ಏಣಿತ್ತಡ್ಕ: ಹೊಳೆ ದಾಟುತ್ತಿದ್ದ ವೇಳೆ ತೆಪ್ಪ ಮಗುಚಿ ಮಹಿಳೆ ಮೃತ್ಯು


Team Udayavani, Jan 22, 2023, 9:13 PM IST

ಏಣಿತ್ತಡ್ಕ: ಹೊಳೆ ದಾಟುತ್ತಿದ್ದ ವೇಳೆ ತೆಪ್ಪ ಮಗುಚಿ ಮಹಿಳೆ ಮೃತ್ಯು

ಆಲಂಕಾರು: ಕೊಬಲ ಗ್ರಾಮದ ಏಣಿತ್ತಡ್ಕದಲ್ಲಿ ಕುಮಾರಧಾರ ನದಿಯಲ್ಲಿ ತೆಪ್ಪ ಮಗುಚಿ ಮಹಿಳೆಯೋರ್ವರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.

ಏಣಿತ್ತಡ್ಕ ನಿವಾಸಿ ಬಾಳಪ್ಪ ನಾಯ್ಕ ಅವರ ಪತ್ನಿ ಗೀತಾ (46) ಮೃತಪಟ್ಟ ಮಹಿಳೆ. ದನದ ಮೇವು ಸಂಗ್ರಹಿಸಿಕೊಂಡು ಕುಮಾರಧಾರ ಹೊಳೆಯನ್ನು ತೆಪ್ಪದ ಮೂಲಕ ದಾಟುತ್ತಿದ್ದಾಗ ಘಟನೆ ನಡೆದಿದೆ. ಜತೆಗಿದ್ದ ಇನ್ನಿಬ್ಬರು ಮಹಿಳೆಯರು ಈಜಿ ದಡ ಸೇರಿದ್ದಾರೆ.

ಏಣಿತ್ತಡ್ಕ ನಿವಾಸಿಗಳಾದ ಗೀತಾ, ಸುನಂದ, ವಿದ್ಯಾ ಅವರು ಜತೆಯಾಗಿ ಕುಮಾರಧಾರ ನದಿಯ ಏಣಿತ್ತಡ್ಕದ ಇನ್ನೊಂದು ಮಗ್ಗುಲ್ಲಲಿರುವ ಅರೆಲ್ತಡ್ಕ ಎಂಬಲ್ಲಿಗೆ ತೆಪ್ಪದ ಮೂಲಕ ತೆರಳಿ ದನದ ಮೇವು ಸಂಗ್ರಹಿಸಿ ಗೋಣಿ ಚೀಲದಲ್ಲಿ ತುಂಬಿಸಿಕೊಂಡು ವಾಪಸ್ಸಾಗುತ್ತಿದ್ದರು. ತೆಪ್ಪ ನದಿ ಮದ್ಯಕ್ಕೆ ಬರುತ್ತಿದ್ದಂತೆ ಜೋರಾದ ಗಾಳಿಬೀಸಿ ತೆಪ್ಪ ಮಗುಚಿ ಬಿದ್ದಿದೆ. ಈ ಸಂದರ್ಭ ನೀರಿಗೆ ಬಿದ್ದ ಹುಲ್ಲಿನ ಮೂಟೆಗಳನ್ನು ಹಿಡಿದುಕೊಂಡು ಈಜಿದ ಸುನಂದ ಮತ್ತು ವಿದ್ಯಾ ದಡ ಸೇರಿದ್ದಾರೆ. ಆದರೆ ಗೀತಾ ಅವರು ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ವಿಷಯ ತಿಳಿದ ಸ್ಥಳೀಯರಾದ ನವೀನ, ರಾಮಕೃಷ್ಣ, ಸುಂದರ ಚೆಕ್ಕಿತ್ತಡ್ಕ, ನೇತ್ರಾಕ್ಷ ಕೂಡಲೇ ನದಿಗಿಳಿದು ಹುಡಿಕಿದರೂ ಅವರು ಅದಾಗಲೇ ಕೊನೆಯುಸಿರೆಳೆದಿದ್ದರು. ಮೃತರು ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಸ್ಥಳಕ್ಕೆ ಕಡಬ ಠಾಣಾ ಎಸ್‌ ಐ ಶಿವರಾಮ, ಕಾನ್ಸ್ ಸ್ಟೇಬಲ್ ಚಂದನ್‌ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತರ ಪತಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮಡಿಕೇರಿ ಕಾಫಿ ತೋಟದೊಳಗೆ ಗೋವುಗಳ ಕಳೇಬರ ಪತ್ತೆ: ಠಾಣೆಯಲ್ಲಿ ಪ್ರಕರಣ ದಾಖಲು

ಟಾಪ್ ನ್ಯೂಸ್

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.