‘ಮೀನು ಮಾರುಕಟ್ಟೆ ಅಭಿವೃದ್ಧಿಗೆ ಒತ್ತು’
Team Udayavani, Oct 11, 2017, 9:48 AM IST
ಸ್ಟೇಟ್ಬ್ಯಾಂಕ್: ಇಲ್ಲಿನ ಹಸಿ ಮೀನು ಮಾರುಕಟ್ಟೆ ಪ್ರಾಂಗಣದಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ಕೈಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮೇಯರ್ ಕವಿತಾ ಸನಿಲ್ ಮಂಗಳವಾರ ಉದ್ಘಾಟಿಸಿದರು.
ಮಾರುಕಟ್ಟೆಯ ಪ್ರಾಂಗಣದ ಮೇಲ್ಛಾವಣಿ ಸಂಪೂರ್ಣ ನಾದುರಸ್ತಿಯಲ್ಲಿದ್ದ ಹಿನ್ನೆಲೆಯಲ್ಲಿ ಹೊಸದಾಗಿ ನಿರ್ಮಿಸಲಾ
ಗಿದೆ. ಮೀನು ಮಾರಾಟ ಮಾಡುವ ಸ್ಥಳದಲ್ಲಿ ಹೊಂಡ ಗುಂಡಿಗಳಿದ್ದ ಕಾರಣದಿಂದ, ಪ್ರಾಂಗಣದ ವ್ಯಾಪ್ತಿಯಲ್ಲಿ ನೆಲಕ್ಕೆ ಕಾಂಕ್ರೀಟ್ ಹಾಸಲಾಗಿದೆ. ಮೀನು ಮಾರಾಟ ಮಾಡುವ ಮಹಿಳೆಯರಿಗಾಗಿ ವಿಶ್ರಾಂತಿ ಕೊಠಡಿಯನ್ನು ತೆರೆಯಲಾಗಿದ್ದು, ಅದನ್ನು ಮೇಯರ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಮೀನು ಮಾರಾಟ ಮಾಡುವ ಮಹಿಳೆಯರ ಬಹು ದಿನಗಳ ನೋವಿಗೆ ಸ್ಪಂದಿಸುವ
ಕೆಲಸವನ್ನು ಆದ್ಯತೆಯ ನೆಲೆಯಲ್ಲಿ ಪಾಲಿಕೆ ಕೈಗೆತ್ತಿಕೊಂಡು ಮಾಡಲಾಗಿದೆ. ಮೀನು ಮಾರುಕಟ್ಟೆ ವ್ಯಾಪ್ತಿಯ ಹಲವು ಸಮಸ್ಯೆಗಳ ಬಗ್ಗೆ ಗಮನಕ್ಕೆ ಬಂದಿದೆ. ಹೀಗಾಗಿ ಮಾರುಕಟ್ಟೆಯನ್ನು ಅತ್ಯಂತ ಸುಸ್ಥಿತಿಯಲ್ಲಿ ಮತ್ತು ಅಲ್ಲಿ ವ್ಯಾಪಾರ ಮಾಡುವವರಿಗೆ ಎಲ್ಲ ರೀತಿಯ ಮೂಲ ಸೌಕರ್ಯ ನೀಡುವ ನೆಲೆಯಲ್ಲಿ ಪ್ರಾಮಾಣಿಕ ಕಾರ್ಯಗಳನ್ನು ಮಾಡಲಾಗುವುದು ಎಂದು ಅವರು ಹೇಳಿದರು.
ಮಾರುಕಟ್ಟೆಯ ಪ್ರಮುಖರಾದ ಬೇಬಿ ಅಮೀನ್ ಮಾತನಾಡಿ, ಹಸಿ ಮೀನು ಮಾರಾಟ ಮಾಡುವ ಈ ಪ್ರದೇಶದ
ಸಮಸ್ಯೆ ಪರಿಹರಿಸಲು ಜನಪ್ರತಿನಿಧಿಗಳಿಗೆ ಮನವಿ ಮಾಡುತ್ತಾ ಬರಲಾಗಿತ್ತಾದರೂ ಸೂಕ್ತ ಸ್ಪಂದನೆ ದೊರಕಿರಲಿಲ್ಲ. ಮೇಯರ್ ಕವಿತಾ ಸನಿಲ್ ಅವರ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಅವರು ಕೆಲವೇ ದಿನದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಮೊದಲ ಹಂತದ ಕೆಲಸಗಳನ್ನು ಮಾಡಿ ತೋರಿಸಿದ್ದಾರೆ ಎಂದು ಶ್ಲಾಘಿಸಿದರು.
ಉಪ ಮೇಯರ್ ರಜನೀಶ್, ಮುಖ್ಯ ಸಚೇತಕ ಎಂ. ಶಶಿಧರ ಹೆಗ್ಡೆ, ಸ್ಥಾಯೀ ಸಮಿತಿ ಅಧ್ಯಕ್ಷರಾದ ಅಬ್ದುಲ್ ರವೂಫ್,
ಸಬಿತಾ ಮಿಸ್ಕಿತ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ