ ಮಟ್ಟದಲ್ಲಿ ಹಾಗೂ ಗ್ರಾಮಾಂತರದಲ್ಲಿ ಮೃತಪಟ್ಟವರ ಕುಟುಂಬದವರು ಪ್ರಮಾಣ ಪತ್ರ ನೀಡದಿದ್ದರೆ, ಅಧಿಕಾರಿಗಳೇ ಡೌನ್‌ಲೋಡ್‌ ಮಾಡಿಕೊಂಡು ಅದನ್ನು ಅಟ್ಯಾಚ್‌ ಮಾಡಿಕೊಂಡು ಹೆಸರು ರದ್ದುಪಡಿಸಲಾಗುವುದು ಎಂದು ವಿವರಿಸಿದರು.

63,829 ಆಕ್ಷೇಪಣೆ ಸಲ್ಲಿಕೆ:

ಮತದಾರರ ಪಟ್ಟಿ ಪರಿಷ್ಕರಣೆಯಂತೆ 2022ರ ನವೆಂಬರ್‌ 9ರಿಂದ ಡಿಸೆಂಬರ್‌ 7ರ ವರೆಗೆ 63,829 ಆಕ್ಷೇಪಣೆಗಳು ಸಲ್ಲಿಕೆಯಾಗಿವೆ. ಇದರಲ್ಲಿ ಈಗಾಗಲೇ 16,065 ಅರ್ಜಿಗಳ ಕ್ಷೇತ್ರ ಪರಿಶೀಲನೆಗೆ ವಹಿಸಲಾಗಿದ್ದು, 1,449 ಅರ್ಜಿಗಳು ತಿರಸ್ಕೃತಗೊಂಡಿವೆ. 8,173 ಅರ್ಜಿಗಳು ಸ್ವೀಕೃತಗೊಂಡಿವೆ ಎಂದು ಡಿಸಿ ತಿಳಿಸಿದರು.

ದ.ಕ. ಜಿಲ್ಲೆಯಲ್ಲಿ ಈ ಹಿಂದೆ ಪ್ರಕಟಿಸಲಾದ ಕರಡು ಮತದಾರರ ಪಟ್ಟಿ ಅನುಸಾರ 18ರಿಂದ 20 ವರ್ಷ ವಯಸ್ಸಿನ 9,925 ಹೊಸ ಮತದಾರರಿದ್ದು, ಪರಿಷ್ಕರಣೆಯ ಸಂದರ್ಭ 21,000 ಮಂದಿಯಿಂದ ಅರ್ಜಿ ಬಂದಿದೆ. ಅದನ್ನು ಪರಿಶೀಲನೆ ಮಾಡಲಾಗುತ್ತಿದೆ. ಎರಡೆರಡು ಕ್ಷೇತ್ರಗಳಲ್ಲಿ ಮತದಾರರ ಚೀಟಿಯನ್ನು ಹೊಂದಿದ 27 ಪ್ರಕರಣಗಳನ್ನು ಗುರುತಿಸಲಾಗಿದೆ. ದ.ಕ. ಜಿಲ್ಲೆಯಲ್ಲಿ ಮತದಾರರ ಹೆಸರು ಡಿಲೀಟ್‌ ಆಗಿರುವ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ. ಈಗಾಗಲೇ ರಾಜಕೀಯ ಪಕ್ಷಗಳಿಂದ ಕರಡು ಮತದಾರರ ಪಟ್ಟಿ ಪರಿಶೀಲಿಸಿ ಅರ್ಹ ಮತದಾರರು ಇರುವುದನ್ನು ಖಾತರಿಪಡಿಸಲು ಸೂಚಿಸಲಾಗಿದೆ. ಚುನಾವಣೆ ದಿನದಂದು ಯಾವುದೇ ರೀತಿಯ ಗೊಂದಲಕ್ಕೆ ಆಸ್ಪದ ನೀಡದ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದೂ ಅವರು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.