ಪಾರ್ಕಿಂಗ್‌ಗಾಗಿ ಅರಣ್ಯ ಇಲಾಖೆ ಜಾಗಕ್ಕೆ ಪುತ್ತೂರು ನಗರಸಭೆ ಕಣ್ಣು


Team Udayavani, Jan 5, 2019, 4:56 AM IST

5-january-3.jpg

ಪುತ್ತೂರು: ಪೇಟೆಯ ಟ್ರಾಫಿಕ್‌ ದಟ್ಟಣೆ ತಗ್ಗಿಸಲು ಪುತ್ತೂರು ನಗರಸಭೆ ಯೋಜನೆಯೊಂದನ್ನು ರೂಪಿಸುತ್ತಿದೆ. ಪುತ್ತೂರು ಪೇಟೆಯ ಕೇಂದ್ರದಲ್ಲೇ ಸುಮಾರು 1.5 ಎಕ್ರೆಯಲ್ಲಿ ಪಾರ್ಕಿಂಗ್‌ಗಾಗಿ ಆಯಕಟ್ಟಿನ ಜಾಗವೊಂದರ ಮೇಲೆ ನಗರಸಭೆ ಕಣ್ಣಿಟ್ಟಿದೆ. ನಗರಸಭೆ ಗುರುತಿಸಿರುವ ಜಾಗವು ಅರಣ್ಯ ಇಲಾಖೆ ಯದ್ದು. ಹೀಗಾಗಿ ಈ ಯೋಜನೆ ಎಷ್ಟರ ಮಟ್ಟಿಗೆ ಕಾರ್ಯಕ್ಕೆ ಬರು ತ್ತದೆ ಎನ್ನು ವುದೇ ಸಂಶಯದ ವಿಚಾರ.

ಪುತ್ತೂರು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಮುಂಭಾಗವೇ ಇರುವ ಅರಣ್ಯ ಇಲಾಖೆಯ ಕಚೇರಿ ಇರುವ ಜಾಗ ಅದು. ಹಲವಾರು ವರ್ಷಗಳಿಂದ ಈ ಜಾಗ ಅರಣ್ಯ ಇಲಾಖೆಯ ಸುಪರ್ದಿಯಲ್ಲೇ ಇದೆ. ಅಲ್ಲಿ ಸುಮಾರು 70ರಷ್ಟು ಉತ್ತಮ ಜಾತಿಯ ಮರಗಳು ಬೆಳೆದು ನಿಂತಿವೆ. ಇದರ ಜತೆಗೆ ಅರಣ್ಯ ಇಲಾಖೆಯ ಕಚೇರಿ, ನಿರೀಕ್ಷಣ ಮಂದಿರ, ವಸತಿಗೃಹಗಳಿವೆ. ವಶಪಡಿಸಿಕೊಳ್ಳಲಾದ ವಾಹನಗಳನ್ನೂ ಇಲ್ಲೇ ನಿಲ್ಲಿಸಲಾಗಿದೆ. ಈ ವಾಹನಗಳು ದುಃಸ್ಥಿತಿಯಲ್ಲಿವೆ. ಇಷ್ಟೆಲ್ಲ ಇರುವ ಈ ಜಾಗವನ್ನು ಬಿಟ್ಟುಕೊಡಲು ಅರಣ್ಯ ಇಲಾಖೆ ಒಪ್ಪಲಿಕ್ಕಿಲ್ಲ. ಪೇಟೆಯ ಹೃದಯ ಭಾಗದಲ್ಲೇ ಇರುವ ಈ ಜಾಗವನ್ನು ಬಿಟ್ಟು ಅರಣ್ಯದ ಮಗ್ಗುಲಿಗೆ ಹೋಗಿ ಕುಳಿತು ಕೊಳ್ಳಲು ಅಧಿಕಾರಿಗಳಿಗೂ ಮನಸ್ಸಿಲ್ಲ.

ಅರಣ್ಯ ಇಲಾಖೆಯ ಸುಪರ್ದಿಯಲ್ಲಿ ರುವ ಈ ಜಾಗವನ್ನು ಪುತ್ತೂರು ಪೇಟೆಯ ಅಭಿವೃದ್ಧಿ ಕಾರ್ಯಗಳಿಗೆ ಬಳಸಿಕೊಳ್ಳಬೇಕು ಎನ್ನುವುದು ನಗರಸಭೆಯ ಆಲೋಚನೆ. ಅದರಲ್ಲೂ ಮರಗಳನ್ನು ಅಂತೆಯೇ ಉಳಿಸಿಕೊಂಡು, ಉಳಿದ ಜಾಗದಲ್ಲಿ ಪಾರ್ಕಿಂಗ್‌ ಮಾಡಬೇಕು ಎಂದು ಯೋಜನೆ ರೂಪಿಸಿದೆ. ಬಹಳ ವರ್ಷಗಳ ಹಿಂದೆಯೇ ಇಂತಹ ಆಲೋಚನೆಗೆ ವೇದಿಕೆ ಸಿದ್ಧವಾಗಿತ್ತು. ಆದರೆ ಅನಂತರದ ದಿನಗಳಲ್ಲಿ ಅದು ನನೆಗುದಿಗೆ ಬಿದ್ದಿತು. ಇದೀಗ ಮತ್ತೆ ಮುನ್ನೆಲೆಗೆ ಬರಲು ವೇದಿಕೆ ಸಿದ್ಧವಾಗುತ್ತಿದೆ.

ಏನಿದು ಯೋಜನೆ?
ಜಾಗವು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಮುಂಭಾಗವೇ ಇರುವುದರಿಂದ ಪಾರ್ಕಿಂಗ್‌ ವ್ಯವಸ್ಥೆಗೆ ಅನುಕೂಲ. ಸದ್ಯ ಪುತ್ತೂರು ಪೇಟೆಯಲ್ಲಿ ಪಾರ್ಕಿಂಗ್‌ಗೆ ಜಾಗವೇ ಇಲ್ಲವಾಗಿದೆ. ವಾಣಿಜ್ಯ ಸಂಕೀರ್ಣಗಳು ಪಾರ್ಕಿಂಗ್‌ ಜಾಗವನ್ನು ಕಬಳಿಸಿಕೊಂಡು ನಿಂತಿವೆ. ಆದ್ದರಿಂದ ಪೇಟೆಯ ನಡುವಿನಲ್ಲೇ ಪಾರ್ಕಿಂಗ್‌ಗೆ ಜಾಗ ಗೊತ್ತುಪಡಿಸುವ ಅನಿವಾರ್ಯತೆ ನಗರಸಭೆ ಮುಂದಿದೆ. ಅರಣ್ಯ ಇಲಾಖೆ ಇರುವ ಜಾಗವನ್ನು ಪಾರ್ಕಿಂಗ್‌ಗೆ ಬಳಸಿಕೊಳ್ಳುವ ಯೋಜನೆ.

ಬೇರೆ ಜಾಗ ನೋಡಿ
ಇಲಾಖಾ ಕಚೇರಿ ಇರುವ ಜಾಗ ದ ಆರ್‌ಟಿಸಿ ಅರಣ್ಯ ಇಲಾಖೆಯ ಹೆಸರಿನಲ್ಲೇ ಇದೆ. ಅನೇಕ ಜಾತಿಯ ಮರ ಗಳು,ಅದನ್ನು ಅವಲಂಬಿಸಿ ಅದೆಷ್ಟೋ ಪಕ್ಷಿಗಳು ಇಲ್ಲಿ ವಾಸವಿವೆ. ಇವೆಲ್ಲವನ್ನು ನಿರ್ಲಕ್ಷಿಸಿ ಪಾರ್ಕಿಂಗ್‌ ಮಾಡುವುದು ಬೇಡ. ಬೇರೆ ಜಾಗ ನೋಡಿಕೊಳ್ಳಲಿ
 -ಎನ್‌. ಸುಬ್ರಹ್ಮಣ್ಯ ರಾವ್‌,
 ಎಸಿಎಫ್‌, ಅರಣ್ಯ ಇಲಾಖೆ

•ಗಣೇಶ್‌ ಎನ್‌. ಕಲ್ಲರ್ಪೆ

ಟಾಪ್ ನ್ಯೂಸ್

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

1-wqewqewe

Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.