ಪ್ರಕೃತಿಯ ಮಡಿಲಲ್ಲಿ ಸಾಕಾರಗೊಂಡ ಸಮ್ಮೇಳನ


Team Udayavani, Mar 2, 2020, 6:39 AM IST

nature

ಮಹಾನಗರ: ಆಧುನಿಕ ಕಾಲಘಟ್ಟದಲ್ಲಿ ಪರಿಸರದ ಮೇಲೆ ನಡೆಯುತ್ತಿರುವ ದಾಳಿಗೆ ಮಟ್ಟ ಹಾಕುವ ಹಾಗೂ ಪರಿಸರ ಪೂರಕ ಯೋಜನೆ-ಯೋಚನೆಗಳು ಎಲ್ಲೆಡೆ ಸಾಕಾರವಾಗಲಿ ಎಂಬ ಸದುದ್ದೇಶದಿಂದ ನಗರದ ತಣ್ಣೀರುಬಾವಿ ಟ್ರೀ ಪಾರ್ಕ್‌ನ ಪ್ರಕೃತಿಯ ಮಡಿಲಲ್ಲಿ ರವಿವಾರ ನಡೆದ ಎರಡನೇ ವರ್ಷದ ರಾಜ್ಯಮಟ್ಟದ ಪರಿಸರ ಸಮ್ಮೇಳನವು ಹತ್ತಾರು ವಿಶೇಷತೆಗಳೊಂದಿಗೆ ಗಮನಸೆಳೆಯಿತು.

ರಾಷ್ಟ್ರೀಯ ಪರಿಸರ ಸಂರಕ್ಷಣೆ ಒಕ್ಕೂಟ (ಎನ್‌ಇ ಸಿಎಫ್‌) ವತಿಯಿಂದ ಪರಿಸರಾ ಸಕ್ತರು ಸೇರಿಕೊಂಡು ಆಯೋಜಿಸಿದ್ದ ಪರಿಸರ ಸಮ್ಮೇಳನದಲ್ಲಿ ದ.ಕ.-ಉಡುಪಿ ಸಹಿತ ಶಿವಮೊಗ್ಗ, ಹಾಸನ,ತುಮಕೂರು,ಬೆಂಗಳೂರು,ಉತ್ತರ ಕನ್ನಡ ವಿವಿಧ ಜಿಲ್ಲೆಗ ಳಿಂದ ಪರಿ ಸರಾಸಕ್ತರು ಆಗಮಿಸಿದ್ದರು.

ಬೆಳಗ್ಗೆ 8ರಿಂದ ಆರಂಭಗೊಂಡ ಸಮ್ಮೇಳನ ಸಂಜೆಯವರೆಗೂ ವಿನೂತನ ಪರಿಕಲ್ಪನೆಯೊಂದಿಗೆ ಸಾಕಾರಗೊಂಡಿತು. ಸಮ್ಮೇಳನ ವೇದಿಕೆಯಿಂದ ಮಾವಿನ ಗಿಡ ವನ್ನು ಪಲ್ಲಕ್ಕಿಯಲ್ಲಿ ಹೊತ್ತು ಸಾಗಿ ಟ್ರೀಪಾರ್ಕ್‌ನ ಒಂದು ಭಾಗದಲ್ಲಿ ನೆಡುವ ಮೂಲಕ ಸಮ್ಮೇಳನಕ್ಕೆ ಚಾಲನೆ ನೀಡಲಾಯಿತು.

ಸಮ್ಮೇಳನವೆಂಬ ನಿಗದಿತ ಚೌಕಟ್ಟನ್ನು ಬದಿಗಿರಿಸಿ ಪ್ರಕೃತಿಯ ಮಡಿಲಲ್ಲಿ ಪ್ರಕೃ ತಿಯ ವಿಚಾರವನ್ನು ಸುಲಭ ಹಾಗೂ ಸಂವಹನ ಶೈಲಿಯಲ್ಲಿ ನಡೆಸಬೇಕು ಎಂಬ ಕಾರಣ ದಿಂದ ವಿಭಿನ್ನವಾಗಿ ಆಚರಿಸಿದ್ದು ವಿಶೇಷ. ಬೆಳೆದುನಿಂತ ಮರಗಿಡಗಳ ನೆರಳೇ ಇಲ್ಲಿ ಚಪ್ಪರವಾಗಿತ್ತು. ಹೀಗಾಗಿ ಪ್ರತ್ಯೇಕ ಶ್ಯಾಮಿಯಾನ ಇಲ್ಲಿ ಇರಲಿಲ್ಲ. ತೆರೆದ ವೇದಿಕೆಯಲ್ಲಿ ನಡೆದ ನ್ಯಾಯಾಲಯ ಪ್ರಕ್ರಿಯೆ, ಸಾಂಸ್ಕೃತಿಕ ಕಾರ್ಯಕ್ರಮ ವಿನೂತನವಾಗಿತ್ತು.
ಅಲೋಶಿಯಸ್‌ ಕಾಲೇಜು, ಆಳ್ವಾಸ್‌ ಕಾಲೇಜು, ಹಳೆಯಂಗಡಿ ನಾರಾಯಣ ಸನಿಲ್‌ ಕಾಲೇಜು, ಶ್ರೀನಿವಾಸ ಕಾಲೇಜು, ಎನ್‌ಎಸ್‌ಎಸ್‌, ಎನ್‌ಸಿಸಿ ವಿದ್ಯಾರ್ಥಿಗಳು ಸಹಿತ ನಗರದ ವಿವಿಧ ಕಾಲೇಜುಗಳ ವಿದ್ಯಾ ರ್ಥಿ ಗಳು ಸ್ವಯಂಸೇವಕರಾಗಿ ದಿನಪೂರ್ತಿ ಕಾರ್ಯನಡೆಸಿದರು. ಸ್ವತ್ಛತೆ, ಕುಡಿಯುವ ನೀರು ಪೂರೈಕೆ, ಆಹಾರ ಪೂರೈಕೆ ಸಹಿತ ವಿವಿಧ ಕಾರ್ಯದಲ್ಲಿ ತೊಡಗಿಸಿಕೊಂಡರು. ಜತೆಗೆ, ಹಸಿರು ಟೀಶರ್ಟ್‌ ಉಟ್ಟ ಎನ್‌ಇಸಿಎಫ್‌ ಕಾರ್ಯಕರ್ತರು-ಸದಸ್ಯರು ಗಮನಸೆಳೆದರು.

ಬಿಇಎಂ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ವೈವಿಧ್ಯದಲ್ಲಿ ಗ್ರಾಮೀಣ ಆಟಗಳ ಕುರಿತು ನೃತ್ಯ ಪ್ರದರ್ಶಿಸಿದರು. ಸಿದ್ಧಿ ಸಮು ದಾಯ ದವರಿಂದ ಡಾಮಾಮಿ ನೃತ್ಯ, ಹಾಲಕ್ಕಿ ಜನರಿಂದ ಕುಗುಡಿ ನೃತ್ಯ, ಚೇತನಾ ಕಪಪ್ಪ ತಂಡದಿಂದ ಮಕ್ಕಳ ಕಾಡೇ ಕೂಗು ನಾಟಕ ಪ್ರದರ್ಶನಗೊಂಡಿತು. ಸಮ್ಮೇಳಕ್ಕೆ ಮೊದಲು ಹಾಲಕ್ಕಿ ಸಮುದಾಯದವರಿಂದ ಪದ್ಮಶ್ರೀ ಸುಕ್ರೀ ಬೊಮ್ಮಗೌಡ ಅವರ ನೇತೃತ್ವದಲ್ಲಿ ನೃತ್ಯ ಪ್ರದರ್ಶನಗೊಂಡಿತು.

ಗಮನಸೆಳೆದ ಕಲಾಕೃತಿಗಳು
ಸಮ್ಮೇಳನದಲ್ಲಿ ಚಿತ್ರಕಲಾವಿದರ ಕೈಚಳಕ ಗಮನ ಸೆಳೆಯಿತು. ಚಾವಡಿ ಕಲಾವಿದರು ತಂಡ ಸ್ಥಳದಲ್ಲೇ ಚಿತ್ರರಚಿಸಿ, ಪ್ರದರ್ಶನ ನೀಡಿದರು. ಚಿತ್ರ ಕಲಾಶಿಕ್ಷಕರಾದ ಜಾನ್‌ಚಂದ್ರನ್‌, ಪೂರ್ಣೇಶ್‌, ತಾರಾನಾಥ್‌ ಕೈರಂಗಳ ಅವರು ಚಿತ್ರಕಲಾ ತಂಡದಲ್ಲಿದ್ದರು. ಟ್ರೀ ಪಾರ್ಕ್‌ನ ಪ್ರಕೃತಿಯ ಸೊಬಗಿನಲ್ಲಿ ನೆರಳಾಶ್ರಯ ಪಡೆದು ಕಿನಾರೆಯಲ್ಲಿ ಪರಿಸರ ವೈವಿಧ್ಯ ಮತ್ತು ಪರಿಸರದ ಮೇಲಿನ ದೌರ್ಜನ್ಯಗಳನ್ನು ಬಿಂಬಿಸುವ ಚಿತ್ರಗಳನ್ನು ಬರೆದು ಮೆಚ್ಚುಗೆ ಗಳಿಸಿದರು.

ಸಮ್ಮೇಳನವೇ
ಇಲ್ಲಿ “ಪರಿಸರ’!
ಸ್ವರೂಪ್‌ ಅಧ್ಯಯನ ಕೇಂದ್ರದ ಗೋಪಾಡ್ಕರ್‌ ನೇತೃತ್ವದಲ್ಲಿ ವಿದ್ಯಾರ್ಥಿಗಳಿಂದ ಪರಿಸರ ಪೂರಕ ವಿಭಿನ್ನ ಸಂದೇಶ ಸಾರುವ ಚಿತ್ರಕಲಾ ಪ್ರದರ್ಶನ, ಉಮಾ ಟೈಲ್‌ ಕಂಪೆನಿಯ ಮಣ್ಣಿನ ಹೂದಾನಿಗಳು, ನೇತು ಹಾಕುವ ಹೂಜಿಗಳು, ಆರ್ಕಿಡ್‌ ಮಡಿಕೆಗಳು, ಪ್ಲಾಸ್ಟಿಕ್‌ ಬಳಕೆ ಯಿಂದ ಮೀನಿಗಾಗುವ ತೊಂದರೆ ಬಿಂಬಿಸುವ ಚಿತ್ರಾಕೃತಿ, ಹಕ್ಕಿಗಳ ರೋದನ, ಎತ್ತಿನಹೊಳೆ ಯೋಜನೆ ಅಣಕಿಸುವ ಚಿತ್ರಣ ಗಳು ಸಮ್ಮೇಳನದಲ್ಲಿ ಎದ್ದು ಕಾಣುತ್ತಿತ್ತು. ಪದ್ಮಶ್ರೀ ಪುರಸ್ಕೃತರ ಭಾವ ಚಿತ್ರಗಳನ್ನು ಹಾಳೆತಟ್ಟೆಯಲ್ಲಿ ತೂಗಿ ಹಾಕಲಾಗಿತ್ತು. ನರ್ಸರಿ ಗಿಡಗಳ ತಳಿಗಳು, ಮೇಘಾ ಮೆಂಡನ್‌ ಅವರು ರಚಿ ಸಿದ “ಬಾಟಲಿ ಆರ್ಟ್‌’ ಗಮನಸೆಳೆಯಿತು.

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.