ಎಂಡೋ ಸಂತ್ರಸ್ತರಿಗೆ ಬಜೆಟ್‌ನಲ್ಲಿ  ಏನೂ ಇಲ್ಲ


Team Udayavani, Jul 6, 2018, 9:36 AM IST

endo-sulfan-photo-600.jpg

ಬೆಳ್ತಂಗಡಿ: ಎಂಡೋ ಸಂತ್ರಸ್ತರಿಗೆ ಈ ಬಜೆಟ್‌ನಲ್ಲೂ ಸರಕಾರ ಏನೂ ಕೊಟ್ಟಿಲ್ಲ; ಅಧಿವೇಶನದಲ್ಲಾದರೂ ಜನಪ್ರತಿನಿಧಿಗಳು ತಮ್ಮ ಧ್ವನಿಯಾಗುತ್ತಾರೆ ಎಂದು ಇವರು ಕಾಯುತ್ತಿದ್ದಾರೆ. ಕೇರಳ ಸರಕಾರವು ಎಂಡೋ ಸಂತ್ರಸ್ತರಿಗೆ ಪರಿಹಾರ ವಿಚಾರದಲ್ಲಿ ದಿಟ್ಟ ನಿಲುವು ತಳೆದು ಅವರ ಬಹುತೇಕ ಬೇಡಿಕೆ ಈಡೇರಿಸಿದೆ. ರಾಜ್ಯದಲ್ಲೂ ಎಂಡೋ ಸಂತ್ರಸ್ತರಿಗೆ 5 ಲಕ್ಷ ರೂ. ಪರಿಹಾರ ಧನ, ಪೌಷ್ಟಿಕ ಆಹಾರ ಒದಗಣೆ, ಸುಸಜ್ಜಿತ ಎಂಡೋ ಪುನರ್ವಸತಿ ಕೇಂದ್ರ ಸ್ಥಾಪನೆ, ಸಂತ್ರಸ್ತರ ಚಿಕಿತ್ಸೆಗೆ ಆಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಬಳಸಬೇಕೆಂಬುದು ಪ್ರಮುಖ ಬೇಡಿಕೆಗಳು. ಜಿಲ್ಲೆಯ ವಿವಿಧೆಡೆ 3,500ಕ್ಕೂ ಹೆಚ್ಚು ಎಂಡೋ ಸಂತ್ರಸ್ತರಿಗೆ ಮಾಸಾಶನ ಮಾತ್ರ ಸಿಗುತ್ತಿರುವುದು. ಇದರಲ್ಲೂ 700 ಸಂತ್ರಸ್ತರಿಗೆ ಮಾಸಾಶನವೂ ಸಿಗುತ್ತಿಲ್ಲ. ಕಳೆದ ಬಾರಿ ಮಾಸಾಶನ ಮೊತ್ತ ಏರಿಕೆಯಾಗಿದ್ದರೂ ಎಂಡೋ ಪೀಡಿತರಿಗೆ ಸಿಕ್ಕಿಲ್ಲವೆಂಬ ಆರೋಪವಿದೆ.

92 ಗ್ರಾಮ ಎಂಡೋ ಪೀಡಿತ
ಜಿಲ್ಲೆಯ ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ಹಾಗೂ ಸುಳ್ಯ ತಾಲೂಕುಗಳಲ್ಲಿ ಎಂಡೋ ಪೀಡಿತರಿರುವ 92 ಗ್ರಾಮಗಳನ್ನು ಗುರುತಿಸಿದ್ದು, 3,612 ಸಂತ್ರಸ್ತರಿದ್ದಾರೆ. 112 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಎಂಡೋ ಪೀಡಿತರ ಆರೈಕೆಗಾಗಿ ಜಿಲ್ಲೆಗೆ 8 ಪಾಲನ ಕೇಂದ್ರಗಳನ್ನು ನೀಡುವುದಾಗಿ ಸರಕಾರ ಹೇಳಿದ್ದರೂ ಬೆಳ್ತಂಗಡಿಯ ಕೊಕ್ಕಡ ಹಾಗೂ ಪುತ್ತೂರಿನ ಕೊಯಿಲದಲ್ಲಿ ಮಾತ್ರ ಇವೆ. ಉಜಿರೆಯಲ್ಲಿ ಪಾಲನ ಕೇಂದ್ರಕ್ಕೆ ಸಿದ್ದರಾಮಯ್ಯ ಹಸಿರು ನಿಶಾನೆ ತೋರಿದ್ದರೂ ಜಾರಿಗೊಂಡಿಲ್ಲ.

ಕೇರಳ ಸರಕಾರವು ಅಲ್ಲಿನ ಎಂಡೋ ಸಂತ್ರಸ್ತರಿಗೆ ಸ್ಮಾರ್ಟ್‌ ಕಾರ್ಡ್‌ ನೀಡಿದ್ದು, ಮಂಗಳೂರಿನ ಆಸ್ಪತ್ರೆಗಳಲ್ಲಿ ಉಚಿತ ಆರೋಗ್ಯ ಸೇವೆ ಲಭ್ಯವಿದೆ. ಕರ್ನಾಟಕ ಸರಕಾರವು ಇಲ್ಲಿನ ಎಂಟು ಮೆಡಿಕಲ್‌ ಕಾಲೇಜುಗಳೊಂದಿಗೆ ಒಪ್ಪಂದ ಮಾಡಿಕೊಂಡು ಕಾರ್ಡ್‌ ವಿತರಿಸುವಂತೆ ಸಂತ್ರಸ್ತರು ಆಗ್ರಹಿಸಿದ್ದಾರೆ. ದ.ಕ. ಜಿಲ್ಲಾಡಳಿತವು ಹಲವು ಸಭೆಗಳಲ್ಲಿ ಎಂಡೋ ಸಂತ್ರಸ್ತರಿಗೆ ಪೌಷ್ಟಿಕ ಆಹಾರ ನೀಡಲಾಗುತ್ತದೆ ಎಂದು ಹೇಳಿದ್ದರೂ ಅದಿನ್ನೂ ಸಂತ್ರಸ್ತರನ್ನು ಮುಟ್ಟಿಲ್ಲ. 

ಪ್ರಮುಖವಾಗಿ ಶಾಶ್ವತ ಪುನರ್ವ ಸತಿ ಕೇಂದ್ರ, 5 ಲಕ್ಷ ರೂ. ಪರಿಹಾರ ಧನ ಪ್ರಮುಖ ಬೇಡಿಕೆ. ಸರಕಾರದ ಕೆಲವು ಸೌಲಭ್ಯಗಳಿಂದಾಗಿ ಕೆಲವು ಮಂದಿ ಸಂತ್ರಸ್ತರು ಎಸೆಸೆಲ್ಸಿ ಉತ್ತೀರ್ಣರಾಗಿದ್ದಾರೆ, ಒಂದಿಬ್ಬರು ನಡೆಯುವ ಸ್ಥಿತಿ ತಲುಪಿದ್ದಾರೆ. ಇನ್ನಷ್ಟು ಸೌಲಭ್ಯಗಳು ಸಿಕ್ಕಿದರೆ ಅವರ ನರಕಯಾತನೆ ಕಡಿಮೆಯಾಗಬಹುದು. ಕೇರಳದಂತೆ ನಮ್ಮ ಸರಕಾರವೂ ಪರಿಹಾರಕ್ಕೆ ಮುಂದಾಗಬೇಕು.
– ಶ್ರೀಧರ ಗೌಡ ಕೆಂಗುಡೇಲು ಎಂಡೋಪರ ಹೋರಾಟಗಾರ

ಸೌಲಭ್ಯಕ್ಕೆ ಪ್ರಾಮಾಣಿಕ ಪ್ರಯತ್ನ
ಬಜೆಟ್‌ನಲ್ಲಿ ಎಂಡೋ ಸಂತ್ರಸ್ತರಿಗೆ ಏನೂ ಕೊಡದಿರುವ ಕುರಿತು ನೋವಿದೆ. ಇವರಿಗೆ ಸೌಲಭ್ಯ ದೊರಕಿಸಿ ಕೊಡುವುದು ನನ್ನ ಮೊದಲ ಆದ್ಯತೆ, ಆ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.
– ಹರೀಶ್‌ ಪೂಂಜಾ, ಶಾಸಕರು, ಬೆಳ್ತಂಗಡಿ

— ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.