‘ಜ್ಞಾನದೀಪ’ದಲ್ಲಿ ರಂಜಿಸಿದ ವಿದ್ಯಾರ್ಥಿಗಳ ಸಾಹಸ ಪ್ರದರ್ಶನ
Team Udayavani, Apr 13, 2018, 11:12 AM IST
ಸುಳ್ಯ: ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮ, ಸಾಹಸ ಪ್ರದರ್ಶನ ಮನರಂಜಿಸಿದವು.
ನೆಲ್ಲೂರು ಕೆಮ್ರಾಜೆ ಗ್ರಾ.ಪಂ. ಅಧ್ಯಕ್ಷ ದಿವಾಕರ ಎರ್ಮೆಟ್ಟಿ ಧ್ವಜಾರೋಹಣ ಮಾಡಿದರು. ಜ್ಞಾನದೀಪ ವಿಶ್ವಸ್ಥ ಮಂಡಳಿಯ ಅಧ್ಯಕ್ಷ ಚಂದ್ರಶೇಖರ ಭಟ್ ತಳೂರು ಸಭಾಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ದಯಾನಂದ ಕೆ.ಎನ್., ದುಗ್ಗಪ್ಪ ಮಾಸ್ತರ್ ಕುಳ್ಳಂಪಾಡಿ ಉಪಸ್ಥಿತರಿದ್ದರು. ಅನಂತರ ಶಾಲಾ ವಿದ್ಯಾರ್ಥಿಗಳಿಂದ ಯಕ್ಷಗಾನ ನಡೆಯಿತು.
ಸಂಜೆ ನಡೆದ ಹೊನಲು ಬೆಳಕಿನ ಸಾಹಸ, ಯೋಗ, ಬಯಲು ರಂಗ ಪ್ರದರ್ಶನ ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನಿರ್ದೇಶಕ ಅಕ್ಷಯ್ ಕೆ.ಸಿ ಉದ್ಘಾಟಿಸಿ, ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಭಾರತೀಯ ಪರಂಪೆಯ ಶಿಕ್ಷಣ ನೀಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಎಲಿಮಲೆ ಜ್ಞಾನದೀಪ ವಿದ್ಯಾ ಸಂಸ್ಥೆಯಲ್ಲಿ ನೀಡುತ್ತಿರುವ ಶಿಕ್ಷಣ ವಿದ್ಯಾರ್ಥಿಗಳನ್ನು ಸದೃಢ ವ್ಯಕ್ತಿಯನ್ನಾಗಿ ರೂಪಿಸಲು ಪೂರಕ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Prajwal Revanna ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ ಐಟಿ ಅಧಿಕಾರಿಗಳ ವಶಕ್ಕೆ
Ballari ಒನ್ ಕೇಂದ್ರದಲ್ಲಿ ಕಳವು ಮಾಡಿದ್ದ ಆರೋಪಿ ಬಂಧನ; ಮತ್ತೊಬ್ಬ ಪರಾರಿ
Subrahmanya ಪರಿಸರದಲ್ಲಿ ಧಾರಾಕಾರ ಮಳೆ: ಕೆಲವೆಡೆ ಹಾನಿ
Mangaluru ನಮಾಜ್ ಪ್ರಕರಣ: ಬಿ ರಿಪೋರ್ಟ್ ಸಲ್ಲಿಕೆ; ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ
TIME ನಿಯತಕಾಲಿಕ: ಜಾಗತಿಕ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್