ಮಂಡೆಕೋಲು: ಕಾಡಾನೆ ಹಿಂಡು
Team Udayavani, Dec 15, 2018, 9:42 AM IST
ಮಂಡೆಕೋಲು: ಕರ್ನಾಟಕ-ಕೇರಳ ಗಡಿಭಾಗದ ಮಂಡೆಕೋಲು ಗ್ರಾಮದ ವಿವಿಧೆಡೆ ಕಾಡಾನೆಗಳು ಬೀಡುಬಿಟ್ಟಿದ್ದು, ನಿರಂತರ ಕೃಷಿಕರ ತೋಟಗಳಿಗೆ ದಾಳಿ ಮಾಡುತ್ತ ಪರಿಸರದಲ್ಲಿ ಭೀತಿ ಸೃಷ್ಟಿಸುತ್ತಿವೆ.
ವಾರದ ಹಿಂದೆ ಮಂಡೆಕೋಲು ಗ್ರಾಮದಿಂದ ಪಯಸ್ವಿನಿ ನದಿದಾಟಿ ಕೇರಳದ ದೇಲಂಪಾಡಿ ಪರಿಸರದ ಪಂಜಿಕಲ್ಲು ಕಾಡಿಗೆ 9 ಆನೆಗಳು ಪ್ರವೇಶಿಸಿದ್ದವು. ಹಗಲಲ್ಲಿ ಮಂಡೆ ಕೋಲು ಅರಣ್ಯ ಭಾಗದಲ್ಲಿ ಬೀಡು ಬಿಟ್ಟಿದ್ದು, ರಾತ್ರಿ ವೇಳೆ ತೋಟಗಳಿಗೆ ನುಗ್ಗುತ್ತಿವೆ.
ವ್ಯಾಪಕ ಹಾನಿ
ಎರ್ಕಲ್ಪಾಡಿಯ ಸುಬ್ರಹ್ಮಣ್ಯ ಭಟ್ ಅವರ ತೋಟದ 25ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಉರುಳಿಸಿವೆ. ಹತ್ತಾರು ತೆಂಗು-ಬಾಳೆ ಗಿಡಗಳನ್ನು ನಾಶಪಡಿಸಿವೆ. ರಾಧಾಕೃಷ್ಣ ಹೆಬ್ಟಾರ್ ಅವರ ತೋಟಕ್ಕೆ 7 ಆನೆಗಳು ದಾಳಿಯಿಟ್ಟು 20ಕ್ಕೂ ಹೆಚ್ಚು ರಬ್ಬರ್ ಮರಗಳು ಹಾಗೂ ಐದು ಅಡಿಕೆ ಮರಗಳನ್ನು ನಾಶಪಡಿಸಿವೆ. ಅರಣ್ಯಾಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮಂಡೆಕೋಲು-ಅಜ್ಜಾವರ ಭಾಗದಲ್ಲಿ ಕಾಡು ಪ್ರದೇಶ ಹೆಚ್ಚಿರುವುದರಿಂದ ಆನೆ- ಚಿರತೆಗಳ ಹಾವಳಿ ಸಾಮಾನ್ಯವಾಗಿವೆ. ಸಾಕುಪ್ರಾಣಿಗಳು ಚಿರತೆಗಳ ಪಾಲಾದರೆ, ಕೃಷಿ ಫಸಲು ಆನೆಗಳ ಪಾಲಾಗುತ್ತಿವೆ. ರಾತ್ರಿ ವೇಳೆ ಸಂಚರಿಸಲು ಹೆದರಿಕೆಯಾಗುತ್ತಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.
ಶಾಶ್ವತ ಪರಿಹಾರಕ್ಕೆ ಆಗ್ರಹ
ಆನೆಗಳ ಹಾವಳಿ ವ್ಯಾಪಕವಾಗಿ ಇರುವಲ್ಲಿ ಅರಣ್ಯ ಇಲಾಖೆ ಕಂದಕವನ್ನು ನಿರ್ಮಿಸಿದ್ದರೂ ಅನೆಗಳು ಕಂದಕವನ್ನು ದಾಟಿ ಬರುತ್ತಿವೆ. ಸಮಸ್ಯೆಗೆ ಶಾಶ್ವತ ಪರಿಹಾರ ಬೇಕು ಎಂದು ಅಜ್ಜಾವರ ಗ್ರಾ.ಪಂ. ಮಾಜಿ ಸದಸ್ಯ ಚಂದ್ರಶೇಖರ್ ಅತ್ಯಾಡಿ ಆಗ್ರಹಿಸಿದ್ದಾರೆ.
ಆನೆಗಳು ದಾಳಿ ಮಾಡಿದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದೇವೆ. ಆನೆ ಹಾವಳಿ ಹೆಚ್ಚಾಗಿರುವ ಭಾಗಗಳಲ್ಲಿ ಪಿಲ್ಲರ್ ಅಳವಡಿಸಲು ಯೋಜಿಸಲಾಗಿದೆ. ಶೀಘ್ರದಲ್ಲಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ.
ಮಂಜುನಾಥ್, ವಲಯ ಅರಣ್ಯಾಧಿಕಾರಿ, ಸುಳ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ