ವಿಟ್ಲ : ವಿದ್ಯುತ್‌ ಕಣ್ಣಾಮುಚ್ಚಾಲೆ, ಪ್ರತಿದಿನವೂ ಕತ್ತಲೆ


Team Udayavani, Jul 4, 2017, 3:30 AM IST

Electricity-Distribution-900.jpg

ವಿಟ್ಲ: ವಿಟ್ಲ ಮೆಸ್ಕಾಂ ಉಪ ವಿಭಾಗದಲ್ಲಿ ಮಳೆಗಾಲ ಆರಂಭವಾದಂದಿನಿಂದ ವಿದ್ಯುತ್‌ ಕಣ್ಣಾಮುಚ್ಚಾಲೆಯಾಡುತ್ತಿದೆ. ಪ್ರತಿದಿನವೂ ಕತ್ತಲೆ ಆವರಿಸುತ್ತಿದೆ. ಇದು ಸಾರ್ವಜನಿಕರ ತೀರಾ ಅಸಮಾಧಾನಕ್ಕೆ ಕಾರಣವಾಗಿದೆ. ರವಿವಾರ ಹಗಲು -ರಾತ್ರಿ ವಿದ್ಯುತ್‌ ಕಡಿತವಾಗುತ್ತಿತ್ತು. ಕೆಲ ಗಂಟೆಗಳ ಅವಧಿಯಲ್ಲಿ ಹತ್ತಾರು ಬಾರಿ ವಿದ್ಯುತ್‌ ಕಡಿತವಾಗುತ್ತಿತ್ತು. ಮೆಸ್ಕಾಂಗೆ ಗ್ರಾಹಕರು ಕರೆ ನೀಡಿದಾಗ ಲೈನ್‌ ಫಾಲ್ಟ್ ಎಂಬ ಉತ್ತರ ಸಿಗುತ್ತದೆ. ವಯರ್‌ ಕಟ್‌, ಪಿನ್‌ ಕಟ್‌ ಮತ್ತು ಇದಕ್ಕೆ ಸಂಬಂಧಪಟ್ಟ ಸಾಮಗ್ರಿಗಳ ಗುಣಮಟ್ಟ ಸರಿಯಿಲ್ಲ ಎನ್ನಲಾಗುತ್ತಿದೆ.

ಪರಿವರ್ತಕ ಓವರ್‌ಲೋಡ್‌ ವಿಟ್ಲಮೇಗಿನಪೇಟೆಯಲ್ಲಿ 250 ಕೆವಿಎ ಸಾಮರ್ಥ್ಯದ ಪ್ರಧಾನ ವಿದ್ಯುತ್‌ ಟ್ರಾನ್‌ಫಾರ್ಮರ್‌ ಇದೆ. ಇದು ಓವರ್‌ಲೋಡ್‌ ಆಗಿದೆ. ಅಂದರೆ ಸುಮಾರು 350 ಕೆವಿಎವರೆಗೆ ಲೋಡ್‌ ಬೀಳುತ್ತಿದೆ. ಪರಿಣಾಮವಾಗಿ ಆಗಾಗ ಟ್ರಿಪ್‌ ಆಗುತ್ತಿದೆ. ವಿದ್ಯುತ್‌ ಕಣ್ಣಾಮುಚ್ಚಾಲೆಯಾಡಲು ಇದೂ ಒಂದು ಸಮಸ್ಯೆಯಾಗಿರಬೇಕು ಎನ್ನಲಾಗುತ್ತಿದೆ. ವಾಸ್ತವವಾಗಿ ಈ ಪರಿವರ್ತಕ ಒಮ್ಮೆ ಸುಟ್ಟುಹೋಗಿತ್ತು. ಆ ಬಳಿಕವೂ ಇದರ ಲೋಡನ್ನು ಮತ್ತೂಂದು ಪರಿವರ್ತಕ ಸ್ಥಾಪಿಸಿ, ಅದಕ್ಕೆ ವರ್ಗಾಯಿಸಬೇಕಾಗಿತ್ತು. ಆದರೆ ಆ ಕಾರ್ಯವನ್ನೂ ಮಾಡಲಿಲ್ಲ.

ಕ್ಯಾಂಪ್ಕೋ ಬಳಿ 100 ಕೆವಿಎ ಪರಿವರ್ತಕ
ವಿಟ್ಲ ಬಸ್‌ ನಿಲ್ದಾಣದ ಬಳಿ ಕ್ಯಾಂಪ್ಕೋ ಶಾಖೆಯಿದೆ. ಅದರ ಪಕ್ಕದಲ್ಲಿ 100 ಕೆವಿಎ ಪರಿವರ್ತಕ ಸ್ಥಾಪಿಸಲು ಮೆಸ್ಕಾಂ ಚಿಂತನೆ ನಡೆಸಿದೆ. ಆದರೆ ಅದಕ್ಕೆ ಎಸ್ಟಿಮೇಟ್‌ ಆಗಿದೆ. ಮತ್ತು ಇನ್ನೊಂದು ಪರಿವರ್ತಕ ಸ್ಥಾಪನೆಯ ಬಗ್ಗೆಯೂ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಕಾರ್ಯ ಆಮೆಗತಿಯಲ್ಲಿ ಸಾಗುತ್ತಿದೆಯೋ ಗೊತ್ತಿಲ್ಲ. ಬೇಗನೆ ಸಾಗಿದರೆ ವಿಟ್ಲ ಪೇಟೆಯಲ್ಲಿ ವಿದ್ಯುತ್‌ ಕಣ್ಣಾಮುಚ್ಚಾಲೆ ಕಡಿಮೆಯಾಗಬಹುದು ಎನ್ನಲಾಗುತ್ತಿದೆ. ವಿಟ್ಲ ಪೇಟೆಯಲ್ಲಿ ಪರಿವರ್ತಕವನ್ನು ಸ್ಥಾಪಿಸಲು ಸ್ಥಳಾವಕಾಶವೂ ಇಲ್ಲ, ಸಹಕಾರವೂ ಇಲ್ಲವೆಂದು ಮೆಸ್ಕಾಂ ಅಧಿಕಾರಿಗಳು ದೂರುತ್ತಿದ್ದಾರೆ.

ಪುತ್ತೂರು ರಸ್ತೆ ಕಂಬಗಳ ಸ್ಥಳಾಂತರವಾಗಿಲ್ಲ
ವಿಟ್ಲ ಜಂಕ್ಷನ್‌ನಿಂದ ಪುತ್ತೂರು ರಸ್ತೆಯವರೆಗೆ 7 ವಿದ್ಯುತ್‌ ಕಂಬಗಳು ರಸ್ತೆಯ ಬದಿಯಲ್ಲೇ ಇವೆ. ಕಳೆದ ಏಳು ವರ್ಷಗಳಿಂದ ಸ್ಥಳೀಯರು ಇವುಗಳನ್ನು ಸ್ಥಳಾಂತರಗೊಳಿಸಬೇಕು ಎನ್ನುತ್ತಿದ್ದಾರೆ. ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ನಿತ್ಯ ಟ್ರಾಫಿಕ್‌ ಜಾಮ್‌ಗೆ ಇದೊಂದು ಪ್ರಮುಖ ಕಾರಣವಾಗಿದೆ. ಅರಮನೆ ರಸ್ತೆಯ 9 ಕಂಬಗಳನ್ನು ಸ್ಥಳಾಂತರಿಸಿದಂತೆ ಇವುಗಳನ್ನೂ 11 ಮೀಟರ್‌ ಎತ್ತರದ ಸ್ಪನ್‌ ಪೋಲ್‌ಗ‌ಳನ್ನು ಅಳವಡಿಸಿ, ಸಮಸ್ಯೆ ಬಗೆ ಹರಿಸಬೇಕೆಂದು ನಾಗರಿಕರ ಒತ್ತಾಯವಿದೆ. ಆದರೆ ಮೆಸ್ಕಾಂ ಎಸ್ಟಿಮೇಟ್‌ ತಯಾರಿಸಿಲ್ಲ. ಲೋಕೋಪಯೋಗಿ ಇಲಾಖೆ ಹಣ ಬಿಡುಗಡೆ ಮಾಡುವ ಭರವಸೆ ನೀಡಿದ ಬಳಿಕ ಎಸ್ಟಿಮೇಟ್‌ ತಯಾರಿಸುತ್ತೇವೆ ಎಂದು ಮೆಸ್ಕಾಂ ಅಧಿಕಾರಿಗಳು ಹೇಳುತ್ತಾರೆ. ಈ ಸಂಕಷ್ಟದಿಂದ ಕಂಬಗಳು ಸ್ಥಳಾಂತರವಾಗುತ್ತಿಲ್ಲ. ಅಂಗಡಿ ಮಾಲಕರು ತಮ್ಮ ಅಂಗಡಿಗಳ ಮುಂಭಾಗ ಕೆಡವಿ ವರ್ಷಗಟ್ಟಲೆ ಕಳೆದು ಹೋದರೂ ಕಂಬ ಸ್ಥಳಾಂತರ ಮಾಡಿಲ್ಲ ಎಂದು ದೂರಿದ್ದಾರೆ.

ಹಳ್ಳಿಯಲ್ಲಿ  ಹೀನಾಯ ಸ್ಥಿತಿ
ವಿಟ್ಲ ಪೇಟೆಯಲ್ಲಿ ವಿದ್ಯುತ್‌ ಪರಿಸ್ಥಿತಿ ಶೋಚನೀಯವಾಗಿದ್ದು ಗ್ರಾಮೀಣ ಪ್ರದೇಶದಲ್ಲಿ ಹೀನಾಯವಾಗಿದೆ. ವಿದ್ಯುತ್‌ ಕಡಿತದಿಂದ ಹಳ್ಳಿಗರು ಕಂಗಾಲಾಗಿದ್ದಾರೆ. ಈ ಬಾರಿ ಬೇಸಗೆಯಲ್ಲಿ ವಿದ್ಯುತ್‌ ಕಡಿತದ ಸಮಸ್ಯೆ ಇರಲಿಲ್ಲ. ಮಳೆಗಾಲದಲ್ಲೇ ವಿದ್ಯುತ್‌ ಇಲ್ಲ. ಅತ್ಯಂತ ಶೋಚನೀಯ ಪರಿಸ್ಥಿತಿಗೆ ಸ್ಪಂದನವಿಲ್ಲ ಎಂದು ಹಳ್ಳಿಗರು ದೂರುತ್ತಿದ್ದಾರೆ. ರಾತ್ರಿ ವಿದ್ಯುತ್‌ ಕಡಿತ ಸಂಭವಿಸಿದರೆ ಮರುದಿನ ಬೆಳಗ್ಗೆ ಅಥವಾ ಮಧ್ಯಾಹ್ನ ವಿದ್ಯುತ್‌ ಪ್ರತ್ಯಕ್ಷವಾಗುತ್ತದೆ. ಪ್ರತೀ ಬುಧವಾರ ನಿರ್ವಹಣೆಗಾಗಿ ವಿದ್ಯುತ್‌ ಕಡಿತ ಮಾಡಲಾಗುತ್ತಿತ್ತು. ಆಗಿನ ನಿರ್ವಹಣ ಕಾಮಗಾರಿ ಸಮರ್ಪಕವಾಗಿರಲಿಲ್ಲವೇ ಎಂದು ನಾಗರಿಕರು ಪ್ರಶ್ನಿಸುತ್ತಿದ್ದಾರೆ.

– ಉದಯಶಂಕರ್‌ ನೀರ್ಪಾಜೆ

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.