ಕೆಎಸ್‌ಆರ್‌ಟಿಸಿಯಿಂದ ಎಲೆಕ್ಟ್ರಿಕ್‌ ಬಸ್‌ ಚಿಂತನೆ

ವಿದೇಶಿ ಮೂಲದ ಕಂಪೆನಿ ಸಹಯೋಗ ಶೂನ್ಯ ಬಂಡವಾಳದಡಿ ಕಾರ್ಯಾರಂಭ

Team Udayavani, Sep 11, 2019, 5:42 AM IST

t-55

ಮಂಗಳೂರು: ದೇಶದೆಲ್ಲೆಡೆ ಎಲೆಕ್ಟ್ರಿಕ್‌ ವಾಹನಗಳ ಬಗ್ಗೆ ಭಾರೀ ಚರ್ಚೆ ನಡೆಯುತ್ತಿರಬೇಕಾದರೆ ದೇಶದಲ್ಲೇ ನಂಬರ್‌ ವನ್‌ ಸಾರಿಗೆ ಎಂದು ಕರೆಸಿಕೊಂಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಶೂನ್ಯ ಬಂಡವಾಳದಲ್ಲಿ ಎಲೆಕ್ಟ್ರಿಕ್‌ ಹೈಬ್ರಿಡ್‌ ಬಸ್‌ಗಳನ್ನು ವಿವಿಧ ಭಾಗಗಳಿಂದ ಕಾರ್ಯಾಚರಣೆ ನಡೆಸಲು ಚಿಂತನೆ ನಡೆಸುತ್ತಿದೆ.

ಈ ವಿಚಾರಕ್ಕೆ ಸಂಬಂಧಿಸಿ ವಿದೇಶಿ ಮೂಲದ ಕಂಪೆನಿಯೊಂದರ ಜತೆ ರಾಜ್ಯ ಸರಕಾರವು ಮಾತುಕತೆ ನಡೆಸಿದ್ದು, ಎಲ್ಲವೂ ಅಂದುಕೊಂಡಂತೆ ಆದರೆ ಕೆಲವೇ ತಿಂಗಳಲ್ಲಿ ಈ ಯೋಜನೆಗೆ ಅಧಿಕೃತವಾಗಿ ಅಂಕಿತ ಬೀಳಲಿದೆ. ನೂತನ ಪ್ರಸ್ತಾವದ ಪ್ರಕಾರ ವಿದೇಶಿ ಮೂಲದ ಕಂಪೆನಿಯೊಂದು ಹಣ ಹೂಡಲು ಮುಂದಾಗಿದ್ದು, ಬಸ್‌ ಖರೀದಿ, ನಿರ್ವಹಣೆ ಅವರದ್ದೇ ಜವಾಬ್ದಾರಿಯಾಗಿರುತ್ತದೆ. ನಿರ್ವಾಹಕ, ಚಾಲಕರ ನೇಮಕಾತಿ ಜವಾಬ್ದಾರಿಯನ್ನು ಮಾತ್ರ ಕೆಎಸ್ಸಾರ್ಟಿಸಿ ವಹಿಸಲಿದೆ. ಸಿಬಂದಿ ಸಂಬಳವನ್ನು ಆ ಸಂಸ್ಥೆಯೇ ನೀಡಲಿದೆ.

ವಿದೇಶಿ ಮೂಲದ ಕಂಪೆನಿಯು ಈಗಾಗಲೇ ದೇಶದ ವಿವಿಧ ರಾಜ್ಯ ಗಳಿಗೆ ಈ ಪ್ರಸ್ತಾವವನ್ನು ಮುಂದಿ ಟ್ಟಿದ್ದು, ರಾಜ್ಯದ ನೂತನ ಸಾರಿಗೆ ಸಚಿವರ ಬಳಿಯೂ ಮಾತುಕತೆ ನಡೆಸಿದೆ. ಶೇ. 60ರಷ್ಟು ಆದಾಯ ಕೆಎಸ್ಸಾರ್ಟಿಸಿಗೆ ಮತ್ತು ಶೇ. 40ರಷ್ಟನ್ನು ಆ ಸಂಸ್ಥೆಗೆ ನೀಡುವ ಪ್ರಸ್ತಾಪವಾಗಿದೆ. ಸಾಧ್ಯಾಸಾಧ್ಯತೆಗಳ ಬಗ್ಗೆ ಸದ್ಯ ಸರಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ.

“ಫೇಮ್‌’ಯೋಜನೆಯಲ್ಲಿ 50 ಬಸ್‌
“ಶೂನ್ಯ ಬಂಡವಾಳದ ಯೋಜನೆ ಒಂದೆಡೆಯಾದರೆ, ಕೇಂದ್ರ ಬೃಹತ್‌ ಕೈಗಾರಿಕೆಗಳ ಸಚಿವಾಲಯವು “ಫೇಮ್‌’ ಯೋಜನೆಯ ಎರಡನೇ ಹಂತದಲ್ಲಿ ಕೆಎಸ್ಸಾರ್ಟಿಸಿಗೆ 50 ಎಲೆಕ್ಟ್ರಿಕ್‌ ಬಸ್‌ಗೆ ಸಹಾಯ ಧನ ನೀಡಲು ಈಗಾಗಲೇ ಒಪ್ಪಿಗೆ ಸೂಚಿಸಿದೆ. ಫೇಮ್‌ ಯೋಜನೆಯ ಮುಖೇನ ನಗರ ಮತ್ತು ಅಂತರ್‌ ನಗರ ಸಾರಿಗೆ ಸೇವೆಗೂ ಸಹಾಯಧನ ನೀಡಲು ನಿರ್ದರಿಸಿದ್ದು, ಗುತ್ತಿಗೆ ಮಾದರಿಯಲ್ಲಿ ಎಲೆಕ್ಟ್ರಿಕ್‌ ಬಸ್‌ ಪಡೆದು ಕಾರ್ಯಾಚರಣೆ ಮಾಡಬೇಕಿದೆ. ಸದ್ಯವೇ ಟೆಂಡರ್‌ ಪ್ರಕ್ರಿಯೆ ನಡೆಸಲಾಗುವುದು’ ಎಂದು ಕೆಎಸ್ಸಾರ್ಟಿಸಿ ಅಧಿಕಾರಿ “ಉದಯವಾಣಿ’ಗೆ ತಿಳಿಸಿದ್ದಾರೆ.

ಅಸ್ಸಾಂನಲ್ಲಿ ಪ್ರಯೋಗ
ವಿದೇಶಿ ಕಂಪೆನಿಯ ಸಹಯೋಗದೊಂದಿಗೆ ಶೂನ್ಯ ಬಂಡವಾಳದಲ್ಲಿ ಅಸ್ಸಾಂ ರಾಜ್ಯದ ಸಾರಿಗೆ ನಿಗಮವು ಬಸ್‌ ಕಾರ್ಯಾಚರಣೆ ನಡೆಸಲು ಸದ್ಯ ಮುಂದಾಗಿದೆ. ಅಲ್ಲಿನ ವ್ಯವಸ್ಥೆಯನ್ನು ನೋಡಿಕೊಂಡು ಕೆಎಸ್ಸಾರ್ಟಿಸಿ ಈ ರೀತಿಯ ಎಲೆಕ್ಟ್ರಿಕ್‌ ಬಸ್‌ ಸೇವೆ ಪ್ರಾರಂಭಿಸುವತ್ತ ಗಮನಹರಿಸಲಿದೆ.

ಕಾರ್ಯಾಚರಣೆಯ ಬಗ್ಗೆ ವಿದೇಶಿ ಕಂಪೆನಿಯೊಂದಿಗೆ ಮಾತುಕತೆ ನಡೆದಿದೆ. ಯೋಜನೆಯ ಸಾಧ್ಯಾಸಾಧ್ಯತೆ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಇದರ ಪ್ರಕಾರ ವ್ಯವಹಾರದ ಶೇ. 60ರಷ್ಟು ನಮ್ಮ ನಿಗಮಕ್ಕೆ ಮತ್ತು ಶೇ. 40ರಷ್ಟು ವಿದೇಶಿ ಕಂಪೆನಿಗೆ ಬಂಡವಾಳ ಹಂಚಿಹೋಗಲಿದೆ.
– ಲಕ್ಷ್ಮಣ ಸವದಿ, ಸಾರಿಗೆ ಸಚಿವ

– ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.