ಪ್ರತಿ ಶನಿವಾರ ಅಹವಾಲು ಸ್ವೀಕಾರ: ಖಾದರ್‌


Team Udayavani, Aug 5, 2018, 10:52 AM IST

5-agust-4.jpg

ಉರ್ವಸ್ಟೋರ್‌: ನಗರಾಭಿವೃದ್ಧಿ ಪ್ರಾಧಿಕಾರದಿಂದ ಅರ್ಜಿಗಳ ವಿಲೇವಾರಿಯಲ್ಲಿ ಆಗುತ್ತಿರುವ ವಿಳಂಬ ಮತ್ತು ಮಧ್ಯವರ್ತಿಗಳಿಂದ ತೊಂದರೆ ಯಾಗುತ್ತಿದೆ ಎಂಬ ದೂರುಗಳ ಹಿನ್ನೆಲೆ ಯಲ್ಲಿ ಸೆಪ್ಟಂಬರ್‌ ತಿಂಗಳಿನಿಂದ ಪ್ರತಿ ಶನಿವಾರ ‘ಜನ ಸಾಮಾನ್ಯರ ಬಳಿಗೆ ಮುಡಾ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ. ಖಾದರ್‌ ತಿಳಿಸಿದ್ದಾರೆ.

ಮುಡಾ ಕಚೇರಿಯಲ್ಲಿ ನಡೆದ ಮುಡಾ ಅದಾಲತ್‌ ಹಾಗೂ ಅಹವಾಲು ಸ್ವೀಕಾರ ಸಭೆಯ ಬಳಿಕ ಅವರು ಶನಿವಾರ ಸುದ್ದಿಗಾರರ ಜತೆ ಮಾತನಾಡಿದರು. ಬಜಪೆ, ಮೂಲ್ಕಿ, ಸುರತ್ಕಲ್‌ ಹಾಗೂ ಉಳ್ಳಾಲದಲ್ಲಿ ಪ್ರತಿ ಶನಿವಾರ ಅಂದರೆ ತಿಂಗಳ ನಾಲ್ಕು ಶನಿವಾರ ತಲಾ ಒಂದೊಂದು ಹೋಬಳಿಯಂತೆ ಮುಡಾ ಅಧಿಕಾರಿಗಳ ತಂಡ ತೆರಳಿ ಸ್ಥಳದಲ್ಲೇ ಅರ್ಜಿ ಸ್ವೀಕರಿಸಲು ಕ್ರಮ ಕೈಗೊಳ್ಳಲಾಗುವುದು. ಅನಂತರ ಪರಿಶೀಲನೆ ನಡೆಸಿ ಬಳಿಕ ಮೂರೇ ದಿನಗಳಲ್ಲಿ ಸಮಸ್ಯೆ ಇತ್ಯರ್ಥವಾಗುವಂತೆ ನೋಡಿಕೊಳ್ಳಲಾಗುವುದು. ಜತೆಗೆ ಪ್ರತಿ ಆರು ತಿಂಗಳಿಗೊಮ್ಮೆ ಮುಡಾ ಕಚೇರಿಯಲ್ಲಿ ಅದಾಲತ್‌ ನಡೆಸಿ ಸಮಸ್ಯೆಗಳನ್ನು ಇತ್ಯರ್ಥಪಡಿಸಲಾಗುವುದು. ಮಧ್ಯವರ್ತಿಗಳ ಹಾವಳಿ ತಡೆಯಲು ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಕೆ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದರು.

ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ, ಶಾಸಕರಾದ ಡಿ. ವೇದವ್ಯಾಸ ಕಾಮತ್‌, ಉಮಾನಾಥ ಕೋಟ್ಯಾನ್‌, ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌, ಮೂಡಾ ಆಯುಕ್ತ ಶ್ರೀಕಾಂತ್‌ ರಾವ್‌, ಮನಪಾ ಆಯುಕ್ತ ಮುಹಮ್ಮದ್‌ ನಝೀರ್‌ ಮತ್ತಿತರರು ಉಪಸ್ಥಿತರಿದ್ದರು. 

ರಾಜ್ಯದಲ್ಲೇ ಮೊದಲ ಬಾರಿಗೆ ಮುಡಾ ಅದಾಲತ್‌
ರಾಜ್ಯದಲ್ಲೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಮುಡಾ ಅದಾಲತ್‌ನ್ನು ಶನಿವಾರ ನಡೆಸಲಾಗಿದೆ. ಸ್ವೀಕರಿಸಲಾದ ಒಟ್ಟು 116 ಪ್ರಕರಣಗಳಲ್ಲಿ 77 ಪ್ರಕರಣಗಳನ್ನು ಪರಿಶೀಲಿಸಲಾಗಿದೆ. 40ಕ್ಕೂ ಹೆಚ್ಚು ಪ್ರಕರಣಗಳನ್ನು ಕಾಲ ಮಿತಿಯೊಳಗೆ ಪರಿಹರಿಸಲು ಸೂಚನೆ ನೀಡಲಾಗಿದೆ. ಮಿಕ್ಕ ಕೆಲ ಪ್ರಕರಣಗಳಲ್ಲಿ ಅರ್ಜಿದಾರರಿಂದಲೇ ನಿಯಮ ಉಲ್ಲಂಘನೆ ಆಗಿರುವುದು ಕಂಡು ಬಂದಿರುವುದರಿಂದ ಅವುಗಳನ್ನು ಕಾಲ ಮಿತಿಯೊಳಗೆ ಬಗೆಹರಿಸಲು ಸೂಚಿಸಲಾಗಿದೆ. ಕೆಲವು ನಿರ್ದಿಷ್ಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಶೋಕಾಸ್‌ ನೋಟೀಸ್‌ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದ ಅವರು, ಲೇಔಟ್‌ ರೂಲ್ಸ್‌ ಅಪ್ರೂವಲ್ ಗೆ ಸಂಬಂಧಿಸಿ ಶೀಘ್ರವೇ ನೀತಿ ನಿರೂಪಿಸಲ್ಪಡುವುದರಿಂದ ಹಲವು ಸಮಸ್ಯೆಗಳು ಪರಿಹಾರಗೊಳ್ಳಲಿವೆ ಎಂದು ಸಚಿವ ಖಾದರ್‌ ತಿಳಿಸಿದರು

ನೇರವಾಗಿ ಆಯುಕ್ತರನ್ನೇ ಭೇಟಿಯಾಗಿ
ಇದೇ ವೇಳೆ ಮುಡಾ ಕಚೇರಿ ಯಲ್ಲಿ ಮಧ್ಯವರ್ತಿಗಳ ಹಾವಳಿಯಿಂದಾ ಗುತ್ತಿ ರುವ ಸಮಸ್ಯೆ ಬಗ್ಗೆ ಜನಸಾಮಾನ್ಯರು ಅಸಮಾಧಾನ ವ್ಯಕ್ತಪಡಿಸಿದರು.ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಏಕ ನಿವೇಶನ, ವಲಯ ದೃಢೀಕರಣ ಪತ್ರ ಸೇರಿದಂತೆ ಮುಡಾಗೆ ಸಂಬಂಧಿಸಿದ ಯಾವುದೇ ಕೆಲಸ ಕಾರ್ಯಗಳಿಗೆ ಅರ್ಜಿದಾರರು ಮಧ್ಯವರ್ತಿಗಳನ್ನು ಆಶ್ರಯಿಸದೆ ನೇರವಾಗಿ ಆಯುಕ್ತರನ್ನೇ ಭೇಟಿಯಾಗಬಹುದು. ಒಂದು ವೇಳೆ ಅವರಿಂದ ಕೆಲಸ ಸಾಧ್ಯವಾಗದಿದ್ದಲ್ಲಿ ಜಿಲ್ಲಾಧಿಕಾರಿ ಅಥವಾ ಜನಪ್ರತಿನಿಧಿಗಳನ್ನು ಭೇಟಿಯಾಗಿ ಸಮಸ್ಯೆ ಬಗೆ ಹರಿಸಿಕೊಳ್ಳಬೇಕು ಎಂದು ಸಚಿವ ಯು.ಟಿ. ಖಾದರ್‌ ಅವರು ಹೇಳಿದರು. 

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.