ನಿಡ್ಡೋಡಿಗೆ ಸೀಫುಡ್ ಪಾರ್ಕ್ ಬೇಕೆನ್ನುವವರು ಕಾರವಾರಕ್ಕೆ ಹೋಗಿ ಅಧ್ಯಯನ ಮಾಡಲಿ : ಅಭಯಚಂದ್ರ

ನಿಡ್ಡೋಡಿಯ ಪ್ರಸ್ತಾವಿತ ಸೀಫುಡ್ ಪಾರ್ಕ್  ನಿಂದ ಪರಿಸರ ಮಾಲಿನ್ಯ ಖಂಡಿತ

Team Udayavani, Jul 1, 2021, 9:31 PM IST

Ex Minister Statementy On Niddidi Seafud Park

ಮೂಡುಬಿದಿರೆ : ನಿಡ್ಡೋಡಿಯ ಪ್ರಸ್ತಾವಿತ ಸೀಫುಡ್ ಪಾರ್ಕ್ನಿಂದ ಪರಿಸರ ಮಾಲಿನ್ಯ ವ್ಯಾಪಕವಾಗಿ ಹರಡಲಿದೆ. ಜಲ ಸಂಪನ್ಮೂಲ ಕಲುಷಿತವಾಗಿ ಕೃಷಿ ಚಟುವಟಿಕೆಗಳಿಗೆ ಮಾರಕವಾಗಿ ಪರಿಣಮಿಸಲಿದೆ. ಇಂಥ ಯೋಜನೆ ನಿಡ್ಡೋಡಿಗೆ ತಕ್ಕುದಾಗಿಲ್ಲ’ ಎಂದು ಮಾಜಿ ಸಚಿವ ಕೆ. ಅಭಯಚಂದ್ರ ಅಭಿಪ್ರಾಯಪಟ್ಟರು.

ಮೂಡುಬಿದಿರೆ ಪ್ರೆಸ್‌ ಕ್ಲಬ್‌ ನಲ್ಲಿ ಗುರುವಾರ ತುರ್ತಾಗಿ ಕರೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ` ನಿಡ್ಡೋಡಿಗೆ ಸೀಫುಡ್ ಪಾರ್ಕ್ ಬೇಕೆಂಬುವವರು ಕಾರವಾರದಲ್ಲಿ ಹಲವಾರು ವರ್ಷಗಳ ಹಿಂದೆ ಸ್ಥಾಪನೆಯಾಗಿ, ಬಳಿಕ ನಡೆಸಲಾಗದೆ, ಗುತ್ತಿಗೆಗೆ ಕೊಟ್ಟು , ಅದೂ ನಡೆಯದೆ ಬಾಗಿಲು ಹಾಕಿಕೊಂಡು ಏಳುವರ್ಷಗಳೇ ಸಂದಿವೆ ಎಂಬುದನ್ನು ನೋಡಿ ಬರಲಿ. ಅದನ್ನು ಇನ್ನೂ ತೆರವು ಮಾಡಿಸಲಾಗಿಲ್ಲ. ಅದೀಗ ಭೂತ್ ಬಂಗಲೆಯಂತಾಗಿದೆ. ಮೀನುಗಾರಿಕಾ ಸಚಿವನಾಗಿ ಇಂಥ ಪಾರ್ಕ್ ಅಂದರೆ ಎಷ್ಟು ಬೋಗಸ್ ಚಟುವಟಿಕೆಗಳಿಗೆ ಆಸ್ಪದ ಕೊಡುವಂಥದ್ದು ಎಂದು ನನಗೆ ತಿಳಿದಿದೆ’ ಎಂದರು.

ಇದನ್ನೂ ಓದಿ : ಕಾಂಗ್ರೆಸ್ ಜೆಡಿಎಸ್‌ ಗೆ ಅಧಿಕಾರ ಕೊಟ್ಟರೂ ಉಳಿಸಿಕೊಳ್ಳಲಿಲ್ಲ : ಸಿದ್ದರಾಮಯ್ಯ ಲೇವಡಿ

ನಿಡ್ಡೋಡಿಯಲ್ಲಿ ಜನರಿಗೆ ಸತ್ಯ ಸಂಗತಿ ತಿಳಿಸದೆ, ಜನರ ಆಕ್ಷೇಪಕ್ಕೆ ಬೆಲೆ ಕೊಡದೆ, ಈ ಯೋಜನೆ ಬರುವುದಾದಲ್ಲಿ ನನ್ನ ತೀವ್ರ ವಿರೋಧವಿದೆ. ಈ ಹಿಂದೆ ಉಷ್ಣ ವಿದ್ಯುತ್ ಸ್ಥಾವರ ಸ್ಥಾಪನೆಯ ವಿರುದ್ಧ, ಬಾಸ್ಕೇಟ್  ಗಣಿಗಾರಿಕೆಯ ಪ್ರಸ್ತಾವನೆಯ ವಿರುದ್ಧ ಹೋರಾಡಿದ್ದೆ. ವಿಧಾನಪರಿಷತ್ ಸದಸ್ಯನಾಗಿದ್ದಾಗ ಕಡಂದಲೆಯ ಏಂಜೆಲ್ ಹಾರ್ಡ್ ಬಣ್ಣದ ಕಾರ್ಖಾನೆಯ ವಿರುದ್ಧ ನಡೆದ ಹೋರಾಟದಲ್ಲಿ ಈಗ ಸಂಸದರಾಗಿರುವ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಕೂಡಾ ಪಾಲ್ಗೊಂಡಿದ್ದನ್ನು ಗಮನಿಸಬೇಕು. ಪುತ್ತೂರಿನಿಂದ ಎತ್ತಂಗಡಿ ಮಾಡಲ್ಪಟ್ಟಿರುವ ಈ ಸೀಫುಡ್ ಪಾರ್ಕ್ ನಿಡ್ಡೋಡಿಗೆ ಬರಲು ಹವಣಿಸುತ್ತಿರುವುದು ಖಂಡನೀಯ. ನಿಡ್ಡೋಡಿಯಲ್ಲಿ ಸ್ವಂತ ಹಾಗೂ ಅಕ್ರಮ ಸಕ್ರಮ ಮೂಲಕ ಭೂಮಿ ಪಡೆದುಕೊಂಡವರು ಕಷ್ಟದಿಂದ ತೋಟ, ಕೃಷಿ ಮಾಡಿ ದೇಶಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ, ಅವರನ್ನೆಲ್ಲ ಒಕ್ಕಲೆಬ್ಬಿಸುವ ಬೆದರಿಕೆಯ ಮಾತು ನಾಯಕರಿಂದ ಕೇಳಿಬರುತ್ತಾ ಇದೆ. ಹಾಗೊಂದು ವೇಳೆ ಭೂಮಿ ಸೆಳೆದುಕೊಂಡರೆ ಸಂತ್ರಸ್ತರು, ಹೋರಾಟಗಾರರು ಜೈಲಿಗೆ ಹೋಗುವ ಪರಿಸ್ಥಿತಿ ಬರುತ್ತದೆ. ನಾನು ಆಗ ಅವರ ಪರ ನಿಲ್ಲಲೇಬೇಕಾಗುತ್ತದೆ’ ಎಂದು ಪ್ರಕಟಿಸಿದರು.

ನಿಡ್ಡೋಡಿಗೆ ಮೆಡಿಕಲ್ ಕಾಲೇಜು, ಪರಿಸರ ಸಹ್ಯ ಉದ್ಯಮ

ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜಿಗೆಂದು ಗುರುತಿಸಿದ್ದ ಭೂಮಿಯಲ್ಲಿ ಸೀಫುಡ್ ಪಾರ್ಕ್ ಸ್ಥಾಪಿಸಲು ಹೊರಟಾಗ ನಡೆದ ಹೋರಾಟದಲ್ಲಿ ಅಲ್ಲಿನವರು ಯಶಸ್ವಿಯಾಗಿದ್ದಾರೆ. ಈಗಲೂ ಕಾಲಮಿಂಚಿಲ್ಲ. ನಿಡ್ಡೋಡಿಯಲ್ಲೂ ಮೆಡಿಕಲ್ ಕಾಲೇಜಾಗಲಿ ಅಥವಾ ಇನ್‌ಫೋಸಿಸ್‌ನಂಥ ಉದ್ಯಮ ಬರಲಿ; ಅಂಥದ್ದು ಬರುವುದಾದರೆ ಸ್ವಾಗತಾರ್ಹ’ ಎಂದು ಅಭಯಚಂದ್ರ ಹೇಳಿದರು.

ಇದನ್ನೂ ಓದಿ :  ಮುಖ್ಯಮಂತ್ರಿಗಳಿಗೆ 40 ಐ.ಸಿ.ಯು ಹಾಸಿಗೆಗಳು ಹಾಗೂ  ವೈದ್ಯಕೀಯ ಉಪಕರಣಗಳ ಹಸ್ತಾಂತರ 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.