ಸಮುದಾಯ ಸೇವೆಯಲ್ಲಿ ತೊಡಗಿಸಿಕೊಳ್ಳಿ

ಮಂಗಳೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಪದ್ಮಾ ರಾಮಚಂದ್ರನ್‌

Team Udayavani, Apr 13, 2019, 6:12 AM IST

1204ul2

ಉಳ್ಳಾಲ: ವಿಶ್ವವಿದ್ಯಾ ನಿಲಯದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ನೀಡುವ ಉಪನ್ಯಾಸಕರು ನಿರಂತರ ಅಧ್ಯಯನ, ಸಂಶೋಧನೆಗೆ ಒತ್ತು ನೀಡುವುದರೊಂದಿಗೆ ಸಮುದಾಯದ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಬರೋಡಾದ ಎಂ.ಎಸ್‌. ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪದ್ಮಾ ರಾಮಚಂದ್ರನ್‌ ಅವರು ಅಭಿಪ್ರಾಯಪಟ್ಟರು.

ಮಂಗಳಗಂಗೋತ್ರಿಯ ಮಂಗಳ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ 37ನೇ ವಾರ್ಷಿಕ ಘಟಿಕೋತ್ಸವದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿ ಸಾಕಷ್ಟು ಮಂದಿಗೆ ಉನ್ನತ ಶಿಕ್ಷಣ ಪಡೆಯಲು ಸಾಧ್ಯವಿಲ್ಲ. ಆದರೆ ಇಂತಹ ಶಿಕ್ಷಣ ಪಡೆದವರು ತಾವು ಕಲಿತ ಶಿಕ್ಷಣವನ್ನು ಮತ್ತೂಬ್ಬರಿಗೆ ಹಂಚುವ ಕೆಲಸದಿಂದ ಸಮಾಜದಲ್ಲಿ ಸಾಕಷ್ಟು ಸುಧಾರಣೆ, ಬದಲಾವಣೆಗೆ ಅವಕಾಶ ಸಿಗಲಿದೆ. ಈ ನಿಟ್ಟಿನಲ್ಲಿ ಸಮಾಜ ಸುಧಾರಣೆಯ ಕೆಲಸ ಮಾಡಿದ ಮಹಾತ್ಮರ ಜೀವನ ಹಾದಿಯಿಂದ ಸ್ಫೂರ್ತಿಯನ್ನು ಪದವೀಧರರು ಪಡೆಯುವ ಅಗತ್ಯವಿದೆ ಎಂದರು.

ವಿಶ್ವವಿದ್ಯಾನಿಲಯದ ಪ್ರಭಾರ ಉಪ ಕುಲಪತಿ ಡಾ| ಕಿಶೋರಿ ನಾಯಕ್‌ ಪದವಿ ಪ್ರಮಾಣ ಪತ್ರ ಪ್ರದಾನ ಮಾಡಿದರು. ಪರೀಕ್ಷಾಂಗ ಕುಲಸಚಿವ ಪ್ರೊ| ರವೀಂದ್ರಾಚಾರಿ, ವಿವಿಧ ವಿಭಾಗಗಳ ಪ್ರೊ| ಬಾಲಕೃಷ್ಣ ಪಿ.ಎಂ. ಪ್ರೊ| ಮಲ್ಲಿಕಾರ್ಜುನಪ್ಪ, ಪ್ರೊ| ಜಯರಾಜ್‌ ಅಮೀನ್‌, ಪ್ರೊ| ಕಿಶೋರ್‌ ಕುಮಾರ್‌, ಹಣಕಾಸು ಅಧಿಕಾರಿ ಪ್ರೊ| ದಯಾನಂದ ನಾಯಕ್‌ ಮೊದಲಾದವರು ಉಪಸ್ಥಿತರಿದ್ದರು.

ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ| ಎ.ಎಂ. ಖಾನ್‌ ಸ್ವಾಗತಿಸಿ ವಿ.ವಿ. ಸಾಧನೆ ಮತ್ತು ವರದಿ ಮಂಡಿಸಿದರು. ಪ್ರಾಧ್ಯಾಪಕರಾದ ಡಾ| ರವಿಶಂಕರ್‌ ಮತ್ತು ಡಾ| ಧನಂಜಯ ಕುಂಬ್ಳೆ ಕಾರ್ಯಕ್ರಮ ನಿರ್ವಹಿಸಿದರು.

149 ಮಂದಿಗೆ ಪಿಎಚ್‌ಡಿ ಪದವಿ
ಬಯೋಟೆಕ್ನಾಲಜಿ ವಿಭಾಗದಲ್ಲಿ ಒಬ್ಬರಿಗೆ ಡಾಕ್ಟರ್‌ ಆಫ್‌ ಸಯನ್ಸ್‌, ಕಲಾನಿಕಾಯದಲ್ಲಿ 27, ವಿಜ್ಞಾನ ನಿಕಾಯದಲ್ಲಿ -99, ವಾಣಿಜ್ಯ ನಿಕಾಯದಲ್ಲಿ 14 ಹಾಗೂ ಶಿಕ್ಷಣ ನಿಕಾಯದಲ್ಲಿ 9 ಮಂದಿ ಪಿಎಚ್‌ಡಿ ಪದವಿಯನ್ನು ಪಡೆದಿದ್ದು, ಇವರಲ್ಲಿ 70 ಮಹಿಳೆಯರು ಮತ್ತು 79 ಪುರುಷರಿಗೆ ಪಿಎಚ್‌ಡಿ ಪದವಿ ನೀಡಲಾಯಿತು. 34 ಮಂದಿಗೆ ಚಿನ್ನದ ಪದಕ ಹಾಗೂ 98 ಮಂದಿಗೆ ನಗದು ಬಹುಮಾನ ನೀಡಲಾಯಿತು. ಒಟ್ಟು 170 ರ್‍ಯಾಂಕ್‌ಗಳಲ್ಲಿ ಪ್ರಥಮ ರ್‍ಯಾಂಕ್‌ ಪಡೆದ ಸ್ನಾತಕೋತ್ತರ ವಿಭಾಗ 51 ವಿದ್ಯಾರ್ಥಿಗಳಿಗೆ ಮತ್ತು ಪದವಿಯ 19 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 70 ವಿದ್ಯಾರ್ಥಿಗಳಿಗೆ ರ್‍ಯಾಂಕ್‌ ಪ್ರಮಾಣ ಪತ್ರವನ್ನು ನೀಡಲಾಯಿತು.

ಆಫ್ರಿಕಾದ 6 ಮಂದಿಗೆ ಪಿಎಚ್‌ಡಿ
ಈ ಸಲ ಪ್ರಥಮ ಬಾರಿಗೆ ರುವಾಂಡ, ಇಥಿಯೋಪಿಯಾ, ನಮೀಬಿಯಾ ಸಹಿತ ಆಫ್ರಿಕಾ ಖಂಡದ 6 ಮಂದಿ ಉಪನ್ಯಾಸಕರು ಪಿಎಚ್‌ಡಿ ಪದವಿ ಪಡೆದುಕೊಂಡರು. ಪದವಿ ಸ್ವೀಕರಿಸಿದ ರುವಾಂಡ ವಿ.ವಿ.ಯ ಉಪನ್ಯಾಸಕ ದುಸೈದಿ ಒಡೆಟ್ಟಿ ಗ್ಯಾಸೆಂಗೈರೆ ಮಾತನಾಡಿ, ಭಾರತದ ಶಿಕ್ಷಣ ವ್ಯವಸ್ಥೆಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.

ಚಿಕ್ಕ ಅಳುವಾರಿನಲ್ಲಿ ಕಲಿಕೆಗೆ ಅವಕಾಶದಿಂದ ಸಾಧನೆ
ತಾಯಿಯ ಒತ್ತಾಸೆ, ಉಪನ್ಯಾಸಕರ ಪ್ರೋತ್ಸಾಹ ಮತ್ತು ಚಿಕ್ಕಅಳುವಾರಿನಲ್ಲಿ ಮಂಗಳೂರು ವಿ.ವಿ.ಯ ಅಧ್ಯಯನ ಕೇಂದ್ರ ಇರುವುದರಿಂದ ಉನ್ನತ ಶಿಕ್ಷಣದಲ್ಲಿ ಸಾಧನೆ ಮಾಡಲು ಸಾಧ್ಯ ವಾಯಿತು ಎಂದು ಕನ್ನಡ ಸ್ನಾತಕೋತ್ತರ ವಿಭಾಗದಲ್ಲಿ 1 ಚಿನ್ನದ ಪದಕ ಮತ್ತು 5 ನಗದು ಪುರಸ್ಕಾರ ಗಳಿಸಿದ ಮಡಿಕೇರಿ ನಾಪೊಕ್ಲುವಿನ ಸೌಮ್ಯಾ ಕೆ.ಎ. ಅಭಿಪ್ರಾಯ ವ್ಯಕ್ತಪಡಿಸಿದರು.

ಎಫ್‌ಎಂಸಿ ಕಾಲೇಜಿನಲ್ಲಿ ಪದವಿ ಸಂದರ್ಭ 1 ಚಿನ್ನದ ಪದಕ
ಪಡೆದಿದ್ದೆ.ತಂದೆ ನಿಧನ ಹೊಂದಿ 15 ವರ್ಷ ಕಳೆದಿದ್ದು, ತಾಯಿ ರಾಣಿ ಕೆ.ಎ. ಹಾಗೂ ಸಹೋದರ ಗೌತಮ್‌ ಕಷ್ಟಪಟ್ಟು ಕೃಷಿ ಜೀವನ ನಡೆಸಿ ಶಿಕ್ಷಣಕ್ಕೆ ಒತ್ತಾಸೆಯಾಗಿ ದ್ದರು. ಎನ್‌ಇಟಿ ಪರೀಕ್ಷೆಯನ್ನು ಪೂರ್ಣಗೊಳಿಸಿದ್ದು ಮುಂದಿನ ದಿನಗಳಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸಿ ಪಿಎಚ್‌ಡಿ ಪೂರೈಸುವ ಆಕಾಂಕ್ಷೆಯನ್ನು ಹೊಂದಿರುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.