“ರೈತರಿಂದ ದೂರವಾದ ರೈತ ಸಂಪರ್ಕ ಕೇಂದ್ರ’


Team Udayavani, Jul 21, 2017, 5:30 AM IST

19kamath2.gif

ಕಿನ್ನಿಗೋಳಿ: ಕಿನ್ನಿಗೋಳಿ ಬಸ್‌ ನಿಲ್ದಾಣ ಕಾಮಗಾರಿ ವಿಳಂಬ, ಪಾರ್ಕಿಂಗ್‌ ಸಮಸ್ಯೆ, ಬಹುಗ್ರಾಮ ಕುಡಿಯವ ನೀರಿನ ಯೋಜನೆ ವಿಳಂಬ, ರೈತ ಸಂಪರ್ಕ ಕೇಂದ್ರ ಸ್ಥಾಪನೆ ಸಹಿತ ಹಲವು ಪ್ರಮುಖ ವಿಚಾರಗಳ ಬಗ್ಗೆ ನಡೆದ ವಾದ-ವಿವಾದ ಕಿನ್ನಿಗೋಳಿ ಗ್ರಾಮ ಸಭೆಯಲ್ಲಿ ಗದ್ದಲಕ್ಕೆ ಕಾರಣವಾಯಿತು.

ಗ್ರಾಮ ಪಂಚಾಯತ್‌ ಸಭಾಭವನದಲ್ಲಿ  ಬುಧವಾರ ಪಂಚಾಯತ್‌ ಅಧ್ಯಕ್ಷೆ ಫಿಲೋಮಿನಾ ಸಿಕ್ವೇರ  ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ರೈತ ಸಂಪರ್ಕ ಕೇಂದ್ರ ಸ್ಥಾಪಿಸಿ
ಮೂಲ್ಕಿಯ ರೈತ ಸಂಪರ್ಕ ಕೇಂದ್ರ ರೈತರಿಂದ ದೂರವಾಗಿದೆ. ಅಲ್ಲಿನ ರಸ್ತೆ ಸರಿ ಇಲ್ಲ,  ಕಟ್ಟಡ ಸೋರುತ್ತಿದೆ. ಸಕಾಲದಲ್ಲಿ ಬಿತ್ತನೆ ಬೀಜ ಬರುತ್ತಿಲ್ಲ ಎಂದು ಗ್ರಾಮಸ್ಥರಾದ ವಿಲಿಯಂ ಕಾಡೋìಜ, ಗಂಗಾಧರ ದೂರಿದರು. ಕಿನ್ನಿಗೋಳಿ ಪರಿಸರದಲ್ಲಿ  ರೈತರಿಗೆ ಬೇಕಾಗುವಂತಹ ಎಷ್ಟು ಕಾರ್ಯಕ್ರಮ ಮಾಡಿದ್ದೀರಿ ಎಂಬ ಬಗ್ಗೆ ಮಾಹಿತಿ ಕೊಡಿ ಎಂದು ಒತ್ತಾಯಿಸಿ, ಕಿನ್ನಿಗೋಳಿಯಲ್ಲಿ  ರೈತ ಸಂಪರ್ಕ ಕೇಂದ್ರ ಶಾಖೆ ತೆರೆಯುವಂತೆ ಆಗ್ರಹಿಸಿದರು.

ಈಗ ಇರುವ  ಹಳೆ ಕಟ್ಟಡದಲ್ಲಿ ರೈತಸಂಪರ್ಕ ಕೇಂದ್ರ ಕಾರ್ಯಾರಂಭ ಮಾಡಲಾಗುತ್ತಿದೆ. ಬಿತ್ತನೆ ಕಡಿಮೆ ಪ್ರಮಾಣದಲ್ಲಿ ಬಂದಿವೆ. ಕಿನ್ನಿಗೋಳಿ ರಾಮ ಮಂದಿರಲ್ಲಿ ರೈತರ ಮಾಹಿತಿ ಕಾರ್ಯಕ್ರಮ ಆಯೋಜಿಸಿದ್ದೇವೆ ಎಂದು ಅಧಿಕಾರಿ ಗಂಗಾದೇವಿ ತಿಳಿಸಿದರು.

ಕಿನ್ನಿಗೋಳಿ ಸೇವಾ ಸಹಕಾರಿ ಬ್ಯಾಂಕ್‌ ಮೂಲಕ ಬಿತ್ತನೆ ಬೀಜ ವಿತರಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಕಳೆದ ಗ್ರಾಮ ಸಭೆಯಲ್ಲಿ ತಿಳಿಸಿದ್ದೀರಿ. ಬಳಿಕ ಯಾಕೆ ವಿತರಣೆ ಮಾಡಿಲ್ಲ  ಎಂಬ ಜೋಸೆಫ್ ಕ್ವಾಡ್ರಸ್‌ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗಂಗಾದೇವಿ, ನಮಗೆ ಮೇಲಿನ ಅಧಿಕಾರಿಗಳು ತಿಳಿಸಿದಂತೆ ಮಾಡಿದ್ದೇವೆ ಎಂದರು.

ಫಾಗಿಂಗ್‌ಗೆ ಮದ್ದು ದೊರೆಯುತ್ತಿಲ್ಲ
ಪಂಚಾಯತ್‌ ವ್ಯಾಪ್ತಿಯ ಬಿತ್ತುಲ್‌ ಪರಿಸರದಲ್ಲಿ  ಸೊಳ್ಳೆ ಕಾಟವಿದ್ದು, ಫಾಗಿಂಗ್‌ ಯಾಕೆ ಮಾಡಿಲ್ಲ  ಎಂದು ದೀಪಕ್‌ ರೋಡ್ರಿಗಸ್‌ ಪ್ರಶ್ನಿಸಿದರು. ಆರೋಗ್ಯ ಇಲಾಖೆಯ ಪ್ರದೀಪ್‌ ಪ್ರತಿಕ್ರಿಯಿಸಿ, ಫಾಗಿಂಗ್‌ ಮಾಡಲು ಅದಕ್ಕೆ ಸರಿಯಾದ ಮದ್ದು ದೊರೆಯುತ್ತಿಲ್ಲ  ಎಂದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ವಿಳಂಬ ಯಾಕೆ ?
2011ರಲ್ಲಿ  ಕಿನ್ನಿಗೋಳಿಯಲ್ಲಿ 18 ಕೋಟಿ ರೂ. ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಆರಂಭ ಮಾಡಿದ್ದು ಇನ್ನೂ ಮುಕ್ತಾಯವಾಗಿಲ್ಲ, ಶುದ್ಧೀಕರಣ ಮಾಡದೆ ಹಾಗೇ ನೀರು ಬಿಡಲಾಗುತ್ತಿದೆ ಎಂದು ದೀಪಕ್‌, ಗಂಗಾಧರ್‌ ರಾವ್‌ ಹಾಗೂ ವಿಲಿಯಂ ದೂರಿದಾಗ ಉತ್ತರಿಸಿದ ಎಂಜಿನಿಯರ್‌ ವಿಶ್ವನಾಥ್‌, ಸಾಯಿ ಸುಧೀರ್‌ ಕಂಪೆನಿಯು ಕೆಲಸ ವಿಳಂಬ ಮಾಡಿದ್ದು ಅದನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ. ಮತ್ತೆ  ಹೊಸ ಗುತ್ತಿಗೆ ಟೆಂಡರ್‌ ಹಂತದಲ್ಲಿದೆ ಎಂದರು. ಇದಕ್ಕೆ ಪೂರಕವಾಗಿ ಮಾತನಾಡಿದ ಜಿ.ಪಂ.ಸದಸ್ಯ ವಿನೋದ್‌ ಬೊಳ್ಳೂರು, ಮರುಟೆಂಡರ್‌ ಬೆಂಗಳೂರು ಕೇಂದ್ರ ಕಚೇರಿಯಲ್ಲಿ ಆಗುತ್ತಿದೆ. ಕ್ರಮ ಕೈಗೊಂಡ ಕೂಡಲೇ ಕಾಮಗಾರಿ ವೇಗ ಪಡೆಯಲಿದೆ ಎಂದರು.ಪಿಡಿಒ ಅರುಣ್‌ ಪ್ರದೀಪ್‌ ಡಿ’ಸೋಜಾ ವಂದಿಸಿದರು.

ಪಾರ್ಕಿಂಗ್‌ ಸಮಸ್ಯೆ 
ಕಿನ್ನಿಗೋಳಿಯಲ್ಲಿ ಮುಖ್ಯ ರಸ್ತೆ ಹಾಗೂ ಇನ್ನಿತರ ಕಡೆಗಳಲ್ಲಿ  ವಾಹನ ನಿಲ್ಲಿಸಲು ಭಯ ಆಗುತ್ತದೆ. ನೋ ಪಾರ್ಕಿಂಗ್‌ ಫಲಕ ಇಲ್ಲದ ಕಡೆ ವಾಹನ ನಿಲ್ಲಿಸಿದರೂ ದಂಡ ಹಾಕಲಾಗುತ್ತಿದೆ ಎಂದು ವಲೇರಿಯನ್‌ ಸಿಕ್ವೇರ ಹಾಗೂ ದೀಪಕ್‌ ರೋಡ್ರಿಗಸ್‌ ಆರೋಪಿಸಿದರು. ಮೂಲ್ಕಿ ಠಾಣೆಯ ಉಪ ನಿರೀಕ್ಷಕ ಶಾಂತಪ್ಪ ಮಾತನಾಡಿ, ಇದು ಮಂಗಳೂರು ಉತ್ತರ ಸಂಚಾರಿ ಠಾಣೆಯ ವ್ಯಾಪ್ತಿಗೆ ಬರುತ್ತದೆ ಎಂದಾಗ ಸಂಚಾರಿ ಠಾಣೆಯವರು ಯಾಕೆ ಸಭೆಗೆ ಬಂದಿಲ್ಲ  ಎಂದು ಗ್ರಾಮಸ್ಥರಾದ ದೀಪಕ್‌ ಪ್ರಶ್ನಿಸಿದರು. ಅವರಿಗೆ ಮಾಹಿತಿ ನೀಡಲಾಗಿದೆ ಎಂದು ಪಿಡಿಒ ಅರುಣ್‌ ಪ್ರದೀಪ್‌ ಡಿ’ಸೋಜಾ ತಿಳಿಸಿದರು.

ಅಂಗಡಿ ಪರವಾನಿಗೆ ವಾದ-ಪ್ರತಿವಾದ
ಕಿನ್ನಿಗೋಳಿ- ಗೋಳಿಜೋರ ರಸ್ತೆಯ ಜನವಸತಿ ಪ್ರದೇಶದಲ್ಲಿ  ಬಾರ್‌ ನಡೆಸಲು ಪರವಾನಿಗೆ ನೀಡಲಾಗಿದ್ದು, ಜನರಿಗೆ ತೊಂದರೆಯಾಗುತ್ತಿದೆ ಎಂದು ಹೇಳಿದ ನಿಶಾ ಮಥಾಯಸ್‌, ದೀಪಕ್‌ ಮತ್ತಿತರ‌ರ ಪ್ರಶ್ನೆಗೆ ಉತ್ತರಿಸಿದ ಪಿಡಿಒ ಅರುಣ್‌ ಪ್ರದೀಪ್‌ ಡಿ’ಸೋಜಾ, ನಾವು ಅಂಗಡಿಗೆ ಮಾತ್ರ ಪರವಾನಿಗೆ ನೀಡಿದ್ದು  ಬಾರ್‌ ಮಾಡಲು ನೀಡಿಲ್ಲ. ಅದು ಅಬಕಾರಿ ಇಲಾಖೆ ವ್ಯಾಪ್ತಿಗೆ ಬರುತ್ತದೆ ಎಂದರು.  ಆದರೂ ಮಹಿಳೆಯರು ಪಟ್ಟು ಬಿಡಲಿಲ್ಲ   ಬಳಿಕ ನೋಡಲ್‌ ಅಧಿಕಾರಿ ಮಧ್ಯ ಪ್ರವೇಶ ಮಾಡಿ,  ಅಬಕಾರಿ ಇಲಾಖೆಗೆ ದೂರು ನೀಡಿ ಈ ಸಮಸ್ಯೆ ಬಗೆಹರಿಸಲಾಗುವುದು ಎಂದರು.

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.