ಚಾರಣ ವೇಳೆ ದುಬಾರಿ ಶುಲ್ಕ : ಹವ್ಯಾಸಿಗಳಲ್ಲಿ  ಬೇಸರ


Team Udayavani, Dec 23, 2018, 10:22 AM IST

23-december-3.gif

ಸುಬ್ರಹ್ಮಣ್ಯ : ಚಳಿಗಾಲ ಬಂತೆಂದರೆ ಸಾಕು ಚಾರಣಿಗರು ಪ್ರೇಕ್ಷಣೀಯ ಸ್ಥಳಗಳಿಗೆ ಚಾರಣಕ್ಕೆ ತೆರಳುವ ಹುಮ್ಮಸ್ಸಿನಲ್ಲಿರುತ್ತಾರೆ. ಇತ್ತೀಚೆಗಿನ ದಿನಗಳಲ್ಲಿ ಕುಮಾರ ಪರ್ವತಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಇಲ್ಲಿ ಚಾರಣಕ್ಕೆ ತೆರಳುವವರಿಗೆ ಚೆಕ್‌ ಪೋಸ್ಟ್‌ನಲ್ಲಿ ವಿಧಿಸುವ ಮೊತ್ತ ಚಾರಣಿಗರಿಗೆ ಬೇಸರ ತರಿಸಿದೆ.

ಪ್ರಕೃತಿ, ಚಾರಣ ಪ್ರೀಯರ ಸ್ವರ್ಗವೆಂದೆಣಿಸಿದ ಕುಮಾರ ಪರ್ವತಕ್ಕೆ ತೆರಳುವ ಚಾರಣಿಗರ ತಂಡಕ್ಕೆ ಚಾರಣ ವೇಳೆ ಬೆಟ್ಟ ಗುಡ್ಡ ಹತ್ತುವುದಕ್ಕಿಂತ ಹೆಚ್ಚು ಭಾರವಾಗುತ್ತಿರುವುದು ಚಾರಣ ವೇಳೆ ಚೆಕ್‌ಪೋಸ್ಟ್‌ನಲ್ಲಿ ವಿಧಿಸಲಾಗುತ್ತಿರುವ ಅಧಿಕ ಶುಲ್ಕ. ಇಲ್ಲಿ ಚಾರಣಿಗರ ತಂಡದ ಪ್ರತಿ ಸದಸ್ಯನಿಂದ 350 ರೂ. ಹಾಗೂ ವಿದೇಶಿ ಪ್ರಜೆಯಿಂದ 1,000 ರೂ. ನಂತೆ ಸ್ವೀಕರಿಸಲಾಗುತ್ತದೆ.

ರಾಜ್ಯದ ಮೂಲೆ ಮೂಲೆಗಳಿಂದ ತಂಡಗಳು ಸುಬ್ರಹ್ಮಣ್ಯದಿಂದ ಪ್ರತಿನಿತ್ಯ ಚಾರಣ ನಡೆಸುತ್ತವೆ. ದಿನಗಳಲ್ಲಿ ಸುಮಾರು ಹತ್ತರಿಂದ ಇಪ್ಪತ್ತು ತಂಡಗಳು ಚಾರಣಕ್ಕೆ ತೆರಳುತ್ತಿದ್ದರೆ, ವಾರದ ಕೊನೆಯಲ್ಲಿ ಸುಮಾರು 25ರಿಂದ 30ಕ್ಕೂ ಅಧಿಕ ಚಾರಣಿಗರ ತಂಡ ಕುಮಾರ ಪರ್ವತಕ್ಕೆ ತೆರಳುತ್ತಿರುತ್ತದೆ. ಸುಬ್ರಹ್ಮಣ್ಯದಿಂದ ಕುಮಾರ ಪರ್ವತಕ್ಕೆ ಏರಬೇಕಾದರೆ 12 ಕಿ.ಮೀ. ಸಾಗಬೇಕು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಿಂದ ದೇವರಗದ್ದೆ ಬಳಿ ಸುಬ್ರಹ್ಮಣ್ಯ ಮೀಸಲು ಅರಣ್ಯ ಪ್ರವೇಶಿಸಿ ತೆರಳಬೇಕು. ಇಲ್ಲಿ ಅರಣ್ಯ ಇಲಾಖೆಯ ಯಾವುದೇ ಚೆಕ್‌ಪೋಸ್ಟ್‌ಗಳು ಇಲ್ಲ. ಮಂದೆ ಗಿರಿಗದ್ದೆ ಎಂಬ ಪ್ರದೇಶದ ಮೂಲಕ ಹಾದು ಹೋಗಬೇಕಾಗಿದ್ದು, ಇದು ಪುಷ್ಪಗಿರಿ ವನ್ಯಧಾಮ ವ್ಯಾಪ್ತಿಯಲ್ಲಿದೆ.

ಅನುಮತಿ ಕಡ್ಡಾಯ
ಪುಷ್ಪಗಿರಿ ವನ್ಯ ಜೀವಿ ವಿಭಾಗದ ಚೆಕ್‌ ಪೋಸ್ಟ್‌ ಇಲ್ಲಿದೆ. ಆದ್ದರಿಂದ ಮುಂದಕ್ಕೆ ಪರ್ವತ ಹತ್ತಲು ವನ್ಯ ಜೀವಿ ವಿಭಾಗದ ಇಲಾಖೆಯ ಅನುಮತಿ ಪಡೆಯಲೇ ಬೇಕಾಗಿದೆ. ಈ ವೇಳೆ ತಪಾಸಣ ಕೇಂದ್ರದ ಸಿಬಂದಿ ಚಾರಣಿಗರಿಂದ ಮೊತ್ತವನ್ನು ಪಡೆದುಕೊಳ್ಳುತ್ತಿದ್ದು, ಪ್ರತಿಯಾಗಿ ರಶೀದಿ ಕೂಡ ನೀಡಲಾಗುತ್ತಿದೆ. ಎರಡು ವರ್ಷದ ಹಿಂದೆ 150 ರೂ. ನಂತೆ ಸ್ವೀಕರಿಸಲಾಗುತ್ತಿತ್ತು. ನಿರ್ವಹಣೆಗೆಂದು ಈ ವಸೂಲಾತಿ ನಡೆಯುತ್ತಿದ್ದು,ಇಲ್ಲಿ ಯಾವುದೇ  ರೆ ವ್ಯವಸ್ಥೆಗಳು ಚಾರಣಿಗರಿಗೆ ಒದಗಿಸಲಾಗುತ್ತಿಲ್ಲ. ಮಾರ್ಗದರ್ಶಿ ವ್ಯವಸ್ಥೆಯೂ ಇಲ್ಲಿಲ್ಲ.

ನಿರ್ಮಾಣ ಚಿಂತನೆ
ಕೇಂದ್ರ ವನ್ಯ ಜೀವಿ ವಿಭಾಗದ ಶುಲ್ಕ ಕುಮಾರ ಪರ್ವತದಲ್ಲಿ ಜಾರಿಯಲ್ಲಿದೆ. ಈ ವಿಚಾರಕ್ಕೆ ಸಂಬಂಧಿಸಿ ಪರ್ವತಕ್ಕೆ ಚಾರಣಕ್ಕೆ ತೆರಳುವವ ಪ್ರವಾಸಿಗರಿಗೆ ಅನುಕೂಲವಾಗುವಂತೆ  ಕುಮಾರ ಪರ್ವತದಲ್ಲಿ ವೀಕ್ಷಣಾ ಗೋಪುರ ತೆರೆಯುವ ಚಿಂತನೆ ಇದೆ. ಚಾರಣಕ್ಕೆ ಪ್ರೋತ್ಸಾಹ ನೀಡುವ ಯೋಜನೆಗಳನ್ನು ಜಾರಿಗೆ ತರಲಾಗುವುದು.
-ಆರ್‌. ಶಂಕರ್‌ ,
ಪರಿಸರ ಖಾತೆ ಸಚಿವ 

ಹೆಚ್ಚು ಶುಲ್ಕ ಸರಿಯಲ್ಲ
ಕುಮಾರ ಪರ್ವತಕ್ಕೆ ಚಾರಣಕ್ಕೆ ತೆರಳುವ ವೇಳೆ ಪ್ರತಿಯೋರ್ವ ಚಾರಣಿಗ ಸದಸ್ಯನಿಂದ 350 ರೂ. ಪಡೆಯುತ್ತಿರುವುದು ದುಬಾರಿಯಾಗುತ್ತಿದೆ. ಶುಲ್ಕ ಪಡೆದರೂ ಅಲ್ಲಿ ಯಾವುದೇ ವ್ಯವಸ್ಥೆಗಳು ಇಲ್ಲ. ಹೀಗಾಗಿ ಕೇಂದ್ರ ವನ್ಯಜೀವಿ ವಿಭಾಗ ಚಾರಣಿಗರಿಗೆ ಅನುಕೂಲವಾಗುವಂತೆ ಸರಳ ಶುಲ್ಕ ನಿಗದಿಪಡಿಸಬೇಕು.
-ಸುರೇಶ್‌ ಬಜಗೋಳಿ,
ಚಾರಣಿಗ

ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.