ಫೆ. 10,11, 12: ಮಂಗಳೂರಿನಲ್ಲಿ ಕೊಂಕಣಿ ಲೋಕೋತ್ಸವ


Team Udayavani, Feb 5, 2017, 3:45 AM IST

0402mlr37.jpg

ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಫೆ. 10, 11, 12ರಂದು ಮಂಗಳೂರಿನ ಪುರಭವನದಲ್ಲಿ ಕೊಂಕಣಿ ಲೋಕೋತ್ಸವವನ್ನು ಹಮ್ಮಿಕೊಳ್ಳಲಾಗಿದ್ದು, 3 ದಿನಗಳ ಈ ಉತ್ಸವವು ಕೊಂಕಣಿ ಮಾತೃ ಭಾಷೆಯ 41 ಸಮುದಾಯಗಳ ಸಾಂಸ್ಕೃತಿಕ ಹಿರಿಮೆಯನ್ನು ಸಾರ್ವಜನಿಕವಾಗಿ ಪ್ರದರ್ಶಿಸಲಿದೆ.

ಲೋಕೋತ್ಸವದ ಸಿದ್ಧತೆ ಕುರಿತು ನಗರದ ಕೊಡಿಯಾಲ್‌ಬೈಲ್‌ನ ಬಿಷಪ್ಸ್‌ ಹೌಸ್‌ ಸಭಾಂಗಣದಲ್ಲಿ ಶನಿವಾರ ಅಕಾಡೆಮಿಯ ಅಧ್ಯಕ್ಷ ರೋಯ್‌ ಕ್ಯಾಸ್ತಲಿನೊ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಲೋಕೋತ್ಸವದಲ್ಲಿ  1,000 ಕಲಾವಿದರು, ವಿವಿಧ ವಿಭಾಗಗಳ ತಲಾ 12 ಮಂದಿ ವಿದ್ಯಾರ್ಥಿಗಳ 36 ತಂಡಗಳು ಪ್ರತಿಭಾ ಪ್ರದರ್ಶನ ನೀಡಲಿವೆ. ಅಕಾಡೆಮಿಯ ಗೌರವ ಪ್ರಶಸ್ತಿ ಪ್ರದಾನ ಹಾಗೂ ಪುಸ್ತಕ ಬಹುಮಾನ ವಿತರಣೆ ನಡೆಯಲಿದೆ ಎಂದು ವಿವರಿಸಿದರು.

ಫೆ. 8: ಚಪ್ಪರ ಮುಹೂರ್ತ
ಉತ್ಸವದ ಚಪ್ಪರ ಮುಹೂರ್ತವು ಫೆ. 8ರಂದು ಬೆಳಗ್ಗೆ 9 ಗಂಟೆಗೆ ಪುರಭವನದ ಅಂಗಳದಲ್ಲಿ  ನೆರವೇರಲಿದೆ. ಲೋಕೋತ್ಸವದ ಪ್ರಚಾರಾರ್ಥ ಬೈಕ್‌ ರ್ಯಾಲಿ ನಡೆಯಲಿದ್ದು, ಇದರ ದಿನಾಂಕ ಮತ್ತು ಸಮಯವನ್ನು ಮುಂದೆ ತಿಳಿಸಲಾಗುವುದು ಎಂದರು.

ಕಾರ್ಯಕ್ರಮಗಳ ಯಶಸ್ಸಿಗಾಗಿ 12 ಸಮಿತಿಗಳು ಕಾರ್ಯ ಪ್ರವೃತ್ತವಾಗಿದ್ದು, ಸಾಂಸ್ಕೃತಿಕ ಸಮಿತಿಯ ವತಿಯಿಂದ ನಗರದ ಬಿಷಪ್ಸ್‌ ಹೌಸ್‌ನಲ್ಲಿ ಸಂಗೀತ  ಕಲಾವಿದರಾದ ಎರಿಕ್‌ ಒಝೇರಿಯೋ ಮತ್ತು ವಸಂತಿ ಆರ್‌. ನಾಯಕ್‌ ಅವರ ನೇತೃತ್ವದಲ್ಲಿ  100 ಜನರ ತಂಡಕ್ಕೆ  ಸಂಗೀತಾಭ್ಯಾಸ ನಡೆಯುತ್ತಿದೆ. ಉದ್ಘಾಟನೆಯ ವೇಳೆ 3 ಹಾಡುಗಳನ್ನು ಮತ್ತು ಸಮಾರೋಪದಲ್ಲಿ 2 ಹಾಡುಗಳನ್ನು ಈ ತಂಡ ಪ್ರಸ್ತುತ ಪಡಿಸಲಿದೆ ಎಂದು ವಿವರಿಸಿದರು.

ಉತ್ಸವದಲ್ಲಿ ವಿವಿಧ ಕೊಂಕಣಿ ಸಮುದಾಯಗಳ ಜನಪದ ಕಲಾ ಪ್ರದರ್ಶನ, ನೃತ್ಯ ಪ್ರಕಾರಗಳು, ಸಾಹಿತ್ಯ ಸಂವಾದ, ಕವಿಗೋಷ್ಠಿ, ಕಲಾ ಕುಂಚ ಗಾಯನ, ಸಾಹಿತ್ಯಿಕ ವಿಚಾರ ಸಂಕಿರಣಗಳು ಜರಗಲಿವೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಕ್ಕಳು, ಮಹಿಳೆಯರು, ಯುವಜನರು ಮತ್ತು ಪುರುಷರು ಎಂಬ 4 ವಿಭಾಗಗಳಲ್ಲಿ  ತಲಾ 10 ಮಂದಿಯನ್ನು  ಗೌರವಿಸಲಾಗುವುದು ಎಂದರು.

ಕೊಂಕಣಿಯ ಸಾಂಪ್ರದಾಯಿಕ ಉಡುಗೆ ತೊಡುಗೆಗಳು, ಸಾಂಪ್ರದಾಯಿಕ ವಸ್ತುಗಳು, ವಿಶಿಷ್ಟ ಮತ್ತು ಸ್ವಾದಿಷ್ಟ ಖಾದ್ಯಗಳು, ದಿನ ಬಳಕೆಯ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಇರುತ್ತದೆ ಎಂದು ತಿಳಿಸಿದರು.

ಪ್ರಥಮ ದಿನ – ಮಕ್ಕಳ, ಮಹಿಳೆಯರ ದಿನ
ಉತ್ಸವವನ್ನು ಫೆ. 10 ರಂದು ಜಿಲ್ಲಾ  ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಲಿದ್ದು, ಶಾಸಕ ಜೆ.ಆರ್‌. ಲೋಬೊ ಅಧ್ಯಕ್ಷತೆ ವಹಿಸುವರು. ಈ ದಿನವು ಮಕ್ಕಳ ಮತ್ತು ಮಹಿಳೆಯರ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಮೀಸಲಾಗಿದೆ.

ಫೆ. 11: ಯುವಜನೋತ್ಸವ
ದ್ವಿತೀಯ ದಿನ ಯುವಜನರಿಗೆ ಮಿಸಲಿಡಲಾಗಿದ್ದು, ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಪ್ರದರ್ಶನ, ಕ್ವಿಜ್‌, ಯುವ ಸಾಹಿತ್ಯದ ಬಗ್ಗೆ ಸಂವಾದ, ವಿಚಾರ ಸಂಕಿರಣ ನಡೆಯಲಿದೆ. ಬಲ್ಮಠ ಮಿಶನ್‌ ಕಾಂಪೌಂಡ್‌ನಿಂದ ಪುರಭವನಕ್ಕೆ ಕೊಂಕಣಿ ಜನಪದ ಮತ್ತು ಸಂಸ್ಕೃತಿಯ ಪ್ರದರ್ಶನದ ಭವ್ಯ ಮೆರವಣಿಗೆ ಅಂದಿನ ವಿಶೇಷತೆ. ಚಿತ್ರ ನಟಿ ಎಸ್ತೆರ್‌ ನೊರೋನ್ಹಾ ಉದ್ಘಾಟಿಸಲಿದ್ದು, ಸುಮಾರು 400 ಮಂದಿ ಕಲಾವಿದರು ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದಲ್ಲಿ ಕೈಗಾರಿಕಾ ಸಚಿವ ಆರ್‌.ವಿ. ದೇಶಪಾಂಡೆ ಅಧ್ಯಕ್ಷತೆ ವಹಿಸುವರು.
ಫೆ. 12: ಸಮಸ್ತ ಕೊಂಕಣಿಗರ ಉತ್ಸವ- ತೃತೀಯ ದಿನವು ಸಮಸ್ತ ಕೊಂಕಣಿಗರ ಸಾಹಿತ್ಯಿಕ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಮೀಸಲಾಗಿದೆ. 

ಕೊಂಕಣಿ ಸಂಘ ಸಂಸ್ಥೆಗಳಿಂದ ನೃತ್ಯ, ಜನಪದ ಕಲೆಗಳ ಪ್ರದರ್ಶನ, ಕವಿಗೋಷ್ಟಿ, ಕಾವ್ಯ- ಕುಂಚ, ಜಾದೂ, ನಾಟಕ, ಸಮೂಹ ಗಾಯನ, ಹಾಸ್ಯ ಮತ್ತು ಅಕಾಡೆಮಿಯ ಗೌರವ ಪ್ರಶಸ್ತಿ, ಪುಸ್ತಕ ಬಹುಮಾನ ಕಾರ್ಯಕ್ರಮಗಳು ನಡೆಯಲಿವೆ. ಅಂದಿನ ಕಾರ್ಯಕ್ರಮಕ್ಕೆ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರನ್ನು ಆಹ್ವಾನಿಸಲಾಗಿದೆ. ಕನ್ನಡ ಸಂಸ್ಕೃತಿ ಸಚಿವೆ ಉಮಾಶ್ರೀ, ನಾಗಾಲ್ಯಾಂಡ್‌ ರಾಜ್ಯಪಾಲ ಪಿ.ಬಿ.ಆಚಾರ್ಯ, ಗೋವಾದ ಮಾಜಿ ಮುಖ್ಯ ಮಂತ್ರಿ ದಿಗಂಬರ ಕಾಮತ್‌, ಬಿಷಪ್‌ ಅಲೋಶಿಯಸ್‌ ಪಾವ್‌É ಡಿ’ಸೋಜಾ ಮುಂತಾದ ಗಣ್ಯನು ಪಾಲ್ಗೊಳ್ಳುವರು.

ಪತ್ರಿಕಾಗೋಷ್ಟಿಯಲ್ಲಿ  ಅಕಾಡೆಮಿಯ ಸದಸ್ಯ ಲಾರೆನ್ಸ್‌ ಡಿ’ಸೋಜಾ, ಎರಿಕ್‌ ಒಝೇರಿಯೊ, ವಸಂತಿ ಆರ್‌.ನಾಯಕ್‌, ಊಟೋಪಚಾರ ಸಮಿತಿಯ ಸಂಚಾಲಕರಾದ ಗೀತಾ ಸಿ.ಕಿಣಿ, ಪ್ರಚಾರ ಸಮಿತಿಯ ಸಂಚಾಲಕ ಇ. ಫೆರ್ನಾಂಡಿಸ್‌, ದಾಖಲಾತಿ ಸಮಿತಿಯ ಸಂಚಾಲಕ ವಿಕ್ಟರ್‌ ಮಥಾಯಸ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.