ಅನಿಲ ಭಾಗ್ಯ ಎಲ್ಲ ವರ್ಗಕ್ಕೂ ವಿಸ್ತರಣೆ
Team Udayavani, Mar 3, 2018, 1:00 PM IST
ಸುಳ್ಯ: ಅರಣ್ಯ ಇಲಾಖೆ ಮೂಲಕ ಪ. ಜಾತಿ ಮತ್ತು ವರ್ಗದವರಿಗೆ ನೀಡುವ ಅನಿಲ ಭಾಗ್ಯ ಯೋಜನೆಯನ್ನು ಎಲ್ಲ ವರ್ಗದ ಬಿಪಿಎಲ್ ಪಡಿತರದಾರರಿಗೂ ವಿಸ್ತರಿಸಲಾಗುವುದು ಎಂದು ಸಚಿವ ಬಿ.ರಮಾನಾಥ ರೈ ಹೇಳಿದರು.
ಸುಳ್ಯ ಪುರಭವನದಲ್ಲಿ ಕಂದಾಯ ಇಲಾಖೆ ವತಿಯಿಂದ ನಡೆದ 94ಸಿ ಮತ್ತು 94 ಸಿಸಿ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಹಕ್ಕು ಪತ್ರ ಮತ್ತು ವಿವಿಧ ಇಲಾಖಾ ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಎಲ್ಲ ಸಮುದಾಯದವರಿಗೂ ಈ ಸೌಲಭ್ಯ ನೀಡುವ ನಿಟ್ಟಿನಲ್ಲಿ ರಾಜ್ಯ ಸರಕಾರ ಅನಿಲ ಭಾಗ್ಯದ ಸೌಲಭ್ಯವನ್ನು ವಿಸ್ತರಿಸಲಿದ್ದು, ಎಲ್ಲರಿಗೂ ಪ್ರಯೋಜನ ದೊರೆಯಲಿದೆ ಎಂದು ನುಡಿದರು.
ಸ್ವಾಭಿಮಾನದ ಬದುಕು
ಕಾಲಕಾಲಕ್ಕೆ ಅಧಿಕಾರಕ್ಕೆ ಬಂದ ಸರಕಾರಗಳು ಜಾರಿಗೆ ತಂದ ಕಾರ್ಯ ಕ್ರಮಗಳು ಜನರ ಆರ್ಥಿಕ ಮತ್ತು ಸಾಮಾಜಿಕ ಬಲವರ್ಧನೆಗೆ ಪೂರಕವಾಗಿದೆ. 94ಸಿ ಮತ್ತು 94ಸಿಸಿ ಯೋಜನೆಗಳನ್ನು ಜಾರಿಗೆ ತಂದ ಕಾರಣ ಸರಕಾರಿ ಸ್ಥಳದಲ್ಲಿ ಮನೆ ಕಟ್ಟಿ ವಾಸ್ತವ್ಯ ಹೂಡಿದ ಲಕ್ಷಾಂತರ ಮಂದಿಯ ಸ್ವಂತ ಭೂಮಿಯ ಕನಸು ನನಸಾಗಿದೆ ಎಂದವರು ನುಡಿದರು.
ಕುಮ್ಕಿ, ಪರಂಬೋಕು, ಅರಣ್ಯ ಗಡಿಯ ಬಫರ್ ಸ್ಥಳದಲ್ಲಿ ಮನೆ ಕಟ್ಟಿದವರಿಗೂ ಹಕ್ಕು ಪತ್ರ ನೀಡಲು ನಿರ್ಧರಿಸಲಾಗಿದೆ ಎಂದರು.
ಸಭಾಧ್ಯಕ್ಷತೆ ವಹಿಸಿದ್ದ ಶಾಸಕ ಎಸ್.ಅಂಗಾರ ಮಾತನಾಡಿ, ದುರ್ಬಲ ಸಮಾಜವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಅನೇಕ ಯೋಜನೆಗಳು ಪೂರಕವಾಗಿದ್ದು, ಜನರ ಸವಲತ್ತುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ