ಅರಸಿನಮಕ್ಕಿ ಹತ್ಯಡ್ಕದಲ್ಲಿ ತಾಳಮದ್ದಳೆ ವೇಳೆ ಕಾಡಾನೆ ಪ್ರತ್ಯಕ್ಷ !


Team Udayavani, Jan 8, 2018, 8:15 AM IST

Elephant-7-1.jpg

ಅರಸಿನಮಕ್ಕಿ: ಇಲ್ಲಿನ ಉದ್ಯಮಿಯೊಬ್ಬರ ಮನೆಯಲ್ಲಿ ಯಕ್ಷಗಾನ ತಾಳಮದ್ದಳೆ ನಡೆಯುತ್ತಿದ್ದ ವೇಳೆ ಮನೆಯ ಆವರಣ ಗೋಡೆಯ ಬಳಿ ಕಾಡಾನೆಯೊಂದು ಕಾಣಿಸಿಕೊಂಡು ಜನರಲ್ಲಿ ಆತಂಕ, ಕುತೂಹಲ ಹುಟ್ಟಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಅರಸಿಮಕ್ಕಿಯ ಹತ್ಯಡ್ಕದಲ್ಲಿ ನಡೆದಿದೆ. ಘಟನೆಯಿಂದಾಗಿ ಯಾವುದೇ ಅನಾಹುತ ಸಂಭವಿಸಿಲ್ಲವಾದರೂ ಹತ್ತಾರು ಮಂದಿಗೆ ಆನೆಯು ಒಮ್ಮೆಲೆ ದರ್ಶನ ನೀಡಿದ್ದು ಜನರನ್ನು ಕಂಗಾಲಾಗಿಸಿತು.

ಹಸ್ತಿನಾವತಿ ಎಂದಾಗ ಹಸ್ತಿ ಪ್ರತ್ಯಕ್ಷ !
ಸ್ಥಳೀಯ ಉದ್ಯಮಿ ಸುಧೀರ್‌ ಕುಮಾರ್‌ ಅವರು ತಮ್ಮ ಮನೆಯಲ್ಲಿ ರವಿವಾರ ಮಧ್ಯಾಹ್ನ ಸತ್ಯನಾರಾಯಣ ಪೂಜೆ ಹಾಗೂ ಮಧ್ಯಾಹ್ನದ ಅನಂತರ ಮನೆಯಂಗಳದಲ್ಲಿಯೇ ಸುಭದ್ರಾರ್ಜುನ ತಾಳಮದ್ದಳೆಯನ್ನು ಏರ್ಪಡಿಸಿದ್ದರು. 
ಅಪರಾಹ್ನ 3 ಗಂಟೆ ಸುಮಾರಿಗೆ ತಾಳಮದ್ದಳೆಯು ಆರಂಭವಾಯಿತು. ತಾಳಮದ್ದಳೆ ಪ್ರಾರಂಭವಾಗಿ ಸತ್ಯ
ಭಾಮೆ ಹಾಗೂ ಶ್ರೀಕೃಷ್ಣನ ಸಂವಾದ ನಡೆಯುತ್ತಿತ್ತು. ಹಸ್ತಿನಾವತಿಯ ರಾಜ ಕೌರವನಿಗೆ ಸುಭದ್ರೆಯನ್ನು ನೀಡಿ ವಿವಾಹ ಮಾಡಿಸುವ ಕುರಿತು ಬಲರಾಮನು ಯೋಚಿಸುತ್ತಿರುವ ಬಗ್ಗೆ ಶ್ರೀಕೃಷ್ಣನಲ್ಲಿ ತಿಳಿಸುತ್ತಿದ್ದಳು. ಕಾವ್ಯಶ್ರೀ ಅಜೇರು ಇವರ ಭಾಗವತಿಕೆಯಲ್ಲಿ ಹರೀಶ್‌ ಬೊಳಂತಿಮೊಗರು ಹಾಗೂ ಶೇಣಿ ಬಾಲಮುರಳಿಯವರು ಅರ್ಥವನ್ನು ನುಡಿಯುತ್ತಿದ್ದರು. ಸಾಕಷ್ಟು ಸಂಖ್ಯೆಯಲ್ಲಿದ್ದ ಯಕ್ಷಗಾನಾಸಕ್ತರು ತಾಳಮದ್ದಳೆಯನ್ನು ಆಸ್ವಾದಿಸುತ್ತಿದ್ದರು. ಇದೇ ಸಂದರ್ಭದಲ್ಲಿ ಹಸ್ತಿನಾವತಿಯ ರಾಜನಿಗೆ ಮದುವೆ ಮಾಡಿಕೊಡಬಾರದು ಎಂದು ಸತ್ಯಭಾಮೆ ನುಡಿಯುತ್ತಿದ್ದ ಸಂದರ್ಭದಲ್ಲೆ ದಿಢೀರನೆ ಅವರ ಮನೆಯ ಅಂಗಳದಲ್ಲಿ ವಾಹನಗಳ ನಿಲುಗಡೆಯ ಜಾಗದಲ್ಲಿ ಹಸ್ತಿ ಪ್ರತ್ಯಕ್ಷವಾಗಿದೆ. ಮನೆಯ ಯಜಮಾನರು ಹಾಗೂ ಹತ್ತಿರದಲ್ಲಿದ್ದವರು ಕಂಪೌಂಡ್‌ನೊಳಗೆ ಗಾಬರಿಯಿಂದ ಬಂದಿದ್ದು ಆ ಸಂದರ್ಭದಲ್ಲಿ ವಾಹನವನ್ನು ಪಾರ್ಕ್‌ ಮಾಡಲು ಬಂದವರು ಕೂಡ ಭೀತಿಯಿಂದ ಅಂಗಳದೊಳಕ್ಕೆ ಬಂದಿದ್ದಾರೆ. ಅನೇಕರು ಹಠಾತ್‌ ಪ್ರತ್ಯಕ್ಷವಾದ ಆನೆಯನ್ನು ಕಂಡು ಭೀತಿಗೊಳಗಾಗಿದ್ದಾರೆ. ಸಾಕಷ್ಟು ವಾಹನ, ಜನರನ್ನು ಕಂಡ  ಆನೆಯು ಮನೆಯ ಹಿತ್ತಲಿನಿಂದ ತೋಟಕ್ಕೆ ಹೋಗಿ ಕಾಡನ್ನು ಸೇರಿಕೊಂಡಿದೆ. ಗಜ ಪುರಾಣದಿಂದಾಗಿ ಸುಮಾರು ಹದಿನೈದು ನಿಮಿಷಗಳ ಕಾಲ ತಾಳಮದ್ದಳೆಯನ್ನು ನಿಲ್ಲಿಸಿ ಅನಂತರ ಮುಂದುವರಿಸಲಾಯಿತು. ತಾಳಮದ್ದಳೆಯಲ್ಲಿ ಹಲವಾರು ಬಾರಿ ಕಾಡಾನೆ ವಿಷಯ ಪ್ರಸ್ತಾಪವಾಗಿ ಹಾಸ್ಯದ ಹೊನಲು ಹರಿಯುವಂತಾಯಿತು.

ಕಾಡಾನೆ ಉಪಟಳ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದ್ದು ಶಿಶಿಲದಲ್ಲಿ ಶನಿವಾರ ಕಾಡಾನೆ ತೋಟವನ್ನು ಧ್ವಂಸಗೊಳಿಸಿದ್ದು ರವಿವಾರ ಇದೇ ಆನೆ ಬಂದಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.