ಗದ್ದೆಗಿಳಿದು ನಾಟಿ ಮಾಡಿ, ಓ.. ಬೇಲೆ ಹಾಡಿದ ಶಾಲಾ ಮಕ್ಕಳು


Team Udayavani, Jul 4, 2018, 12:46 PM IST

4-july-7.jpg

ಆಲಂಕಾರು : ಮಕ್ಕಳಿಗೆ ನೇಜಿ ನಾಟಿ ಪ್ರಾತ್ಯಕ್ಷಿಕೆಯ ಜತೆಗೆ ಪಾಡªನ ಹಾಡುಗಳಿಗೆ ಹೆಜ್ಜೆ ಹಾಕುವ ಅವಕಾಶ. ಹಿರಿಯರು ಹಾಗೂ ಶಾಲಾ ಅಧ್ಯಾಪಕ ವೃಂದದಿಂದ ನೇಜಿ ನಾಟಿ ಕುರಿತಾಗಿ ಸಮಗ್ರ ಮಾಹಿತಿ. ಬೇಸಾಯ ಗದ್ದೆಯಲ್ಲಿ ಮಕ್ಕಳು ಕೆಲವು ಗಂಟೆಗಳ ಕಾಲ ಮಣ್ಣಿನ ಮಕ್ಕಳಾದರು. ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಗ್ರಾಮದ ನಡು ಮನೆ ನಾರಾಯಣ ಪೂಜಾರಿ ಅವರ ನೂತನ ಗದ್ದೆಯಲ್ಲಿ ಮಕ್ಕಳಿಗೆ ನೇಜಿ ನಾಟಿ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಯಿತು.

ರೈತ ಮಾದರಿ ವಸ್ತ್ರ
ಅಪ್ಪಟ ಗ್ರಾಮೀಣ ಪ್ರದೇಶದ ರೈತರಂತೆ ಹುಡುಗಿಯರು ತಲೆಗೆ ಮುಟ್ಟಾಳೆ ಇಟ್ಟುಕೊಂಡರೆ, ಹುಡುಗರು ಮುಂಡಾಸುಸುತ್ತಿದ್ದರು. ಸೊಂಟಕ್ಕೆ ಬೈರಾಸು ಕಟ್ಟಿಕೊಂಡು ಗದ್ದೆಗಿಳಿದು ನಾಟಿ ಕಾರ್ಯ ಮಾಡಿದರು. ಅಧ್ಯಾಪಕರೂ ರೈತರಂತೆ ವಸ್ತ್ರ ಧರಿಸಿ ಗದ್ದೆಗಿಳಿದು, ವಿದ್ಯಾರ್ಥಿಗಳಿಗೆ ಮಾಹಿತಿ ನೀಡುತ್ತಿದ್ದರು. ಬಿಸಿಯೂಟ ತಯಾರಿಕೆ ಸಿಬಂದಿ ಸ್ವತಃ ನೇಜಿ ನಾಟಿ ಮಾಡಿ, ಮಕ್ಕಳಿಗೂ ಕಲಿಸಿಕೊಟ್ಟರು. ಕೆಲವು ಮಕ್ಕಳು ನಾಟಿಯಲ್ಲಿ ತೊಡಗಿಸಿಕೊಂಡರೆ ಮತ್ತೆ ಕೆಲವರು ಗದ್ದೆಯ ಕರೆ (ಪುಣಿ) ಸಿದ್ಧಪಡಿಸುವ ಕೆಲಸದಲ್ಲಿ ನಿರತರಾದರು.

ಮತ್ತೆ ಮೊಳಗಿದ ಓ..ಬೇಲೆ
ಇತ್ತೀಚಿನ ದಿನಗಳಲ್ಲಿ ಮರೆಯಾಗುತ್ತಿರುವ ನೇಜಿ, ಜನಪದ ಹಾಡುಗಳುನಿಲ್ಲಿ ಮತ್ತೆ ಕೇಳಿದವು. ಓ.. ಬೇಲೆ ಪದ್ಯಗಳನ್ನು ವಿದ್ಯಾರ್ಥಿಗಳು ಅತ್ಯಂತ ಕುತೂಹಲದಿಂದ ಆಲಿಸಿದರು. ನೇಜಿ ನಾಟಿ ಕಾರ್ಯಕ್ಕೆ ಆಗಮಿಸಿದ್ದ 19ಕ್ಕೂ ಅಧಿಕ ಹಿರಿಯ ಮಹಿಳೆಯರು ಓ.. ಬೇಲೆ, ಪಾಡ್ದನ ಹಾಡುಗಳನ್ನು ಹಾಡುವುದರ ಮೂಲಕ ಮಕ್ಕಳ ಹಾಗೂ ಸೇರಿದ್ದ ಜನತೆಯ ಮನರಂಜಿಸಿದರು. ಶಾಲಾ ವಿದ್ಯಾರ್ಥಿಗಳು ಹಾಡುಗಳಿಗೆ ಧ್ವನಿ ಸೇರಿಸಿ, ಗದ್ದೆಯಲ್ಲೇ ಹೆಚ್ಚೆ ಹಾಕಿ ಸಂಭ್ರಮಿಸಿದರು.

ಮಕ್ಕಳ ಸಂಭ್ರಮ
ಕೆರೆ, ತೋಡುಗಳ ನೀರಿನಲ್ಲಿ ಸಂಭ್ರಮಿಸುವ ಅವಕಾಶದಿಂದ ವಂಚಿತರಾದ ಮಕ್ಕಳಿಗೆ ಇಲ್ಲಿ ತೋಡಿನಲ್ಲಿ ಸ್ನಾನ ಮಾಡುವ ಭಾಗ್ಯ ಒದಗಿ ಬಂತು. ನೇಜಿ ನಾಟಿ ಮಾಡಿದ ಬಳಿಕ ಗದ್ದೆಯ ಪಕ್ಕದಲ್ಲೇ ಹರಿಯುವ ಕಿರು ತೋಡಿನಲ್ಲಿ ಮಕ್ಕಳ ಸ್ನಾನಕ್ಕಾಗಿ ವ್ಯವಸ್ಥೆ ಮಾಡಲಾಗಿತ್ತು. ಅರ್ಧ ಗಂಟೆ ಮಕ್ಕಳು ನೀರಿನಲ್ಲಿ
ಆಡುವ ಮೂಲಕ ನಿರಾಟದ ಮೋಜನ್ನೂ ಪಡೆದುಕೊಂಡರು.

ವಿಶೇಷ ಭೋಜನ
ನೇಜಿಗೆ ಆಗಮಿಸಿದವರಿಗೆ ವಿಶೇಷ ಆಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು. ಹಿಂದಿನ ಕಾಲದಲ್ಲಿ ನೇಜಿಯ ಕೆಲಸದವರಿಗೆ ಬೆಳಗ್ಗಿನ ಉಪಾಹಾರಕ್ಕೆ ನೀಡುತ್ತಿದ್ದ ಅವಲಕ್ಕಿಯನ್ನು ಇಲ್ಲಿಯೂ ಪುನರಾವರ್ತಿಸಲಾಯಿತು. ಇದರೊಂದಿಗೆ ಚಹಾ, ಕಾಫಿ ನೀಡಲಾಯಿತು. ಮಧ್ಯಾಹ್ನ ಅನ್ನ, ಮೊಳಕೆ ಬರಿಸಿದ ಹೆಸರುಕಾಳು, ಸೌತೆಯ ಪದಾರ್ಥದೊಂದಿಗೆ ಹಲಸಿನ ಕಾಯಿಯ ಗಸಿ, ಕಡ್ಲೆ ಪಾಯಸ ನೀಡಲಾಯಿತು.

ಪಠ್ಯೇತರ ಚಟುವಟಿಕೆ
ಕೃಷಿ, ಬೇಸಾಯದ ಬಗ್ಗೆ ಮಕ್ಕಳಿಗೆ ಸೂಕ್ತ ಮಾಹಿತಿ ನೀಡುವ ಉದ್ದೇಶದಿಂದ ಇಂದಿನ ಪ್ರಾತ್ಯಕ್ಷಿಕೆಗೆ ಅವಕಾಶ ನೀಡಲಾಗಿದೆ. ನಶಿಸುತಿರುವ ಬೇಸಾಯ ಕೃಷಿಯ ಬಗ್ಗೆ ಪಠ್ಯೇತರ ಚಟುವಟಿಕೆಯ ಭಾಗವಾಗಿ ಮಕ್ಕಳಿಗೆ ಸಮಗ್ರ ಮಾಹಿತಿ ನೀಡುವುದೇ ಇದರ ಮುಖ್ಯ ಉದ್ದೇಶವಾಗಿದೆ. 
– ಕೆ.ಪಿ. ನಿಂಗರಾಜು,
   ಮುಖ್ಯಗುರು

ಸದಾನಂದ ಆಲಂಕಾರು

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.