ಸ್ಮಾರ್ಟ್‌ ಸಿಟಿಯಾಗಲಿ ಬೇಗ; ಉಳಿದವೂ ಕಾರ್ಯಗತಗೊಳ್ಳಲಿ

ಕೇಂದ್ರ-ರಾಜ್ಯದಲ್ಲಿ ಬಿಜೆಪಿ ಸರಕಾರ: ಕರಾವಳಿಗರ ಬೆಟ್ಟದಷ್ಟು ನಿರೀಕ್ಷೆ

Team Udayavani, Jul 28, 2019, 10:09 AM IST

charmadi

ಸಾಮಾನ್ಯವಾಗಿ ಕೇಂದ್ರ ಹಾಗೂ ರಾಜ್ಯದಲ್ಲಿ ಒಂದೇ ಪಕ್ಷದ ಸರಕಾರ ಬರುವುದೇ ಕಡಿಮೆ. ನಮ್ಮ ಅದೃಷ್ಟವೋ ಎಂಬಂತೆ ಎರಡೂ ಕಡೆ ಬಿಜೆಪಿ ಸರಕಾರ ಬಂದಿದೆ. ಜತೆಗೆ ಕರಾವಳಿಯ ಎರಡೂ ಜಿಲ್ಲೆಗಳ 13 ವಿಧಾನಸಭಾ ಕ್ಷೇತ್ರಗಳಲ್ಲಿ 12 ಹಾಗೂ ಎರಡೂ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷದ ಜನಪ್ರತಿನಿಧಿಗಳಿದ್ದಾರೆ. ಕಳೆದ ವರ್ಷ ರಾಜ್ಯ ಸರಕಾರದ ಸಹಕಾರವಿಲ್ಲ ಎನ್ನುತ್ತಿದ್ದರು ನಮ,¾ ಜನಪ್ರತಿನಿಧಿಗಳು. ಈಗ ಆ ಸಬೂಬು ಹೇಳದೇ ನನೆಗುದಿಗೆ ಬಿದ್ದಿರುವ ಜನರಿಗೆ ಪ್ರಯೋಜನಕಾರಿಯಾಗುವ ಹಲವು ಯೋಜನೆಗಳನ್ನು ತ್ವರಿತಗತಿಯಲ್ಲಿ ಜಾರಿಗೊಳಿಸಬೇಕು. ಜನಪ್ರತಿನಿಧಿಗಳೂ ತಮ್ಮದೇ ಸರಕಾರದ ಬೆನ್ನುಬಿದ್ದು ಯೋಜನೆ ಕಾರ್ಯಗತಗೊಳಿಸುವ ಮೂಲಕ ಹೊಣೆಯನ್ನು ಸಮರ್ಥವಾಗಿ ನಿಭಾಯಿಸಬೇಕು.

ವಿಶ್ವದರ್ಜೆಯ ರೈಲ್ವೇ ನಿಲ್ದಾಣ
ಮಂಗಳೂರು ನಗರಕ್ಕೆ ವಿಶ್ವದರ್ಜೆಯ ರೈಲ್ವೇ ನಿಲ್ದಾಣ ಮಂಜೂರು ಆಗಿ ಬಹಳಷ್ಟು ವರ್ಷಗಳಾಗಿವೆ. ಆದರೆ ಜಾಗದ ಸಮಸ್ಯೆಯಿಂದ ನನೆಗುದಿಯಲ್ಲಿದೆ. ಸುಮಾರು 60 ಎಕ್ರೆ ಜಾಗ ಹೆಚ್ಚುವರಿಯಾಗಿ ಬೇಕಿದ್ದು, ರಾಜ್ಯ ಸರಕಾರ ನೀಡಬೇಕು.

ಪ್ಲಾಸ್ಟಿಕ್‌ ಪಾರ್ಕ್‌
ಮಂಗಳೂರಿನಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ ಪ್ರಸ್ತಾವನೆಗೆ ಬಂದು 5 ವರ್ಷಗಳಾಗಿವೆ. ಕೇಂದ್ರ ಸರಕಾರ ಇದಕ್ಕೆ 1000 ಕೋ.ರೂ. ಅನುದಾನದ ಭರವಸೆ ನೀಡಿದೆ. ಇದು ಕಾರ್ಯಗತಗೊಂಡರೆ ಸಾವಿರಾರು ಮಂದಿಗೆ ಉದ್ಯೋಗ ಸಿಗಲಿದೆ. ಜಿಲ್ಲಾ ಕೈಗಾರಿಕಾ ಇಲಾಖೆಯಿಂದ ಪೂರಕ ಪ್ರಕ್ರಿಯೆ ಆರಂಭಗೊಂಡಿತ್ತು. ಬೈಕಂಪಾಡಿ ಹಾಗೂ ಮುಡಿಪಿನಲ್ಲಿ ಜಾಗ ಸಮೀಕ್ಷೆ ನಡೆದಿದ್ದರೂ ಭೂಸ್ವಾಧೀನ ಆಗಿಲ್ಲ. ಈ ಯೋಜನೆ ತ್ವರಿತಗತಿಯಲ್ಲಿ ಜಾರಿಗೊಳ್ಳಬೇಕು.

ಸ್ಮಾರ್ಟ್‌ ಸಿಟಿ ಯೋಜನೆ
ಮಂಗಳೂರು ನಗರಕ್ಕೆ ಸ್ಮಾರ್ಟ್‌ ಸಿಟಿ ಯೋಜನೆ ಅನುಷ್ಠಾನ ಪ್ರಾರಂಭಗೊಂಡು ಮೂರು ವರ್ಷಗಳಾದರೂ ಕಾಮಗಾರಿಗಳು ಮಂದಗತಿಯಲ್ಲೇ ಸಾಗಿವೆ. ಕೇಂದ್ರ-ರಾಜ್ಯ ಸರಕಾರದ ಸಹಭಾಗಿತ್ವದ ಈ ಯೋಜನೆಯ ಅನುಷ್ಠಾನಕ್ಕೆ ಈಗ ವೇಗ ದೊರಕಬೇಕು.

ರಾಷ್ಟ್ರೀಯ ಹೆದ್ದಾರಿ ಯೋಜನೆಗಳು
ಕಾರ್ಕಳ-ಕುಲಶೇಖರ ರಾಷ್ಟ್ರೀಯ ಹೆದ್ದಾರಿ ಚತುಷ್ಪಥವಾಗಿ ಉನ್ನತೀಕರಣ, ಮಂಗಳೂರು ಬೈಪಾಸ್‌ ರಸ್ತೆ (ಬಿ.ಸಿ.ರೋಡ್‌- ಕೈಕಂಬ- ಕಟೀಲು- ಮೂಲ್ಕಿ, ರಸ್ತೆ ಮತ್ತು ತೊಕ್ಕೊಟ್ಟು- ಮುಡಿಪು- ಮೆಲ್ಕಾರ್‌ ರಸ್ತೆ ಚತುಷ್ಪಥವಾಗಿಸುವುದು), ಕಾರ್ಕಳ- ಮೂಡುಬಿದಿರೆ- ಬಿ.ಸಿ. ರೋಡ್‌ ರಸ್ತೆ, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯಲ್ಲಿ 10,000 ಕೋ.ರೂ. ವೆಚ್ಚದ 23.6 ಕಿ.ಮೀ. ಸುರಂಗ ಮಾರ್ಗ ನಿರ್ಮಾಣ, ಮಂಗಳೂರು-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೇ, ಮಂಗಳೂರು-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ ಯೋಜನೆ, ಬಿ.ಸಿ. ರೋಡ್‌ -ಸುರತ್ಕಲ್‌ ರಾಷ್ಟ್ರೀಯ ಹೆದ್ದಾರಿ ಅಷ್ಟಪಥಗೊಳಿಸುವುದು, ಚಾರ್ಮಾಡಿ ರಸ್ತೆ ಅಭಿವೃದ್ಧಿ ಯೋಜನೆಗಳಿವೆ.

ಬಿ.ಸಿ.ರೋಡ್‌-ಅಡ್ಡಹೊಳೆ ಚತುಷ್ಪಥ
ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್‌-ಅಡ್ಡಹೊಳೆ ಕಾಮಗಾರಿ ಆರಂಭಗೊಂಡು ಅರ್ಧಕ್ಕೇ ನಿಂತಿದೆ. ಈ ಹೆದ್ದಾರಿಯು ಕಲ್ಲಡ್ಕ ಪೇಟೆಯ ಮೂಲಕ ಸಾಗುತ್ತದೆಯೇ ಆಥವಾ ಬೈಪಾಸ್‌ ಇದೆಯೇ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಇಲ್ಲಿ ಭೂಸ್ವಾಧೀನದ ಪ್ರಕ್ರಿಯೆ ನಡೆಯಬೇಕಿದ್ದು, ಪರ ವಿರೋಧದ ಅಭಿಪ್ರಾಯ ಕೇಳಿಬಂದು ಕಾಮಗಾರಿ ನಿಂತಿತ್ತು. ಪ್ರಸ್ತುತ  ಹೆದ್ದಾರಿ ಕಾಮಗಾರಿ ಅನುಷ್ಠಾನದ ಜವಾಬ್ದಾರಿ ಕೇಂದ್ರದ್ದಾದರೂ ಭೂಸ್ವಾಧೀನ ಪ್ರಕ್ರಿಯೆ ರಾಜ್ಯ ಸರಕಾರದ ಹೊಣೆ. ಹೀಗಾಗಿ ಇದರ ಅನುಷ್ಟಾನಕ್ಕೆ ಎರಡೂ ಸರಕಾರಗಳು ಗಮನ ಕೊಡಬೇಕು.

ಇನ್ನಷ್ಟು ಯೋಜನೆಗಳು
·   ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಭಿವೃದ್ಧಿ
·   ತೆಂಗು ಪಾರ್ಕ್‌
·   ವಿಶೇಷ ಕೃಷಿ ವಲಯ (ಎಸ್‌ಎಝಡ್‌)
·   ಐಟಿ ಪಾರ್ಕ್‌ ·   ಸ್ಮಾರ್ಟ್‌ಪೋರ್ಟ್‌
·   ಮಂಗಳೂರಿನಲ್ಲಿ ಕರಾವಳಿ ಆರ್ಥಿಕ ವಲಯ
(ಕೋಸ್ಟಲ್‌ ಎಕಾನಮಿಕ್‌ ಝೋನ್‌)
·   ಕುಳಾç ಮೀನುಗಾರಿಕಾ ಜೆಟ್ಟಿ ನಿರ್ಮಾಣ
·   ಮಂಗಳೂರು ರೈಲ್ವೇ ಪ್ರಾದೇಶಿಕ ಕಚೇರಿ
·   ಸಾಗರತೀರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸ್ವದೇಶಿ ದರ್ಶನ ಯೋಜನೆಗಳೆಲ್ಲಾ ಬಾಕಿ ಇವೆ. ಇವುಗಳ ಜಾರಿಗೆ ಎರಡೂ ಸರಕಾರಗಳು ಕೈ ಜೋಡಿಸಬೇಕು.

ಶೀಘ್ರಗತಿಯಲ್ಲಿ ಕಾರ್ಯರೂಪಕ್ಕೆ
ಕೇಂದ್ರದ ಜತೆಗ ಕರ್ನಾಟಕ ರಾಜ್ಯದಲ್ಲೂ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಿರುವುದರಿಂದ ಜಿಲ್ಲೆಯಲ್ಲಿ ಕೇಂದ್ರ ಸರಕಾರದ ವತಿಯಿಂದ ಈಗಾಗಲೇ ಅನುಷ್ಠಾನದಲ್ಲಿರುವ ಮತ್ತು ಪ್ರಸ್ತಾವನೆಯಲ್ಲಿರುವ ಯೋಜನೆಗಳಿಗೆ ವೇಗ ದೊರಕಲಿದೆ. ರೈಲ್ವೇ, ರಾಷ್ಟ್ರೀಯ ಹೆದ್ದಾರಿಗೆ  ಸಂಬಂಧಪಟ್ಟ ಯೋಜನೆಗಳು, ಎಸ್‌ಇಝಡ್‌, ಪ್ಲಾಸ್ಟಿಕ್‌ ಪಾರ್ಕ್‌ ಸೇರಿದಂತೆ ಹಲವಾರು ಯೋಜನೆಗಳು ಅನುಷ್ಠಾನ ಹಂತದಲ್ಲಿವೆ. ಆದರೆ ರಾಜ್ಯ ಸರಕಾರದ ವತಿಯಿಂದ ಸಹಕಾರವಿರಲಿಲ್ಲ. ಇನ್ನು ಅವೆಲ್ಲವೂ ಶೀಘ್ರಗತಿಯಲ್ಲಿ ಕಾರ್ಯರೂಪಕ್ಕೆ ಬರಲಿವೆ.
– ನಳಿನ್‌ ಕುಮಾರ್‌ ಕಟೀಲು,  ಸಂಸದರು, ದ.ಕನ್ನಡ ಲೋಕಸಭಾ ಕ್ಷೇತ್ರ

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.