ತಂಗಿಯ ಕೊಲೆಗೆ ತಾರತಮ್ಯದ ಭಾವನೆಯೇ ಕಾರಣ: ಡಾ| ಹರ್ಷ


Team Udayavani, Oct 29, 2019, 4:14 AM IST

x-36

ಮಂಗಳೂರು: ಹೆತ್ತವರು ತನ್ನನ್ನು ಕಡೆಗಣಿಸುತ್ತಿದ್ದಾರೆ ಮತ್ತು ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂಬ ಆರೋಪಿಯ ಭ್ರಮೆಯೇ ಕಂಬಳಪದವಿನ ವಿದ್ಯಾರ್ಥಿನಿ ಫಿಯೋನಾ ಸ್ವೀಡಲ್‌ ಕುಟಿನ್ಹೊ (16)ಳ ಕೊಲೆಗೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸ್‌ ಆಯುಕ್ತ
ಡಾ| ಹರ್ಷ ಪಿ.ಎಸ್‌. ತಿಳಿಸಿದ್ದಾರೆ.

ಖಾಸಗಿ ಕಾಲೇಜಿನಲ್ಲಿ ಎಂಜಿನಿಯರಿಂಗ್‌ ಓದುತ್ತಿದ್ದ ಆರೋಪಿ ಸ್ಯಾಮ್ಸನ್‌ ಮಾದಕ ವ್ಯಸನ ಮತ್ತಿತರ ದುಶ್ಚಟಗಳಿಗೆ ಬಲಿಯಾಗಿ ಶಿಕ್ಷಣವನ್ನು ಅರ್ಧದಲ್ಲಿಯೇ ಮೊಟಕುಗೊಳಿಸಿ ಮನೆಯಲ್ಲಿದ್ದ. ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ತಂಗಿ ಫಿಯೋನಾ ಪ್ರತಿಭಾನ್ವಿತಳಾಗಿದ್ದು, ಆಕೆಯ ಬಗ್ಗೆ ಹೆತ್ತವರು ಹೆಚ್ಚು ಮಮತೆ ತೋರುತ್ತಿದ್ದಾರೆ ಎಂಬ ಭಾವನೆ ಸ್ಯಾಮ್ಸನ್‌ನಲ್ಲಿತ್ತು ಎಂದು ಆಯುಕ್ತರು ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಹೆತ್ತವರು ತಂಗಿಗೆ ಒಳ್ಳೆಯ ಮೊಬೈಲ್‌ ಫೋನ್‌ ಕೊಡಿಸಿದ್ದರು. ಊಟ, ತಿಂಡಿಯಲ್ಲೂ ಆಕೆಗೆ ಆದ್ಯತೆ ನೀಡಲಾಗುತ್ತಿತ್ತು ಎಂದು ಸ್ಯಾಮ್ಸನ್‌ ತಿಳಿ ಸಿದ್ದಾನೆ. ಇಂಥ ಭಾವನೆ ಆತನಲ್ಲಿ ಬೆಳೆದು ಸಹೋದರಿ ಮೇಲೆ ಅಸೂಯೆಪಟ್ಟು ಕೊಲೆ ಮಾಡಿದ್ದಾನೆ ಎಂಬುದು ಈ ವರೆಗಿನ ತನಿಖೆಯಿಂದ ತಿಳಿದು ಬಂದಿದೆ ಎಂದು ಆಯುಕ್ತರು ತಿಳಿಸಿದರು.

ಫಿಯೋನಾ ನಾಪತ್ತೆ ಬಗ್ಗೆ ಆಕೆಯ ಹೆತ್ತವರು ಅ. 9ರಂದು ಕೊಣಾಜೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ವಿಸ್ತೃತ ತನಿಖೆ ನಡೆಸಿದ್ದ ರೂ ಸುಳಿವು ಲಭ್ಯವಾಗಿಲ್ಲ. ಆಕೆಯ ಮೊಬೈಲ್‌ ಫೋನ್‌ ಕರೆ ವಿವರ ಹಾಗೂ ಸ್ಥಳೀಯರಿಂದ ಸಿಕ್ಕಿದ ಮಾಹಿತಿ ಪ್ರಕಾರ ಅವ ಳು ಅ. 8ರಂದು ಮನೆಯಿಂದ ಹೊರಗೆ ಹೋಗಿಲ್ಲ ಎಂಬುದು ತಿಳಿ ಯಿತು. ಹಾಗಾಗಿ ಮನೆಯವರ ಮೇಲೆಯೇ ಸಂಶಯ ಮೂಡಿತ್ತು. ಬಳಿಕ ಸ್ಯಾಮ್ಸನ್‌ನನ್ನು ಹೆಚ್ಚಿನ ತನಿಖೆಗೆ ಒಳಪಡಿ ಸಿ ದಾಗ ಕೊಲೆಯ ಬಗ್ಗೆ ಒಪ್ಪಿ ಕೊಂಡ. ಸದ್ಯ ಆತ ನ್ಯಾಯಾಂಗ ಬಂಧನದಲ್ಲಿದ್ದು, ಅವನನ್ನು ಪೊಲೀಸ್‌ ಕಸ್ಟಡಿಗೆ ಪಡೆದು ಹೆಚ್ಚಿನ ತನಿಖೆ ನಡೆಸಲಾಗುವುದು. ಫಿಯೋನಾಳನ್ನು ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿರುವುದಾಗಿ ಆರೋಪಿ ತಿಳಿಸಿದ್ದು, ಮೃತದೇಹದ ಅವಶೇಷಗಳ ಬಗ್ಗೆ ಫೂರೆನ್ಸಿಕ್‌ ತಜ್ಞರಿಂದಲೂ ವರದಿ ತರಿಸಿ ತನಿಖೆ ನಡೆಸಲಾಗುವುದು ಎಂದು ಆಯು ಕ್ತರು ಹೇಳಿದರು.

2 ದಿನ ಆತ ಮನೆಯಲ್ಲಿರಲಿಲ್ಲ
ಕೊಲೆ ಮಾಡಿದ ಬಳಿಕ ಎರಡು ದಿನ ಆರೋಪಿ ಮನೆಯಲ್ಲಿರಲಿಲ್ಲ. ತನಗೆ ತಲೆನೋವು ಎಂದು ಹೇಳಿ ಆತ ಹೊರಗೆ ಹೋಗಿದ್ದ. ತಮ್ಮ ಮಕ್ಕಳು ಮಾದಕ ದ್ರವ್ಯ ವ್ಯಸನಕ್ಕೆ ಬಲಿಯಾಗಿದ್ದಾರೆ ಎಂದು ಒಪ್ಪಿಕೊಳ್ಳಲು ಯಾವುದೇ ಹೆತ್ತವರು ಸಿದ್ಧರಿಲ್ಲ. ಹಾಗಾಗಿ ಮಾದಕ ದ್ರವ್ಯ ವ್ಯಸನ ವಿರುದ್ಧ ಜಾಗೃತಿ ಮೂಡಿಸಲು ಪೊಲೀಸರು ಶಾಲಾ ಕಾಲೇಜುಗಳಲ್ಲಿ ಕಾರ್ಯಕ್ರಮ ನೀಡುತ್ತಿದ್ದಾರೆ ಎಂದು ಪೊಲೀಸ್‌ ಆಯುಕ್ತರು ವಿವರಿಸಿದರು.

ಒಬ್ಬನಿಂದಲೇ ಕೃತ್ಯ
ಸುತ್ತಿಗೆಯಿಂದ ತಲೆಗೆ ಮರಣಾಂತಿಕ ಹಲ್ಲೆ ನಡೆಸಿದ್ದರಿಂದ ಫಿಯೋನಾ ರಕ್ತಸ್ರಾವವಾಗಿ ಸಾವನ್ನಪ್ಪಿದ್ದಳು. ಬಳಿಕ ಮೃತದೇಹವನ್ನು ಮನೆಯಿಂದ ಸುಮಾರು 100 ಮೀ. ದೂರ ಕಾಡಿನ ಮಧ್ಯೆ ಇರುವ ತೋಡಿಗೆ ಎಸೆದಿದ್ದ. ಇಲ್ಲಿ ಜನಸಂಚಾರ ಕಡಿಮೆ ಇದ್ದು, ಮಳೆಯೂ ಬರುತ್ತಿದ್ದ ಕಾರಣ ಶವ ಕೊಳೆತರೂ ವಾಸನೆ ಬಂದಿರಲಿಲ್ಲ. ಕೊಲೆ ಬಳಿಕ ಆತನೊಬ್ಬನೇ ಶವವನ್ನು ಹೊತ್ತೂಯ್ದಿರುವುದು ಈ ವರೆಗಿನ ತನಿಖೆಯಿಂದ ತಿಳಿದು ಬಂದಿದೆ ಎಂದು ಆಯುಕ್ತರು ತಿಳಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.