ನಕಲಿ ಅಂಚೆ ಚೀಟಿಯ ಮತಯಾಚನೆ!


Team Udayavani, Jun 6, 2018, 3:32 PM IST

anche-cheeti.jpg

ಮಂಗಳೂರು: ಮತದಾರರಿಗೆ ಬೇರೆ ಬೇರೆ ರೀತಿಯ ಆಮಿಷಗಳನ್ನು ಒಡ್ಡಿ ಮತ ಪಡೆಯುವುದನ್ನು ನೋಡಿದ್ದೇವೆ. ವಿಧಾನ ಪರಿಷತ್‌ ನೈಋತ್ಯ ಶಿಕ್ಷಕ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ನಿಂತಿರುವ ಅಭ್ಯರ್ಥಿಯೊಬ್ಬರು ಅಂಚೆ ಇಲಾಖೆಯನ್ನೇ ಯಾಮಾರಿಸಿ ಮತದಾರರನ್ನು ತಲುಪಲು ಪ್ರಯತ್ನಿಸಿ ಸಿಕ್ಕಿ ಬಿದ್ದಿದ್ದಾರೆ!

ಈ ಅಭ್ಯರ್ಥಿಯು ಮತದಾರರಿಗೆ ಕಳುಹಿಸಿದ ಮನವಿ ಪತ್ರಗಳಿಗೆ ನಕಲಿ ಅಂಚೆ ಚೀಟಿಗಳನ್ನು ಬಳಸಿದ್ದು, ಈ ಕುರಿತು ಮಂಗಳವಾರ ಬಲ್ಮಠದ ಅಂಚೆ ವಿಭಾಗೀಯ ಕಚೇರಿಗೆ ಬೆಂಗಳೂರಿನ ಪ್ರಾದೇಶಿಕ ಕಚೇರಿಯಿಂದ ಮಾಹಿತಿ ಬಂದ ಹಿನ್ನೆಲೆಯಲ್ಲಿ ಅವರ ಎಲ್ಲ ಮನವಿ ಪತ್ರಗಳನ್ನು ತಡೆಹಿಡಿಯಲಾಗಿದೆ. 

ಆಗಿರುವುದೇನು?
ವಿಧಾನ ಪರಿಷತ್‌ ನೈಋತ್ಯ ಶಿಕ್ಷಕ- ಪದವೀಧರ ಕ್ಷೇತ್ರಕ್ಕೆ ಜೂ. 8ರಂದು ಚುನಾವಣೆ ನಡೆಯಲಿದ್ದು, ಮತದಾರರನ್ನು ತಲುಪಲು ಹೆಚ್ಚಿನ ಅಭ್ಯರ್ಥಿಗಳು ಅಂಚೆ ಇಲಾಖೆಯನ್ನೇ ಆಶ್ರಯಿಸಿದ್ದಾರೆ. ನೈಋತ್ಯ ಶಿಕ್ಷಕ ಕ್ಷೇತ್ರಕ್ಕೆ ಸ್ಪರ್ಧಿಸಿರುವ ಶಿವಮೊಗ್ಗ ಜಿಲ್ಲೆಯ ಡಿ.ಕೆ. ತುಳಸಪ್ಪ ಕೂಡ ಅಂಚೆ ಮೂಲಕ ಮನವಿ ಪತ್ರಗಳನ್ನು ಕಳುಹಿಸಿದ್ದು, ಅವುಗಳಿಗೆ ಝೆರಾಕ್ಸ್‌ ಮಾಡಲಾದ ನಕಲಿ ಅಂಚೆಚೀಟಿಗಳನ್ನು ಬಳಸಿದ್ದಾರೆ ಎಂದು ಅಂಚೆ ಇಲಾಖೆ ಆರೋಪಿಸಿದೆೆ. ಕಳೆದ ಕೆಲವು ದಿನಗಳಿಂದ ಇಂತಹ ಅಂಚೆ ಚೀಟಿ ಬಳಸಿರುವ ಮನವಿ ಪತ್ರಗಳು ಬರುತ್ತಿದ್ದು, ಇಲಾಖೆಯ ಗಮನಕ್ಕೆ ಬಾರದೆ ಮತದಾರರಿಗೆ ಬಟವಾಡೆಯಾಗಿವೆ ಎಂದು ಅಂಚೆ ಇಲಾಖೆ ಅಧಿಕಾರಿಗಳು ಹೇಳಿದ್ದಾರೆೆ. 

ಖರ್ಚು ಉಳಿಸಲು ವಾಮಮಾರ್ಗ?
ಒಂದು ಮನವಿ ಪತ್ರಕ್ಕೆ 10 ರೂ. ಮುಖಬೆಲೆಯ ಅಂಚೆ ಚೀಟಿ ಬಳಸ ಬೇಕಾಗುತ್ತದೆ. ಇದಕ್ಕಾಗಿ ಹಣ ಖರ್ಚು ಮಾಡುವ ಬದಲು ಅಭ್ಯರ್ಥಿಯು ಈ ವಾಮಮಾರ್ಗವನ್ನು ಹಿಡಿದಿದ್ದಾರೆ ಎನ್ನಲಾಗಿದೆ. ಇವರು ಅಸಲಿ ಅಂಚೆ ಚೀಟಿಯನ್ನೇ ಹೋಲುವ ನಕಲಿ ಅಂಚೆ ಚೀಟಿ ಮುದ್ರಿಸಿ  ಮನವಿ ಪತ್ರಕ್ಕೆ ಅಂಟಿಸಿದ್ದಾರೆ. ಬೆಂಗಳೂರಿನ ರಾಜಾಜಿನಗರದಿಂದ ಈ ಪತ್ರಗಳು ಪೋಸ್ಟ್‌ ಆಗಿದ್ದು, ಮಂಗಳವಾರ ಪಾಂಡೇಶ್ವರ ಪ್ರಧಾನ ಅಂಚೆ ಕಚೇರಿಗೆ ಸುಮಾರು 130 ಇಂಥ ನಕಲಿ ಅಂಚೆಚೀಟಿ ಇರುವ ಪತ್ರಗಳು ಬಂದಿವೆ. ವಿಭಾಗೀಯ ಕಚೇರಿಯಿಂದ ಸೂಚನೆ ಬಂದ ಹಿನ್ನೆಲೆಯಲ್ಲಿ ಅವನ್ನು ತಡೆಹಿಡಿಯಲಾಗಿದೆ. ಮುಂದೆ ಅವುಗಳನ್ನು ವಾಪಸ್‌ ಕಳುಹಿಸಿ ಕೊಟ್ಟು ಮುಂದಿನ ಕ್ರಮ ಕೈಗೊಳ್ಳ ಲಾಗು ವುದು. ಆದರೆ ಈ ಕುರಿತು ಅಭ್ಯರ್ಥಿಯ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ಇಲ್ಲ ಎಂದು ಅಂಚೆ ಇಲಾಖೆ ಅಧಿ ಕಾರಿ ಗಳು “ಉದಯವಾಣಿ’ಗೆ ತಿಳಿಸಿದ್ದಾರೆೆ. 

ನಿರ್ದಿಷ್ಟ  ಕಾರಣ ತಿಳಿದಿಲ್ಲ
ನಮಗೆ ಬೆಂಗಳೂರು ವಲಯದ ಪೋಸ್ಟ್‌ ಮಾಸ್ಟರ್‌ ಜನರಲ್‌ ಕಚೇರಿಯಿಂದ ಸೂಚನೆ ಬಂದ ಹಿನ್ನೆಲೆಯಲ್ಲಿ ಈ ಅಂಚೆ ಪತ್ರಗಳನ್ನು ಬಟವಾಡೆ ಮಾಡದಂತೆ ಅಂಚೆ ಕಚೇರಿಗಳಿಗೆ ಸೂಚನೆ ನೀಡಿದ್ದೇವೆ. ನಿರ್ದಿಷ್ಟ ಕಾರಣ ತಿಳಿದಿಲ್ಲ. ಅಂಚೆ ಚೀಟಿ ಸರಿಯಿಲ್ಲ ಎಂಬ ಕಾರಣಕ್ಕೂ ಈ ರೀತಿಯ ಸೂಚನೆ ನೀಡಿರಬಹುದು.
– ಲಕ್ಷ್ಮೀನಾರಾಯಣ, ಸಹಾಯಕ ಅಂಚೆ ಅಧೀಕ್ಷಕರು, ಮಂಗಳೂರು

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.