ಪುಷ್ಪಗಿರಿ ವನ್ಯಧಾಮ ಜನವಸತಿ ಪ್ರದೇಶದಲ್ಲಿ ಕಾಡಾನೆ ಹಾವಳಿ


Team Udayavani, Feb 17, 2019, 3:54 AM IST

aane.jpg

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಪುಷ್ಪಗಿರಿ ವನ್ಯಧಾಮದ ತಪ್ಪಲಿನ ಜನವಸತಿ ಪ್ರದೇಶಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಅಧಿಕವಾಗಿದೆ. ನಾಡಿಗೆ ಇಳಿಯುತ್ತಿರುವ ಆನೆಗಳು ಬೆಳೆ ಹಾನಿಯ ಜತೆಗೆ ರಸ್ತೆಯಲ್ಲಿ ತೆರಳುವವರ ಮೇಲೆ ದಾಳಿಗೆ ಪ್ರಯತ್ನಿಸುತ್ತಿವೆ.

ಕೊಲ್ಲಮೊಗ್ರು, ಕಲ್ಮಕಾರು, ಹರಿಹರ, ಬಾಳುಗೋಡು, ಕಟ್ಟಗೋವಿಂದನಗರ ಮೊದಲಾದೆಡೆ ಒಂದು ವಾರದಿಂದ ನಿರಂತರವಾಗಿ ಕಾಡಾನೆಗಳು ತೋಟಗಳಿಗೆ ದಾಳಿ ನಡೆಸುತ್ತಿವೆ. ಈ ಭಾಗದ ಹಲವು ಮಂದಿಯ ತೋಟಗಳಲ್ಲಿ ಫಸಲು ನೆಲಸಮವಾಗಿದೆ.

ಗುರುವಾರ ಸಂಜೆ ಹರಿಹರ ಪಳ್ಳತ್ತಡ್ಕ ಗ್ರಾಮದ ಗುಂಡಿಹಿತ್ಲು ನಿವಾಸಿ ವಿಶ್ವನಾಥ ಮುಂಡೋಡಿ ಅವರು ಸಂಜೆ 6 ಗಂಟೆಗೆ ವೇಳೆಗೆ ತನ್ನ ಪುತ್ರಿಯ ಜತೆ ಬೈಕಿನಲ್ಲಿ ಮನೆಯತ್ತ ತೆರಳುತ್ತಿದ್ದಾಗ ರಸ್ತೆ ಬದಿ ಆನೆ ಕಾಣಿಸಿಕೊಂಡು ಅಟ್ಟಿಸಿಕೊಂಡು ಬಂದಿತ್ತು. ಅದೃಷ್ಟವಶಾತ್‌ ಅವರಿಬ್ಬರು ಪಾರಾಗಿದ್ದರು.

ಈ ಪರಿಸರದಲ್ಲಿ ಕಾಡಾನೆಗಳು ಬೀಡುಬಿಟ್ಟಿದ್ದು, ಸತತ ನಾಲ್ಕು ದಿನಗಳಿಂದ ಪಳ್ಳತ್ತಡ್ಕ, ಗುಂಡಿಹಿತ್ಲು ಪರಿಸರದ ಕೃಷಿಕರ ತೋಟಗಳಿಗೆ ದಾಳಿ ಮಾಡಿ ಫಸಲು ನಷ್ಟ ಉಂಟು ಮಾಡುತ್ತಿವೆ. ಸಂಜೆಯಾಗುತ್ತಲೇ ತೋಟ ಹಾಗೂ ರಸ್ತೆ ಬದಿ ಕಾಣಿಸಿಕೊಳ್ಳುತ್ತಿರುವುದರಿಂದ ನಾಗರಿಕರು ಓಡಾಡಲು ಭಯ ಪಡುತ್ತಿದ್ದಾರೆ.

ಬಾಳುಗೋಡಿನ ಕೊತ್ನಡ್ಕ, ಉಪ್ಪುಕಳ, ಕಾಂತು ಕುಮೇರಿ ಭಾಗದಲ್ಲಿ ಕೂಡ ಹಾವಳಿ ಹೆಚ್ಚಿದ್ದು, ಕೊತ್ನಡ್ಕ ಪರಿಸರದ ನಿವಾಸಿಯೊಬ್ಬರು ಸಂಜೆ ವೇಳೆಗೆ ಮನೆಗೆ ಹಿಂದಿರುಗುವಾಗ ಆನೆ ಅಟ್ಟಿಸಿಕೊಂಡು ಬಂದ ಘಟನೆ 3 ದಿನಗಳ ಹಿಂದೆ ನಡೆದಿತ್ತು. ಕಾಂತುಕುಮೇರಿ ಪರಿಸರದಲ್ಲಿ ನಿತ್ಯವೂ ಆನೆಗಳು ಕಾಣಿಸಿಕೊಳ್ಳುತ್ತಿವೆ.

ಬೆಂಡೋಡಿಯ ಕೃಷಿಕ ಭವಾನಿಶಂಕರ ಪಿಂಡಿ ಮನೆಯವರ ತೋಟವನ್ನು ಆನೆಗಳು ಹಾಳುಗೆಡವಿವೆ. ಕಲ್ಮಕಾರು ಭಾಗದ ಗೂನಡ್ಕ, ಗುಳಿಕಾನ, ಬಾಳೆಬೈಲು, ಕಟ್ಟಗೋವಿಂದನಗರ ಮೊದಲಾದ ಕಡೆಗಳಲ್ಲಿ ಹಾವಳಿ ವಿಪರೀತವಾಗಿದೆ. ಫಸಲು ನಷ್ಟ ಆಗಿ ಅನುಭವಿಸುತ್ತಿರುವ ನೋವನ್ನು ಅರಣ್ಯ ಇಲಾಖೆ ಬಳಿ ತೋಡಿಕೊಂಡರೆ ವ್ಯತಿರಿಕ್ತವಾಗಿ ಉತ್ತರಿಸುತ್ತಾರೆ ಎಂದು ಕಟ್ಟಗೋವಿಂದನಗರದ ಕೃಷಿಕ ಪ್ರಕಾಶ್‌ ಭಟ್‌ ಹೇಳುತ್ತಾರೆ. ವರ್ಷದ ಬಹುತೇಕ ಅವಧಿಯಲ್ಲಿ ಕಾಡಾನೆ ಉಪಟಳ ಇಲ್ಲಿ ಕಂಡುಬರುತ್ತಿದ್ದು ರೈತರನ್ನು ಹೈರಾಣಾಗಿಸಿದೆ. ಕೆಲವು ದಿನಗಳಿಂದ ಹಾವಳಿ ವ್ಯಾಪಕವಾಗಿದ್ದು ಸಂಜೆಯ ಬಳಿಕ ಓಡಾಡಲು ಜನರು ಹಿಂದೇಟು ಹಾಕುತ್ತಿದ್ದಾರೆ. ಶಾಲಾ ಮಕ್ಕಳು ತೆರಳುವ ವೇಳೆ ರಸ್ತೆಬದಿ ಆನೆಗಳು ಪ್ರತ್ಯಕ್ಷಗೊಂಡು ಭೀತಿ ಹುಟ್ಟಿಸುತ್ತಿವೆ. 

ಇತರ ಪ್ರಾಣಿಗಳ ಉಪಟಳವೂ ಹೆಚ್ಚಿದೆ
ಜಿಂಕೆ, ಸಾರಂಗ, ಮುಳ್ಳುಹಂದಿ, ಕಾಡುಹಂದಿಗಳು, ಚಿರತೆ ಹಾವಳಿ ಕೂಡ ಈ ಭಾಗಗಳಲ್ಲಿ ಹೆಚ್ಚಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕೃಷಿಕರು ಏನೂ ಮಾಡಲಾಗದೆ ಕಂಗಾಲಾಗಿದ್ದು, ಸ್ಥಳೀಯ ಆರ್ಥಿಕತೆಯ ಸ್ಥಿತಿ ಹದೆಗೆಟ್ಟಿದೆ. ಅರಣ್ಯ ಇಲಾಖೆ ಕೆಲವೆಡೆ ಆನೆ ಕಂದಕ ನಿರ್ಮಿಸಿದ್ದರೂ ಪ್ರಯೋಜನವಾಗಿಲ್ಲ. ದೂರು ನೀಡಿದರೂ ಅರಣ್ಯ ಇಲಾಖೆ ಮೌನ ವಹಿಸಿದೆ ಎಂದು ಕೃಷಿಕರು ದೂರುತ್ತಿದ್ದಾರೆ.

ದೇವಸ್ಥಾನಕ್ಕೂ ಜನ ಬರುತ್ತಿಲ್ಲ
ಹರಿಹರ ಪಳ್ಳತ್ತಡ್ಕ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವವು ಫೆ.16ರಿಂದ ಆರಂಭಗೊಳ್ಳಲಿದೆ. ಆನೆ ಭೀತಿಯಿಂದಾಗಿ ನಾಗರಿಕರು ದೇವಸ್ಥಾನದ ಕಡೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಬ್ರಹ್ಮಕಲಶೋತ್ಸವ ಸಂದರ್ಭದಲ್ಲಾದರೂ ಅರಣ್ಯ ಇಲಾಖೆ ಆನೆಗಳನ್ನು ಕಾಡಿಗೆ ಅಟ್ಟುವ ಕೆಲಸ ಮಾಡಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.

ಆನೆ ಹಿಂಬಾಲಿಸಿತ್ತು
ಸಂಜೆ ಮಗಳನ್ನು ಬೈಕಿನಲ್ಲಿ ಕುಳ್ಳಿರಿಸಿಕೊಂಡು ಮನೆ ಕಡೆ ತೆರಳುತ್ತಿದ್ದೆ. ಆನೆ ರಸ್ತೆ ಬದಿಯಲ್ಲಿ ಇತ್ತು. ನಮ್ಮನ್ನು ನೋಡಿ ಘೀಳಿಟ್ಟಿತು. ಭಯದಿಂದ ಓಡಿ ತಪ್ಪಿಸಿಕೊಂಡೆವು, ಪ್ರಾಣ ಉಳಿಯಿತು.
ವಿಶ್ವನಾಥ ಮುಂಡೋಡಿ, ಗುಂಡಿಹಿತ್ಲು ನಿವಾಸಿ

ತಂಡ ಕಳುಹಿಸುತ್ತೇವೆ
ಕಾಡಾನೆ ಹಾವಳಿ ತೀವ್ರವಾಗಿರುವ ಮಾಹಿತಿ ಇದೆ. ದೇವತಾ ಕಾರ್ಯ ಕೂಡ ಆ ಭಾಗದಲ್ಲಿ ನಡೆಯುತ್ತಿರುವುದರಿಂದ ರಾತ್ರಿ ಹೊತ್ತು ಆ ಭಾಗಕ್ಕೆ ವಿಶೇಷ ತಂಡವನ್ನು ಕಳುಹಿಸಿಕೊಡಲಾಗುವುದು. ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗುವುದು.
ತ್ಯಾಗರಾಜ್‌, ಆರ್‌ಎಫ್ಓ ಸುಬ್ರಹ್ಮಣ್ಯ

ಬಾಲಕೃಷ್ಣ ಭೀಮಗುಳಿ​​​​​​​

ಟಾಪ್ ನ್ಯೂಸ್

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.