ಕರಾವಳಿಗೆ ಮುಂಗಾರು; ಈ ಬಾರಿ ಉತ್ತಮ ಮಳೆ ನಿರೀಕ್ಷೆ
Team Udayavani, Jun 15, 2019, 11:21 AM IST
ಮಂಗಳೂರು: ರಾಜ್ಯ ಕರಾವಳಿಗೆ ಮುಂಗಾರು ಪ್ರವೇಶಿಸಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಬಲಗೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಾಡಿಕೆಯಂತೆ ಜೂ.1ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುತ್ತದೆ. ಇದಾಗಿ ಒಂದೆರಡು ದಿನಗಳ ಬಳಿಕ ರಾಜ್ಯ ಕರಾವಳಿಯನ್ನು ಸ್ಪರ್ಶಿಸುತ್ತದೆ. ಈ ಬಾರಿ ಕೇರಳ ತೀರಕ್ಕೆ ಜೂ.9ಕ್ಕೆ ಮುಂಗಾರು ಆಗಮಿಸಿತ್ತು. ಆದರೆ “ವಾಯು’ ಚಂಡಮಾರುತದ ಪರಿಣಾಮ ಕರ್ನಾಟಕ ಕರಾವಳಿಗೆ ಮುಂಗಾರು ಅಪ್ಪಳಿಸುವಲ್ಲಿ ಒಂದು ವಾರ ತಡವಾಯಿತು.
ಕರಾವಳಿಯಲ್ಲಿ ಈ ಬಾರಿಯ ಪೂರ್ವ ಮುಂಗಾರು ದುರ್ಬಲ ವಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 227.1 ಮಿ.ಮೀ. ವಾಡಿಕೆ ಮಳೆ ಯಲ್ಲಿ ಕೇವಲ 77.6 ಮಿ.ಮೀ. ಮಳೆ ಬಂದು ಶೇ.66 ಮಳೆ ಕೊರತೆ, ಉಡುಪಿ ಜಿಲ್ಲೆಯಲ್ಲಿ 227.3 ಮಿ.ಮೀ. ವಾಡಿಕೆ ಮಳೆಯಲ್ಲಿ 14.4 ಮಿ.ಮೀ. ಮಳೆ ಸುರಿದು ಶೇ.94 ಮಳೆ ಕೊರತೆ ಕೊಡಗು ಜಿಲ್ಲೆಯಲ್ಲಿ ಶೇ.48 ಮಳೆ ಕೊರತೆ ಉಂಟಾಗಿದೆ.
ದ. ಭಾರತದಲ್ಲಿ ಈ ಬಾರಿ ಮುಂಗಾರು ಉತ್ತಮವಾಗಿರಲಿದ್ದು, ಶೇ.93ರಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ. ಜಿಲ್ಲೆಯಲ್ಲಿ ಕಳೆದ ವರ್ಷ ಮುಂಗಾರು ಉತ್ತಮವಾಗಿತ್ತು. ಜೂ.1ರಿಂದ ಸೆಪ್ಟಂಬರ್ ಕೊನೆಯವರೆಗೆ 3,551 ಮಿ.ಮೀ. ಮಳೆ ಸುರಿದು ಶೇ.3ರಷ್ಟು ಮಳೆ ಪ್ರಮಾಣ ಹೆಚ್ಚಳವಾಗಿತ್ತು. ಉಡುಪಿ ಜಿಲ್ಲೆಯಲ್ಲಿ ಕೊಂಚ ಕಡಿಮೆ ಮಳೆಯಾಗಿದ್ದು, 3,784 ಮಿ.ಮೀ. ಮಳೆ ಸುರಿದು ಶೇ.7 ಮಳೆ ಕೊರತೆ ಇತ್ತು.
ಸಾಧಾರಣ ಮಳೆ: ಕರಾವಳಿಯಲ್ಲಿ 2 ದಿನಗಳಿಂದ ಸುರಿಯುತ್ತಿದ್ದ ಮಳೆ ಶುಕ್ರವಾರ ತುಸು ಬಿಡುವು ನೀಡಿತ್ತು. ಮಂಗಳೂರು ನಗರದಲ್ಲಿ ಶುಕ್ರವಾರ ಬಿಟ್ಟು ಬಿಟ್ಟು ಮಳೆಯಾಗಿದೆ. ಉಡುಪಿ ಜಿಲ್ಲೆಯ ಮಣಿಪಾಲ, ಕುಂದಾಪುರ, ಕುಂಭಾಸಿ, ಕಾರ್ಕಳ, ಪಡುಬಿದ್ರಿ, ಕಾಪು, ಕೊಲ್ಲೂರು, ಕೋಟೇಶ್ವರದಲ್ಲಿ ಸಾಧಾರಣ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
MUST WATCH
ಹೊಸ ಸೇರ್ಪಡೆ
Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್ಶೀಟ್
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ