ಯೂನಿಟ್‌ಗೆ 62 ಪೈಸೆ ಏರಿಕೆ ಪ್ರಸ್ತಾವ; ತೀವ್ರ ವಿರೋಧ

ಕೆಆರ್‌ಇಸಿಯಿಂದ ಸಾರ್ವಜನಿಕ ವಿಚಾರಣೆ

Team Udayavani, Feb 14, 2020, 6:15 AM IST

unit-62-paise

ಮಂಗಳೂರು: ಮಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ (ಮೆಸ್ಕಾಂ) 346.09 ಕೋ.ರೂ. ಆದಾಯ ಕೊರತೆ ಎದುರಿಸುತ್ತಿದ್ದು, ಅದನ್ನು ಸರಿದೂಗಿಸಲು ಪ್ರತಿ ಯೂನಿಟ್‌ಗೆ 62 ಪೈಸೆಯಷ್ಟು ದರ ಏರಿಸುವಂತೆ ಕೋರಿ ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ರೈತರು, ಕೈಗಾರಿಕಾ ಕ್ಷೇತ್ರದ ಪ್ರಮುಖರು ಹಾಗೂ ಸಾರ್ವಜನಿಕರು ಇದನ್ನು ವಿರೋಧಿಸಿದ್ದು, ದರ ಏರಿಕೆ ಮಾಡಬಾರದು ಎಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಆಯೋಗವು ಸೂಕ್ತ ತೀರ್ಮಾನ ಕೈಗೊಂಡು ನಿರ್ಧಾರ ಪ್ರಕಟಿಸಲಿದೆ ಎಂದು ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗದ ಅಧ್ಯಕ್ಷ ಶಂಭು ದಯಾಳ್‌ ಮೀನಾ ತಿಳಿಸಿದ್ದಾರೆ.

ವಿದ್ಯುತ್‌ ದರ ಪರಿಷ್ಕರಣೆ ಕುರಿತು ಗುರುವಾರ ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗದಿಂದ ವಿಚಾರಣಾ ಸಭೆ ನಡೆಯಿತು. ಶಂಭು ದಯಾಳ್‌ ಮೀನಾ ಅಧ್ಯಕ್ಷತೆ ವಹಿಸಿದ್ದು, ಸದಸ್ಯರಾದ ಎಚ್‌.ಎನ್‌. ಮಂಜುನಾಥ್‌ ಮತ್ತು ಎಂ.ಡಿ. ರವಿ ಉಪಸ್ಥಿತರಿದ್ದರು.

ದರ ಏರಿಸಲು ಅನುಮತಿಸುವಂತೆ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಸ್ನೇಹಲ್‌ ಆರ್‌. ಪ್ರಸ್ತಾವನೆ ಮಂಡಿಸಿದರು. ವಿದ್ಯುತ್‌ ಖರೀದಿ ವೆಚ್ಚದಲ್ಲಿನ ಏರಿಕೆ ಹಾಗೂ ಹಣದುಬ್ಬರದ ಕಾರಣ ನಿರ್ವಹಣಾ ವೆಚ್ಚದಲ್ಲಿ ಏರಿಕೆ ಆಗಿರುವುದರಿಂದ ವಿದ್ಯುತ್‌ ದರ ಏರಿಕೆಗೆ ಅವಕಾಶ ನೀಡುವಂತೆ ಕೋರಿದರು.

ಕೃಷಿ ಪಂಪ್‌ಸೆಟ್‌ ಹೆಸರಲ್ಲಿ ಸೋರಿಕೆ
ಉಡುಪಿಯ ಸತ್ಯನಾರಾಯಣ ಉಡುಪ ಮಾತನಾಡಿ, ಕೃಷಿ ಪಂಪ್‌ಸೆಟ್‌ಗಳ ಹೆಸರಿನಲ್ಲಿ ವಿದ್ಯುತ್‌ ಸೋರಿಕೆ ಭಾರೀ ಪ್ರಮಾಣದಲ್ಲಿ ನಡೆಯುತ್ತಿದೆ. ಇದಕ್ಕಾಗಿ ಐಪಿ ಪಂಪ್‌ಸೆಟ್‌ಗಳ ಮೀಟರೀಕರಣ ನಡೆಯಬೇಕು. ರೈತರು ಇದನ್ನು ಮುಕ್ತವಾಗಿ ಒಪ್ಪಿಕೊಳ್ಳುತ್ತೇವೆ. ಲೈನ್‌ಮನ್‌ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಸಮಸ್ಯೆಯಾಗುತ್ತಿದೆ. ಬಂಡವಾಳ ಹೂಡಿ ಅದರಿಂದ ಪ್ರತಿಫಲವೇ ಇಲ್ಲದಿದ್ದರೆ ಅಂತಹ ಬಂಡವಾಳ ಹಾಕುವ ಯೋಜನೆಯ ಮೂಲಕ ಗ್ರಾಹಕರಿಗೆ ಹೊರೆ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಕೆಲವು ವಿದ್ಯುತ್‌ ಗುತ್ತಿಗೆದಾರರಿಂದ ರೈತರಿಗೆ ಸಮಸ್ಯೆಯಾಗುತ್ತಿದ್ದು, ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ. ಇದಕ್ಕೆ ಪರಿಹಾರವಾಗಿ ಮೆಸ್ಕಾಂ ಆಡಳಿತ ವ್ಯವಸ್ಥೆಯನ್ನು ನೇರವಾಗಿ ಜನರ ಬಳಿಗೆ ಮುಟ್ಟಿಸಬೇಕು ಎಂದರು.

ಐಸ್‌ಪ್ಲಾಂಟ್‌ ವಿವರ ನೀಡಿ
ಕರಾವಳಿ ಐಸ್‌ಪ್ಲಾಂಟ್‌ ಮಾಲಕರ ಸಂಘದ ರಾಜೇಂದ್ರ ಸುವರ್ಣ ಮಾತನಾಡಿ, ಮೀನುಗಾರಿಕೆಯನ್ನೇ ನಂಬಿರುವ ಐಸ್‌ ಪ್ಲಾಂಟ್‌ಗಳು ಮೀನುಗಾರಿಕೆ ಕಡಿಮೆ ಆಗಿ ನಷ್ಟದಲ್ಲಿವೆ. ವಿದ್ಯುತ್‌ ದರ ಹೆಚ್ಚಳವಾದರೆ ಮತ್ತಷ್ಟು ಹೊಡೆತ ನೀಡಿದಂತಾಗುತ್ತದೆ. ಐಸ್‌ಪ್ಲಾಂಟ್‌ಗಳಿಗೆ ಪ್ರತ್ಯೇಕ ದರ ನಿಗದಿ ಪಡಿಸಬೇಕು ಎಂದರು. ಈ ಭಾಗದಲ್ಲಿ ಎಷ್ಟು ಐಸ್‌ಪ್ಲಾಂಟ್‌ಗಳಿವೆ ಎಂಬ ಬಗ್ಗೆ ವಿವರ ಒದಗಿಸುವಂತೆ ಕಳೆದ ವರ್ಷ ಹೇಳಿದ್ದರೂ ಅದನ್ನು ಯಾಕೆ ನೀಡಿಲ್ಲ ಎಂದು ಅಧ್ಯಕ್ಷ ಶಂಭು ದಯಾಳ್‌ ಮೀನಾ ಪ್ರಶ್ನಿಸಿದರು.

ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಪ್ರಮುಖರು ಮಾತನಾಡಿ, ಕೈಗಾರಿಕೆಗಳಿಗೆ ಕಡಿಮೆ ದರದಲ್ಲಿ ವಿದ್ಯುತ್‌ ನೀಡುವಂತೆ ಕೋರಿದರು. ಭಾರತೀಯ ಕಿಸಾನ್‌ ಸಭಾದ ಪರಮೇಶ್ವರಪ್ಪ ಮಾತನಾಡಿ, ಲೈನ್‌ಮನ್‌ ಮೂಲಕ ಬಿಲ್‌ ಕಲೆಕ್ಟ್ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿ, ಹಗಲು ಹೊತ್ತಲ್ಲೇ 3 ಫೇಸ್‌ ವಿದ್ಯುತ್‌ ರೈತರಿಗೆ ನೀಡಿ ಎಂದರು. ಎಂಎಸ್‌ಇಝಡ್‌ ಪರವಾಗಿ ಸೂರ್ಯನಾರಾಯಣ ಅಹವಾಲು ಸಲ್ಲಿಸಿದರು.
ಪ್ರಮುಖರಾದ ಹನೀಫ್‌, ಈಶ್ವರ್‌ ರಾಜ್‌, ಸೋಹನ್‌ಬಾಬು, ಬಂಟ್ವಾಳದ ಲಕ್ಷ್ಮೀನಾರಾಯಣ ಅಹವಾಲು ಮಂಡಿಸಿದರು.

ಏರಿಕೆಯಲ್ಲ ; 92 ಪೈಸೆ ಇಳಿಕೆ ಸಾಧ್ಯ!
ಸಾಗರದ ವೆಂಕಟಗಿರಿ ಮಾತನಾಡಿ, ಸಾರ್ವಜನಿಕ ಉದ್ದೇಶದ ಕಾಯ್ದೆಯಡಿ ನೋಂದಣಿ ಪಡೆದ ಶಿಕ್ಷಣ ಸಂಸ್ಥೆ, ಆಸ್ಪತ್ರೆಗಳು ಕಡಿಮೆ ದರದ ವಿದ್ಯುತ್‌ ಪಡೆದು ದುರುಪಯೋಗ ಮಾಡುತ್ತಿವೆ. ಇದಕ್ಕೆ ಸೂಕ್ತ ನಿಯಮಾವಳಿ ರೂಪಿಸಬೇಕಿದೆ. ಟ್ರಾನ್ಸ್‌ಫಾರ್ಮರ್‌ ಸಮಸ್ಯೆ ನೀಗಿಸಬೇಕು. ಗ್ರಾಹಕ ಸೇವಾ ಕೇಂದ್ರವನ್ನು ಇನ್ನಷ್ಟು ಪರಿಣಾಮಕಾರಿಯಾಗಿಸಿ. ಸೋಲಾರ್‌ ವಿದ್ಯುತ್‌ ಪ್ರಮಾಣ ಹೆಚ್ಚುಮಾಡಲು ಖರೀದಿ ದರ ಏರಿಸಬೇಕು ಹಾಗೂ ಮೆಸ್ಕಾಂಗೆ ಸರಕಾರ ಹಾಗೂ ಬೇರೆ ಬೇರೆ ಮೂಲಗಳಿಂದ ಬರಲು ಬಾಕಿ ಇರುವ 1,700 ಕೋ.ರೂ. ವಸೂಲಿ ಮಾಡಬೇಕು. ಇವೆಲ್ಲವೂ ಸಾಧ್ಯವಾದಾಗ ಮೆಸ್ಕಾಂಗೆ ಈಗ ವಿಧಿಸುತ್ತಿರುವ ದರಕ್ಕಿಂತಲೂ 92 ಪೈಸೆಯಷ್ಟು ಕಡಿಮೆ ಮಾಡುವ ಸಾಮರ್ಥ್ಯ ಬರುತ್ತದೆ ಎಂದರು.

ವಾರದಲ್ಲಿ 2 ದಿನ ತನಿಖೆ
ಆಯೋಗದ ಅಧ್ಯಕ್ಷ ಶಂಭು ದಯಾಳ್‌ ಮೀನಾ ಮಾತನಾಡಿ, ಟ್ರಾನ್ಸ್‌ ಫಾರ್ಮರ್‌ ಸಮಸ್ಯೆ ಹಾಗೂ ಗ್ರಾಹಕರ ಆದ್ಯತಾ ವಿಷಯ ಗಳು ಕಾರ್ಯ ನಿರ್ವಹಿಸುತ್ತಿವೆಯೇ ಎಂಬ ಬಗ್ಗೆ ಪ್ರತೀ ವಾರದ ಎರಡು ದಿನ ಉನ್ನತ ಅಧಿಕಾರಿಗಳು ಗ್ರಾಮಾಂತರ ಸಹಿತ ಎಲ್ಲೆಡೆ ತನಿಖೆ ನಡೆಸಬೇಕು. ಇದು ಸಾಧ್ಯವಾದರೆ ವಿದ್ಯುತ್‌ ಸಮಸ್ಯೆಗಳಿಗೆ ಪರಿಹಾರ ಸಾಧ್ಯ ಎಂದರು.

ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಸ್ನೇಹಲ್‌ ಆರ್‌. ಮಾತನಾಡಿ, ವಾರದಲ್ಲಿ ಎರಡು ದಿನ ತನಿಖೆಗೆ ಸೂಚಿಸಲಾ ಗುವುದು. ಕೃಷಿಕರ ಐಪಿ ಪಂಪ್‌ಸೆಟ್‌ಗಳಿಗೆ ಮೀಟರಿಂಗ್‌ ಸಂಬಂಧವೂ ಮಾತುಕತೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾ ಗುವುದು. ಗ್ರಾಹಕರ ಜತೆಗೆ ಉತ್ತಮವಾಗಿ ವ್ಯವಹರಿಸಲು ಸಿಬಂದಿಗೆ ವಿಶೇಷ ತರಬೇತಿ ನೀಡಲಾಗುವುದು ಎಂದರು.

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.