‘ಸಂಜೋಶ್‌’ನಿಂದ ಎಂಜಿನಿಯರಿಂಗ್‌ ಶಿಕ್ಷಣ ತರಬೇತಿ

ಸೈಂಟ್ ಜೋಸೆಫ್‌ ಎಂಜಿನಿಯರಿಂಗ್‌ ಕಾಲೇಜು

Team Udayavani, Jul 23, 2019, 5:13 AM IST

2207MLR25

ಮಂಗಳೂರು: ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಬೋಧನೆಮಾಡುವ ಉಪನ್ಯಾಸಕರು ಪರಿಣಾಮಕಾರಿ ಬೋಧನ ಕೌಶಲಗಳನ್ನು ಮೈಗೂಡಿಸಿಕೊಳ್ಳಲು ಅನುಕೂಲ ವಾಗುವಂತೆ ವಾಮಂಜೂರಿನ ಸೈಂಟ್ಜೋಸೆಫ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಇಂಡೊ ಯುನಿವರ್ಸಲ್ ಕೊಲಬರೇಶನ್‌ ಫಾರ್‌ ಎಂಜಿನಿಯರಿಂಗ್‌ ಎಜುಕೇಶನ್‌ (ಐಯುಸಿಇಇ) ಸಹಭಾಗಿತ್ವದಲ್ಲಿ ‘ಸಂಜೋಶ್‌’ ಎಂಬ ಹೆಸರಿನಲ್ಲಿ ಶಿಕ್ಷಣ ತರಬೇತಿ ಕೇಂದ್ರ (ಟಿಎಲ್ಸಿ)ವನ್ನು ಆರಂಭಿಸಲಾಗಿದೆ.


ಸೈಂಟ್ ಜೋಸೆಫ್‌ ಎಂಜಿನಿಯ ರಿಂಗ್‌ ಕಾಲೇಜಿನ 60 ಮಂದಿ ಉಪನ್ಯಾಸಕರು ಈ ಶಿಕ್ಷಣ ತರಬೇತಿಗೆ ಹೆಸರು ನೋಂದಾಯಿಸಿದ್ದು, 25 ಮಂದಿ ಮೊದಲ ಹಂತದಲ್ಲಿ ತರಬೇತಿ ಪಡೆದಿದ್ದಾರೆ. ಎರಡನೇ ಹಂತದಲ್ಲಿ ಮತ್ತೆ 30 ಮಂದಿ ತರಬೇತಿಯನ್ನು ಈಗ ಮುಗಿಸಿದ್ದಾರೆ. ಮೂರನೇ ಹಂತದಲ್ಲಿ ಆಸುಪಾಸಿನ ಎಂಜಿನಿಯರಿಂಗ್‌ ಕಾಲೇಜುಗಳ ಉಪನ್ಯಾಸಕರಿಗೆ ತರಬೇತಿ ನೀಡಲು ಉದ್ದೇಶಿಸಲಾಗಿದೆ. ಈ ತರಬೇತಿ ಕೋರ್ಸು ಆಗಸ್ಟ್‌ 5ರಿಂದ 7ರ ತನಕ ನಡೆಯಲಿದೆ ಎಂದು ಕಾಲೇಜಿನ ನಿರ್ದೇಶಕ ವಂ| ವಿಲ್ಫ್ರೆಡ್‌ ಪ್ರಕಾಶ್‌ ಡಿ’ಸೋಜಾ ಅವರು ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಇದು ಅಂತಾರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ತರಬೇತಿ ಆಗಿದ್ದು, ತರಬೇತಿಯನ್ನು ಪೂರ್ತಿಗೊಳಿಸಿದವ ರಿಗೆ ಪ್ರಮಾಣ ಪತ್ರವನ್ನು ನೀಡಲಾಗು ತ್ತಿದೆ. ತರಬೇತಿಯು ಫೇಸ್‌ ಟು ಫೇಸ್‌ ಸೆಶನ್‌ಗಳು, ಆನ್‌ಲೈನ್‌ ಮೋಡ್ಯೂಲ್ಗಳನ್ನು ಒಳಗೊಂಡಿರುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ| ರಿಯೋ ಡಿ’ಸೋಜಾ ವಿವರಿಸಿದರು.

ಎಂಜಿನಿಯರಿಂಗ್‌ ಶಿಕ್ಷಣದಲ್ಲಿ ಸುಧಾರಣೆ ತರಲು ಮತ್ತು ಎಂಜಿನಿಯರಿಂಗ್‌ ಪದವೀಧರರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಅಮೆರಿಕದ ಡಾ| ರಿಚರ್ಡ್‌ ಫೆಲ್ಡರ್‌ ಮತ್ತು ಡಾ| ರೆಬೆಕ್ಕಾ ಬ್ಲೆಂಟ್ ಅವರ ಪರಿಣಾಮಕಾರಿ ಬೋಧನಾ ಕಾರ್ಯಾಗಾರ ಮತ್ತು ಆಸ್ಟ್ರಿಯಾದ ಇಂಟರ್‌ನ್ಯಾಶನಲ್ ಸೊಸೈಟಿ ಫಾರ್‌ ಎಂಜಿನಿಯರಿಂಗ್‌ ಪೆಡಗೊಗಿ (ಐಜಿಐಒಇ)ಯ ಟೀಚರ್‌ ಸರ್ಟಿಫಿಕೇಶನ್‌ ಕೋರ್ಸ್‌ನ್ನು ಆಧರಿಸಿ ಐಯುಸಿಇಇ ಈ ಸರ್ಟಿಫಿಕೇಶನ್‌ ಕೋರ್ಸನ್ನು ವಿನ್ಯಾಸಗೊಳಿಸಿದೆ. ಭಾರತದ 120 ಎಂಜಿನಿಯರಿಂಗ್‌ ಕಾಲೇಜುಗಳು ಐಯುಸಿಇಇ ಸದಸ್ಯತ್ವ ಪಡೆದಿವೆ. ಸೈಂಟ್ ಜೋಸೆಫ್‌ ಎಂಜಿನಿಯರಿಂಗ್‌ ಕಾಲೇಜು 2013 ರಿಂದೀಚೆಗೆ ಇದರ ಸದಸ್ಯತ್ವ ಪಡೆದಿದ್ದು, ವಿವಿಧ ಕಾರ್ಯಕ್ರಮಗಳನ್ನು ನಡೆ ಸುತ್ತಿದೆ ಎಂದು ಐಯುಸಿಇಇ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಕೃಷ್ಣ ವೆದುಲಾ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಲೇಜಿನ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಯ ರಾಕೇಶ್‌ ಲೋಬೊ, ಮಾಧ್ಯಮ ಸಲಹೆಗಾರ ಇ. ಫೆರ್ನಾಂಡಿಸ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.