ನಕಲಿ ಫೇಸ್ಬುಕ್ ಜಾಲ: ಮಂಗಳೂರಿನ ವ್ಯಕ್ತಿ ಸೌದಿಯಲ್ಲಿ ಬಂದಿ
Team Udayavani, Nov 11, 2021, 10:53 PM IST
ಸಾಂದರ್ಭಿಕ ಚಿತ್ರ
ಮಂಗಳೂರು: ಸೌದಿ ಅರೇಬಿಯಾದ ದೊರೆ ಮತ್ತು ಇಸ್ಲಾಂ ವಿರುದ್ಧ ಫೇಸುºಕ್ನಲ್ಲಿ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಅಲ್ಲಿ ನೌಕರಿಯಲ್ಲಿದ್ದ ಮಂಗಳೂರಿನ ಬಿಕರ್ನಕಟ್ಟೆ ನಿವಾಸಿ ಶೈಲೇಶ್ ಕುಮಾರ್ ಅವರನ್ನು ಕಳೆದ ಒಂದೂವರೆ ವರ್ಷದಿಂದ ಜೈಲಿನಲ್ಲಿಡಲಾಗಿದೆ.
ನಕಲಿ ಫೇಸ್ಬುಕ್ ಜಾಲದಿಂದಾಗಿ ತಪ್ಪು ಮಾಡದ ವ್ಯಕ್ತಿ ಶಿಕ್ಷೆ ಅನುಭವಿಸುವಂತಾಗಿದೆ ಎಂದು ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಶೈಲೇಶ್ ಅವರನ್ನು ಬಿಡುಗಡೆಗೊಳಿಸಲು ಪ್ರಧಾನಮಂತ್ರಿ, ಕೇಂದ್ರ ವಿದೇಶಾಂಗ ಇಲಾಖೆ ಮತ್ತು ರಾಜ್ಯ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ದೂರು ನೀಡಲು ಹೋದಾಗ ಬಂಧನ
25 ವರ್ಷಗಳಿಂದ ಸೌದಿಯ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಶೈಲೇಶ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ ಅದರಲ್ಲಿ ಇಸ್ಲಾಂಗೆ ವಿರುದ್ಧವಾಗಿ ಮತ್ತು ಸೌದಿ ದೊರೆಗೆ ಅವಹೇಳನ ಮಾಡುವ ಪೋಸ್ಟ್ಗಳನ್ನು ಯಾರೋ ಹಾಕಿದ್ದರು. ಫೇಸ್ಬುಕ್ನಲ್ಲಿ ನಕಲಿ ಐಡಿ ಸೃಷ್ಟಿಸುವ ಕೆಲವು ದಿನಗಳ ಮೊದಲು ಅನಾಮಿಕ ವ್ಯಕ್ತಿಯೋರ್ವ ಕರೆ ಮಾಡಿ ನಿನ್ನ ಫೇಸ್ಬುಕ್ ಖಾತೆಯನ್ನು ಕೂಡಲೇ ಅಳಿಸಿ ಹಾಕಬೇಕು. ಇಲ್ಲವಾದಲ್ಲಿ ನಿನ್ನನ್ನು ಸೌದಿಯಲ್ಲಿ ಉಳಿಯಲು ಬಿಡುವುದಿಲ್ಲ. ಅಲ್ಲೇ ಮುಗಿಸುತ್ತೇನೆ ಎಂದು ಜೀವ ಬೆದರಿಕೆ ಹಾಕಿದ್ದ. ಬೆದರಿದ ಶೈಲೇಶ್ ಕೂಡಲೇ ತನ್ನ ಫೇಸ್ಬುಕ್ ಖಾತೆಯನ್ನು ಅಳಿಸಿ ಹಾಕಿದ್ದರು. ಅದಾದ ಬಳಿಕ ಕೆಲವೇ ದಿನಗಳಲ್ಲಿ ನಕಲಿ ಖಾತೆ ಸೃಷ್ಟಿಯಾಗಿದೆ.
ಇದನ್ನೂ ಓದಿ:600ನೇ ಗಗನಯಾತ್ರಿಯ ಹೊತ್ತ ಸ್ಪೇಸ್ಎಕ್ಸ್ ರಾಕೆಟ್ ನಭಕ್ಕೆ
ಆ ಬಗ್ಗೆ ಅವರು ತಾನು ದುಡಿಯುತ್ತಿದ್ದ ಸಂಸ್ಥೆಯ ಎಚ್ಆರ್ ಮ್ಯಾನೇಜರ್ಗೆ ಮಾಹಿತಿ ನೀಡಿದ್ದಾರೆ. ಮ್ಯಾನೇಜರ್ ಸೂಚನೆಯಂತೆ ಸ್ಥಳೀಯ ಪೊಲೀಸರಿಗೆ ದೂರು ನೀಡಲು ತೆರಳಿದ ಶೈಲೇಶ್ ಅವರನ್ನೇ ಪೊಲೀಸರು ಬಂಧಿಸಿದ್ದರು. ಈ ಬಗ್ಗೆ ಸಂಬಂಧಿಕರು ಅಂತರ್ಜಾಲದ ಮೂಲಕ ಸೌದಿ ಅರೇಬಿಯಾದಲ್ಲಿರುವ ಇಂಡಿಯನ್ ಕಾನ್ಸುಲೇಟ್ಗೆ ದೂರು ನೀಡಿದ್ದರು. ಆದರೆ ಈ ದೂರು ಪಡೆದ ರಾಯಭಾರ ಕಚೇರಿ ಯಾವುದೇ ಕಾನೂನು ಕ್ರಮ ಜರಗಿಸಿಲ್ಲ ಎಂದು ಆರೋಪಿಸಿದರು.
ಭಾರತ ಸರಕಾರದ ವಿದೇಶಾಂಗ ಇಲಾಖೆ ಈ ಬಗ್ಗೆ ಗಮನ ಹರಿಸಿ ಶೈಲೇಶ್ರನ್ನು ಶೀಘ್ರ ಬಂಧಮುಕ್ತ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳಬೇಕು. ನಕಲಿ ಫೇಸ್ಬುಕ್ ಖಾತೆಯನ್ನು ಪತ್ತೆಹಚ್ಚಿ ಆರೋಪಿಯನ್ನು ಬಂಧಿಸುವ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಆಯುಕ್ತರು ವಿಶೇಷವಾಗಿ ಸ್ಪಂದಿಸಬೇಕು ಎಂದು ಆಗ್ರಹಿಸಿದರು.ಶೈಲೇಶ್ ಅವರ ಪತ್ನಿ ಕವಿತಾ, ಸಂಬಂಧಿ ಅನುಷ್ಕಾ ಕೊಟ್ಟಾರಿ, ಶ್ರೇಯಸ್ ಪತ್ರಿಕಾಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!
Mangaluru: ಕುಡಿಯುವ ನೀರಿನ ಕೊರತೆ, ಬೋಟ್, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!