ಉದ್ಯೋಗ ಖಾತರಿ ಕಾರ್ಮಿಕರಿಗೆ ರಿಯಾಯಿತಿ!
Team Udayavani, Mar 21, 2019, 1:00 AM IST
ಮಂಗಳೂರು: ತಾಪಮಾನ ಹೆಚ್ಚುತ್ತಿರುವ ಕಾರಣ ಉದ್ಯೋಗ ಖಾತರಿ ಯೋಜನೆಯಡಿ ರಾಜ್ಯದ ಎಲ್ಲ ಜಿಲ್ಲೆಗಳ
ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ನಿರ್ವಹಿಸುವ ನೋಂದಾಯಿತ ಕಾರ್ಮಿಕರಿಗೆ ದುಡಿಯುವ ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ನೀಡಿ ಸರಕಾರ ಆದೇಶಿಸಿದೆ.
ಇದರಂತೆ ಈ ತಿಂಗಳಿನಲ್ಲಿ ಉದ್ಯೋಗ ಖಾತರಿ ಯೋಜನೆಯ ಕೆಲಸಗಾರರಿಗೆ ಶೇ. 25ರಷ್ಟು ರಿಯಾಯಿತಿ ದೊರೆಯಲಿದೆ. ಅಂದರೆ, 1 ದಿನದಲ್ಲಿ ಶೇ. 100ರಷ್ಟು ಕಾಮಗಾರಿ ಮಾಡಬೇಕಾದ ಇವರು ಈ ತಿಂಗಳಿನಲ್ಲಿ ಶೇ. 75ರಷ್ಟು ಪ್ರಮಾಣದಲ್ಲಿ ಮಾತ್ರ ಕೆಲಸ ಮಾಡಬಹುದು. ಎಪ್ರಿಲ್ ಹಾಗೂ ಮೇ ತಿಂಗಳಿನಲ್ಲಿ ಶೇ. 30ರಷ್ಟು, ಜೂನ್ನಲ್ಲಿ ಶೇ. 20ರಷ್ಟು ರಿಯಾಯಿತಿ ದೊರೆಯಲಿದೆ.
156 ತಾಲೂಕು ಬರಪೀಡಿತ
ರಾಜ್ಯದ 30 ಜಿಲ್ಲೆಗಳ 176 ತಾಲೂಕುಗಳ ಪೈಕಿ 156 ತಾಲೂಕುಗಳನ್ನು ಬರಪೀಡಿತ ಎಂದು ಸರಕಾರ ಘೋಷಿಸಿದೆ. ಈ ತಾಲೂಕುಗಳಲ್ಲಿ ಉಷ್ಣಾಂಶ ಹೆಚ್ಚಾಗಿದ್ದು, ಈ ಕಾರಣದಿಂದ ನರೇಗಾ ಯೋಜನೆಯಡಿ ನಿಗದಿಪಡಿಸಿದ ಕಾಮಗಾರಿಗಳ ಕೆಲಸದ ಪ್ರಮಾಣವನ್ನು ನಿರ್ವಹಿಸುವುದು ಕಷ್ಟ. ಹೀಗಾಗಿ ಮಾ. 16ರಂದು ರಾಜ್ಯ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿ/ಜಿ.ಪಂ. ಸಿಇಒಗಳೊಂದಿಗೆ ನಡೆದ ಸಂವಾದದಲ್ಲಿ ಚರ್ಚಿಸಿ, ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ಪ್ರಕಟಿಸಲು ಸೂಚಿಸಲಾಗಿದೆ. ಕಳೆದ ವರ್ಷ ಕೂಡ ಈ ರಿಯಾಯಿತಿ ನೀಡಲಾಗಿತ್ತು.
ರಾಜ್ಯದಲ್ಲಿ ಒಟ್ಟು 50 ಲಕ್ಷಕ್ಕೂ ಅಧಿಕ ಜಾಬ್ ಕಾರ್ಡ್ಗಳನ್ನು ಜಾರಿಗೊಳಿಸಲಾಗಿದ್ದು, ಇದರಲ್ಲಿ 25 ಲಕ್ಷಕ್ಕೂ ಅಧಿಕ ಕಾರ್ಡ್ಗಳು ಪ್ರಸ್ತುತ ಕಾರ್ಯನಿರತವಾಗಿವೆ. ಇವರಿಗೆ ಈ ರಿಯಾಯಿತಿ ಲಾಭ ದೊರೆಯಲಿದೆ.
ಗ್ರಾಮೀಣ ಅಭಿವದ್ಧಿಗಾಗಿ “ಉದ್ಯೋಗ ಖಾತರಿ’
ರಸ್ತೆ, ಬಾವಿ, ಶ್ಮಶಾನ ನಿರ್ಮಾಣ ಸೇರಿದಂತೆ ಗ್ರಾಮದ ಸಮಗ್ರ ಅಭಿವೃದ್ಧಿ, ದನದ ಹಟ್ಟಿ ನಿರ್ಮಾಣ, ಕೆರೆ ಅಭಿವೃದ್ಧಿ ಸೇರಿದಂತೆ ಅರ್ಹ ಫಲಾನುಭವಿ ರೈತರ ಕೃಷಿ ಸಂಬಂಧಿತ ಕೆಲಸಗಳು ಹಾಗೂ ತೋಟಗಾರಿಕೆ ಅಭಿವೃದ್ಧಿ ಚಟುವಟಿಕೆಗಳನ್ನು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೈಗೊಳ್ಳಲು ಅವಕಾಶವಿದೆ. ಗ್ರಾ.ಪಂ. ವ್ಯಾಪ್ತಿಯ ಅರ್ಹ ಪ್ರತೀ ಕುಟುಂಬಕ್ಕೆ ಕನಿಷ್ಠ 100 ದಿನಗಳ ಉದ್ಯೋಗ ನೀಡಲಾಗುತ್ತದೆ. 1 ದಿನಕ್ಕೆ ಇಂತಿಷ್ಟು ವೇತನ ನಿಗದಿಪಡಿಸಲಾಗಿದ್ದು, ವರ್ಷಕ್ಕೆ ಸುಮಾರು 22,400 ರೂ. ದೊರೆಯಲಿದೆ. 1 ದಿನದಲ್ಲಿ 1 ಕ್ಯೂಬಿಕ್ ಮೀಟರ್ನಷ್ಟು ಕೆಲಸ ನಡೆಸಬೇಕಾಗುತ್ತದೆ. ಇದರಲ್ಲಿ ಬಿಸಿಲಿನ ಕಾರಣದಿಂದ ಶೇಕಡಾವಾರು ರಿಯಾಯಿತಿ ನೀಡಲು ಇದೀಗ ಸರಕಾರ ನಿರ್ಧರಿಸಿದೆ.
ಉದ್ಯೋಗ ಖಾತರಿ ಯೋಜನೆಯಲ್ಲಿ ಕೆಲಸ ಮಾಡಬೇಕಾದರೆ ಆ ಕಾಮಗಾರಿಯ ಪೂರ್ಣ ಹೆಸರನ್ನು ಗ್ರಾಮ ಸಭೆಯ ಮುಂದಿರಿಸಿ, ಗ್ರಾ.ಪಂ. ಅನುಮತಿ ಪಡೆದು, ತಾ.ಪಂ ಹಾಗೂ ಜಿ.ಪಂ.ನಲ್ಲಿ ಅನುಮೋದನೆ ದೊರೆಯಬೇಕಿದೆ. ಬಳಿಕ ಸಂಬಂಧಿತರಿಗೆ ವೈಯಕ್ತಿಕ “ಜಾಬ್ ಕಾರ್ಡ್’ ಜಾರಿಗೊಳಿಸಲಾಗುತ್ತದೆ. ಬಳಿಕ ಸಂಬಂಧಿತ ಕಾರ್ಮಿಕನ ಬ್ಯಾಂಕ್ ಅಕೌಂಟ್ಗೆ ಹಣ ಸಲ್ಲಿಕೆಯಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
SS Rajamouli: ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್ನಲ್ಲಿ ಸುಳಿವು ಕೊಟ್ಟ ರಾಜಮೌಳಿ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!