ಇ – ಶ್ರಮ ಪೋರ್ಟಲ್‌: ಹೆಸರು ನೋಂದಣಿಗೆ ಸೂಚನೆ


Team Udayavani, Dec 2, 2021, 5:26 AM IST

ಇ – ಶ್ರಮ ಪೋರ್ಟಲ್‌: ಹೆಸರು ನೋಂದಣಿಗೆ ಸೂಚನೆ

ಮಂಗಳೂರು: ಅಸಂಘಟಿತ ಕಾರ್ಮಿಕರ ಸಮಗ್ರ ದತ್ತಾಂಶವನ್ನು ಸಿದ್ಧಪಡಿಸಲು ಜಿಲ್ಲೆಯಲ್ಲಿರುವ 16ರಿಂದ 59 ವರ್ಷದೊಳಗಿನ ಅಸಂಘಟಿತ ಕಾರ್ಮಿಕರನ್ನು ಕಡ್ಡಾಯ ವಾಗಿ ಈ ಶ್ರಮ ಪೋರ್ಟಲ್‌ನಲ್ಲಿ ನೋಂದಾಯಿಸುವಂತೆ ಜಿಲ್ಲಾಧಿ ಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಕಾರ್ಮಿಕ ಇಲಾಖೆಯ ಅಧಿ ಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಏನೇನು ಲಾಭ
ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ಡಾಟಾಬೇಸ್‌ ರಚಿಸುವ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪೋರ್ಟಲ್‌ನಲ್ಲಿ ನೊಂದಾ ಯಿಸುವುದರಿಂದ ಅಸಂಘಟಿತ ಕಾರ್ಮಿ ಕರು ಕೇಂದ್ರ ಹಾಗೂ ರಾಜ್ಯ ಸರಕಾರದ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಯೋಜನೆಗಳ ಲಾಭ ಪಡೆಯುತ್ತಾರೆ. ಅಲ್ಲದೇ ಸರಕಾರಕ್ಕೆ ವಿಶೇಷ ನೀತಿಗಳು ಹಾಗೂ ಯೋಜನೆಗಳನ್ನು ರೂಪಿಸಲು ಅನುಕೂಲವಾಗಲಿದೆ. ಕಾರ್ಮಿಕರು ಆಕಸ್ಮಿಕವಾಗಿ ಸಾವಿಗೀಡಾದರೆ ಹಾಗೂ ಪೂರ್ಣ ಅಂಗವೈಕಲ್ಯಕ್ಕೆ ಒಳಗಾದರೆ ಎರಡು ಲಕ್ಷ ರೂ.ಗಳ ನೆರವು ಪಡೆಯ ಲಿದ್ದಾರೆ. ಪ್ರಮುಖವಾಗಿ ಇದು ವಲಸೆ ಕಾರ್ಮಿಕರನ್ನು ಪತ್ತೆ ಹಚ್ಚಲು ನೆರವು ನೀಡುತ್ತದೆ ಹಾಗೂ ಅವರಿಗೆ ಉದ್ಯೋಗವಕಾಶಗಳನ್ನು ಒದಗಿಸಿಕೊಡುತ್ತದೆ ಎಂದು ಹೇಳಿದರು.

16ರಿಂದ 59 ವರ್ಷದೊಳಗಿ ನವರು, ಇಎಸ್‌ ಐ ಹಾಗೂ ಪಿಎಫ್‌ ಇರದ, ಆದಾಯ ತೆರಿಗೆಗೆ ಒಳಪಡದವರು, ಆಧಾರ್‌ ಕಾರ್ಡ್‌, ಆಧಾರ್‌ಗೆ ಜೋಡಣೆಯಾದ ಮೊಬೈಲ್‌ ಸಂಖ್ಯೆ ಹಾಗೂ ಬ್ಯಾಂಕ್‌ ಖಾತೆ ವಿವರಗಳನ್ನು ಇ-ಶ್ರಮ ಪೋರ್ಟಲ್‌ www.eshram.gov.in ನಲ್ಲಿ ಸ್ವಯಂ ನೋಂದಣಿ ಮಾಡಿ ಕೊಳ್ಳಬಹುದು ಎಂದು ಹೇಳಿದರು.
ಈ ಶ್ರಮ ಪೋರ್ಟಲ್‌ನಲ್ಲಿ ನೋಂದಣಿ ಉಚಿತ ವಾಗಿದ್ದು, ನೋಂದಣಿಯ ಅನಂತರ ಫಲಾನುಭವಿ ಗಳು ಗುರುತಿನ ಚೀಟಿ ಪಡೆಯಬಹುದಾಗಿದೆ. ಅಸಂಘಟಿತ ವಲಯದ ಕಾರ್ಮಿಕರ ನೋಂದಣಿ ಪ್ರಕ್ರಿಯೆ ಪರಿಶೀಲಿಸಿ ಜಿಲ್ಲಾ ಮಟ್ಟದ ಜಾರಿ ಸಮಿತಿ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಇದನ್ನೂ ಓದಿ:ನವೆಂಬರ್‌ ಜಿಎಸ್‌ಟಿ ಸಂಗ್ರಹ 1.31 ಲಕ್ಷ ಕೋ.ರೂ.

ಜಿ. ಪಂ. ಸಿಇಒ ಡಾ| ಕುಮಾರ್‌, ಮನಪಾ ಆಯುಕ್ತ ಅಕ್ಷಯ್‌ ಶ್ರೀಧರ್‌, ಸಹಾಯಕ ಕಾರ್ಮಿಕ ಆಯುಕ್ತ ಶಿವಕುಮಾರ್‌, ಕಾರ್ಮಿಕ ಅಧಿಕಾರಿಗಳಾದ ಕಾವೇರಿ, ಅಮರೇಂದ್ರ, ಕಾರ್ಮಿಕ ನಿರೀಕ್ಷಕರು, ಬೀಡಿ, ಟೈಲರಿಂಗ್‌, ಅಕ್ಕಸಾಲಿಗ ಸೇರಿದಂತೆ ವಿವಿಧ ಅಸಂಘಟಿತ ವಲಯಗಳ ಒಕ್ಕೂಟಗಳ ಅಧ್ಯಕ್ಷರು, ಪದಾಧಿಕಾರಿಗಳು ಸಭೆಯಲ್ಲಿ ಹಾಜ ರಿದ್ದರು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.