ನಗರದ ತೋಡಿನಲ್ಲಿ ಒಳಚರಂಡಿ ನೀರು!


Team Udayavani, Nov 25, 2018, 11:17 AM IST

25-november-5.gif

ಮಹಾನಗರ: ನಗರದ ಅನೇಕ ಪ್ರದೇಶಗಳಲ್ಲಿ ಒಳಚರಂಡಿ ವ್ಯವಸ್ಥೆ ಅಸಮರ್ಪಕವಾಗಿದ್ದು, ಸಣ್ಣ ಮಳೆ ಬಂದರೂ ರಸ್ತೆ ಮೇಲೆ ಕೃತಕ ನೆರೆ ಬಂದು ಅವಾಂತರ ಸೃಷ್ಟಿಸುವುದು ಸಾಮಾನ್ಯವಾಗಿದೆ. ಅದೇ ರೀತಿ ಕೊಟ್ಟಾರ ಚೌಕಿ ಬಳಿಯ ಸಂಕೇಶ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಮಹಾನಗರ ಪಾಲಿಕೆಯ ಬೇಜವಾಬ್ದಾರಿತನದಿಂದ ಮಳೆ ನೀರು ಹರಿಯುವ ತೋಡಿನಲ್ಲಿ ಒಳಚರಂಡಿ ನೀರು ಹರಿಯುತ್ತಿದೆ. ಇದರಿಂದಾಗಿ ಸುತ್ತಮುತ್ತಲಿನ ಮನೆ ಮಂದಿ ಸಾಂಕ್ರಾಮಿಕ ರೋಗದ ಭೀತಿಯಲ್ಲಿದ್ದಾರೆ.

ಸಂಕೇಶ, ಕೊಟ್ಟಾರ ಚೌಕಿ, ಅಬ್ಬಕ್ಕ ನಗರ, ದ್ವಾರಕಾ ನಗರ ಕಡೆಯಿಂದ ಬಂದು ಸಂಕೇಶ ಬಳಿ ಈ ಹಿಂದೆ ಇದ್ದಂತಹ ರೇಚಕ ಸ್ಥಾವರ ಬಳಿ ಹಾದುಹೋಗುವ ಒಳ ಚರಂಡಿ ವ್ಯವಸ್ಥೆಯ ವ್ಯಥೆ ಇದು. ಈ ಒಳಚರಂಡಿಯ ಪೈಪ್‌ಲೈನ್‌ ವ್ಯವಸ್ಥೆ ಕೆಲವು ತಿಂಗಳುಗಳ ಹಿಂದೆಯೇ ಕೆಟ್ಟು ಹೋಗಿದ್ದು, ಇದರಿಂದಾಗಿ ಒಳಚರಂಡಿ ಪೈಪ್‌ನಲ್ಲಿ ನೀರು ರಭಸದಿಂದ ಹರಿಯಲು ಸಾಧ್ಯವಾಗುತ್ತಿಲ್ಲ. ಇದೇ ಕಾರಣದಿಂದಾಗಿ ಒಳಚರಂಡಿಯಲ್ಲಿ ಹರಿಯಬೇಕಾಗಿದ್ದ ನೀರು ಕಳೆದ ಕೆಲ ತಿಂಗಳುಗಳಿಂದ ತೋಡಿನಲ್ಲಿ ಹರಿಯುತ್ತಿದೆ.

ಸಾಂಕ್ರಾಮಿಕ ರೋಗದ ಭೀತಿ
ಸಂಕೇಶ, ಕೊಟ್ಟಾರ ಚೌಕಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳು ಜನವಸತಿ ಪ್ರದೇಶವಾಗಿದೆ. ಅಲ್ಲದೆ, ಸುತ್ತ ಶಾಲಾ-ಕಾಲೇಜುಗಳಿವೆ. ಮಳೆ ನೀರು ಹರಿಯುವ ತೆರೆದ ತೋಡಿನಲ್ಲಿ ಚರಂಡಿ ನೀರು ಹರಿಯುವುದರಿಂದ ಕಸ, ಕಡ್ಡಿಗಳಿಂದ ಅಲ್ಲಲ್ಲಿ ನೀರು ನಿಲ್ಲುತ್ತಿದೆ. ಕಲುಷಿತ ನೀರು ಸುತ್ತಮುತ್ತಲು ಸಾಂಕ್ರಾಮಿಕ ರೋಗಗಳು ಹರಡಲು ಕಾರಣವಾಗುತ್ತಿದೆ. ಸಂಜೆ ಯಾದರೆ ಸುತ್ತಲಿನ ಪ್ರದೇಶಗಳಲ್ಲಿ ಸೊಳ್ಳೆ ಕಾಟ ಹೆಚ್ಚಾಗುತ್ತಿದೆ.

ಬೇಸಗೆಯಲ್ಲೂ ನೀರಿತ್ತು!
ಬೇಸಗೆಯಲ್ಲಿ ಸಾಮಾನ್ಯವಾಗಿ ಮನೆ ಬಾವಿಗಳಲ್ಲಿ ನೀರಿನ ಮಟ್ಟ ಕಡಿಮೆಯಾಗುತ್ತದೆ. ಆದರೆ ಕೊಟ್ಟಾರ ಚೌಕಿ, ಸಂಕೇಶ, ಸುತ್ತಲಿನ ಬಾವಿಗಳಲ್ಲಿ ಬೇಸಗೆಯಲ್ಲೂ ಅರ್ಧದಷ್ಟು ನೀರಿರುತ್ತದೆ. ಚರಂಡಿ ನೀರು ಅಕ್ಕ ಪಕ್ಕದ ತೋಡುಗಳಲ್ಲಿ ಹರಿಯುವುದರಿಂದ ಕುಡಿಯಲು ಯೋಗ್ಯವಿಲ್ಲ ಎಂಬುದು ಸ್ಥಳೀಯರ ಬೇಸರ.

ಬಾವಿ ನೀರಿನ ಬಣ್ಣ ಬದಲು
ತೋಡಿಗೆ ಚರಂಡಿ ನೀರು ಬಿಡಲು ಪ್ರಾರಂಭ ಮಾಡಿದಾಗಿನಿಂದ ಸುತ್ತಮುತ್ತಲಿನ ಹತ್ತಕ್ಕೂ ಹೆಚ್ಚು ಬಾವಿಗಳ ನೀರಿನ ಬಣ್ಣ ಬದಲಾಗಲು ಪ್ರಾರಂಭವಾಯಿತು. ಇಷ್ಟೇ ಅಲ್ಲ, ಬಾವಿಯಲ್ಲಿ ಹುಳ ಹುಪ್ಪಟೆಗಳು ಬಂದು ನೀರು ವಾಸನೆಗೆ ತಿರುಗಿತು. ಇದನ್ನು ಗಮನಿಸಿದ ಸ್ಥಳೀಯರು ಮಹಾನಗರ ಪಾಲಿಕೆಯ ಗಮನಕ್ಕೆ ತಂದಿದ್ದಾರೆ. ಆದರೂ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ.

ಸಮಸ್ಯೆ ಪರಿಹರಿಸಿ
ಮೂರು ವರ್ಷಗಳ ಹಿಂದೆ ಚರಂಡಿ ನೀರು ತೋಡಿಗೆ ಬಿಡಲಾಗಿತ್ತು. ಆ ಸಮಯದ ಮಹಾನಗರ ಪಾಲಿಕೆಗೆ ಒತ್ತಡ ತಂದು ಸಮಸ್ಯೆಗೆ ಪರಿಹಾರ ಕಂಡುಕೊಂಡಿದ್ದೆವು. ಇದೀಗ ಕೆಲವು ತಿಂಗಳುಗಳಿಂದ ಮಳೆ ನೀರು ಹರಿಯುವ ತೋಡಿನಲ್ಲಿ ಚರಂಡಿ ನೀರು ಹರಿಯುತ್ತಿದ್ದು, ಅಕ್ಕಪಕ್ಕದವರು ಸಾಂಕ್ರಾಮಿಕ ರೋಗದ ಭೀತಿ ಎದುರಿಸುತ್ತಿದ್ದಾರೆ.
 - ಉಮೇಶ್‌ ಶೆಟ್ಟಿ, ಸ್ಥಳೀಯ ನಿವಾಸಿ

ತತ್‌ಕ್ಷಣ ಪರಿಹಾರ
ಒಳಚರಂಡಿಯಲ್ಲಿ ಹರಿಯುವ ಕಲುಷಿತ ನೀರು ಸಂಕೇಶ ಬಳಿಯ ಹಳೆಯ ವೆಟ್‌ವೆಲ್‌ ಬಳಿ ಇರುವ ತೋಡಿನಲ್ಲಿ ಹಾದುಹೋಗುವ ವಿಚಾರವನ್ನು ಸಂಬಂಧಪಟ್ಟ ಎಂಜಿನಿಯರ್‌ ಗಮನಕ್ಕೆ ತರುತ್ತೇನೆ. ತತ್‌ ಕ್ಷಣ ಸಮಸ್ಯೆ ಪರಿಹರಿಸಲು ಸೂಚಿಸುತ್ತೇನೆ.
-ಭಾಸ್ಕರ್‌ ಕೆ., ಮೇಯರ್‌

ವಿಶೇಷ ವರದಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.