ಪತ್ರಕರ್ತರ ಸಂಘದಿಂದ ಅಭಿಜ್ಞಾ ರಾವ್‌ಗೆ ಸಮ್ಮಾನ


Team Udayavani, May 10, 2018, 11:15 AM IST

10-May-8.jpg

ಸುಬ್ರಹ್ಮಣ್ಯ: ಸಾಧನೆಗೆ ಕಠಿನ ಶ್ರಮ ಜತೆಗೆ ಛಲ ಅವಶ್ಯ. ಜೀವನದಲ್ಲಿ ಶಿಸ್ತು, ಸಾಧಿಸಬೇಕೆಂಬ ಹಂಬಲದಿಂದ ಮುನ್ನಡೆದರೆ ಸಾಧನೆ ಸಿದ್ಧಿಸುತ್ತದೆ ಎಂಬುದಕ್ಕೆ ಅಭಿಜ್ಞಾ ರಾವ್‌ ಅವರೇ ಸಾಕ್ಷಿ ಎಂದು ಸುಬ್ರಹ್ಮಣ್ಯ ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಲೋಕೇಶ್‌ ಬಿ.ಎನ್‌.ಹೇಳಿದರು.

ಎಸೆಸೆಲ್ಸಿ ಪರೀಕ್ಷೆಯಲ್ಲಿ 623 ಅಂಕ ಪಡೆದು ರಾಜ್ಯಕ್ಕೆ ತೃತೀಯ ಸ್ಥಾನ ಪಡೆದ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಅಭಿಜ್ಞಾ ರಾವ್‌ ಬಿ. ಅವರಿಗೆ ಮಂಗಳವಾರ ಶಾಲು ಹೊದೆಸಿ, ಫಲಪುಷ್ಪ, ಕಿರು ಕಾಣಿಕೆ ನೀಡಿ, ಸಿಹಿ ತಿನ್ನಿಸಿ ಅವರು ಮಾತನಾಡಿದರು.

ನಗರಗಳಲ್ಲಿ ಕಲಿಕೆಗೆ ಸಾಕಷ್ಟು ವ್ಯವಸ್ಥೆಗಳಿರುತ್ತವೆ. ಗ್ರಾಮೀಣ ಭಾಗದಲ್ಲಿ ಅಷ್ಟು ಸೌಕರ್ಯಗಳು ಇರುವುದಿಲ್ಲ. ಇದೆಲ್ಲದರ ಮಧ್ಯೆ ಈಕೆ ಗ್ರಾಮೀಣ ಭಾಗದ ವಿದ್ಯಾರ್ಥಿಯಾಗಿ ಇಷ್ಟು ದೊಡ್ಡ ಸಾಧನೆ ಮಾಡಿರುವುದು ಪ್ರಶಂಸನೀಯ. ಆಕೆ ಮುಂದೆ ಮತ್ತಷ್ಟು ಸಾಧನೆ ಮಾಡುವಂತಾಗಲಿ ಎಂದು ಅವರು ಹೇಳಿದರು.

ಪತ್ರಕರ್ತ ಭರತ್‌ ನೆಕ್ರಾಜೆ ಮಾತನಾಡಿ ಅಭಿಜ್ಞಾ ಸಾಧನೆಯಿಂದ ನಮಗೆ ಅತೀವ ಸಂತಸವಾಗಿದೆ. ಆಕೆ ಪತ್ರಕರ್ತನ ಮಗಳು ಎಂಬುದು ಹೆಮ್ಮೆಯ ವಿಷಯ ಎಂದರು. ಪತ್ರಕರ್ತರಾದ ರತ್ನಾಕರ ಸುಬ್ರಹ್ಮಣ್ಯ, ವಿಶ್ವನಾಥ ನಡುತೋಟ, ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಕಾಶ್‌ ವಿಶ್ವಕರ್ಮ, ಅಭಿಜ್ಞಾ ಸಾಧನೆಯ ಗುಣಗಾನ ಮಾಡಿ, ಉಜ್ವಲ ಭವಿಷ್ಯ ಹಾರೈಸಿದರು.

ಗದ್ಗದಿತರಾದ ತಾಯಿ-ಮಗಳು
ಅಭಿಜ್ಞಾ ರಾವ್‌ ಅವರ ತಂದೆ ಬಿ. ವಿಠಲ್‌ ರಾವ್‌ ಉದಯವಾಣಿ ಪತ್ರಿಕೆಯಲ್ಲಿ ಸುದೀರ್ಘ‌ ಅವಧಿ ಪತ್ರಕರ್ತರಾಗಿದ್ದವರು. ಹಲವು ಪತ್ರಿಕೆಗಳಿಗೆ ಲೇಖನಗಳನ್ನು ಬರೆಯುತ್ತಿದ್ದರು. ಯುವ ಬರಹಗಾರರಿಗೆ ಪ್ರೋತ್ಸಾಹ ನೀಡುತ್ತಿದ್ದರು. ಅವರ ಪುತ್ರಿಯ ಸಾಧನೆ ಖುಷಿ ತಂದಿದೆ. ಈ ಹೊತ್ತು ವಿಠಲ್‌ ರಾವ್‌ ಇರಬೇಕಿತ್ತು, ಮತ್ತಷ್ಟು ಖುಷಿ ಪಡುತ್ತಿದ್ದರು ಎಂದು ಸಭಿಕರು ಹೇಳಿದಾಗ ಅಭಿಜ್ಞಾ ರಾವ್‌ ಹಾಗೂ ಅವರ ತಾಯಿ ಆಶಾ ಬಿ. ರಾವ್‌ ಗದ್ಗದಿತರಾದರು. ಸಭಿಕರ ಕಣ್ಣುಗಳಲ್ಲೂ ನೀರು ಜಿನುಗಿತು.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.