ಡೆಂಗ್ಯೂ ವಿರುದ್ಧ ಸಹಭಾಗಿ ಸಮರ: ಡಿಸಿ

ಜು. 28: ಮಂಗಳೂರಿನಲ್ಲಿ ಡ್ರೈವ್‌ ಡೇ; 'ಲಾರ್ವಾ ಬೇಟೆ'

Team Udayavani, Jul 27, 2019, 5:29 AM IST

v-48

ಮಂಗಳೂರು: ಡೆಂಗ್ಯೂ ನಿಯಂತ್ರಣಕ್ಕಾಗಿ ಸೊಳ್ಳೆಗಳ ಲಾರ್ವಾ ನಾಶಕ್ಕೆ ವಿಶೇಷ ಒತ್ತು ನೀಡಿರುವ ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್, ನಗರದಲ್ಲಿ ರವಿವಾರ (ಜು. 28) ಡ್ರೈವ್‌ ಡೇ ಆಚರಿಸಲು ನಿರ್ಧರಿಸಿದ್ದಾರೆ.

ಅಂದು ಬೆಳಗ್ಗೆ 10ರಿಂದ 11 ಗಂಟೆಯ ತನಕ ಎಲ್ಲ ನಾಗರಿಕರು ತಮ್ಮ ಮನೆ ಮತ್ತು ಸುತ್ತಮುತ್ತ ತೆರೆದ ಪ್ರದೇಶ, ವಸ್ತುಗಳಲ್ಲಿ ಸಂಗ್ರಹವಾಗಿ ರುವ ನೀರನ್ನು ಬರಿದು ಮಾಡಿ ಸ್ವಚ್ಛಗೊಳಿಸುವ ಜತೆಗೆ ಸೊಳ್ಳೆ ಲಾರ್ವಾ ಪತ್ತೆ ಹಚ್ಚಿ ನಾಶ ಮಾಡುವ ಕಾರ್ಯಾಚರಣೆ (ಡ್ರೈವ್‌ ಡೇ) ನಡೆಸಲಾಗುವುದು ಎಂದವರು ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ಮಂಗಳೂರು ಪ್ರಸ್‌ ಕ್ಲಬ್‌ ಆಶ್ರಯದಲ್ಲಿ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಅವರು ಈ ವಿಷಯ ತಿಳಿಸಿದರು.

ಜಿಲ್ಲಾಡಳಿತವು ಡೆಂಗ್ಯೂ ಪೀಡಿತ ಪ್ರದೇಶಗಳಲ್ಲಿ ತಪಾಸಣೆ ಮತ್ತು ಜಾಗೃತಿ ಕೈಗೊಳ್ಳುತ್ತಿದೆ. ಸಾರ್ವಜನಿಕರು ಸಂಪೂರ್ಣ ಸಹಕಾರ ಕೊಡಬೇಕು ಎಂದವರು ಮನವಿ ಮಾಡಿದರು.

ಹೋರಾಟ ಲಾರ್ವಾ ವಿರುದ್ಧ!
ಸದ್ಯ ಮಂಗಳೂರು ನಗರದಲ್ಲಿ ಮುಂದೆ ತಾಲೂಕುಗಳಲ್ಲಿಯೂ ಡ್ರೈವ್‌ ಡೇ ಅಭಿಯಾನ ನಡೆಸಲಾಗು ವುದು. ಡೆಂಗ್ಯೂ ಸೊಳ್ಳೆಗಳ ನಾಶಕ್ಕೆ ಫಾಗಿಂಗ್‌ ಪರಿಹಾರವಲ್ಲ ಎಂದು ವೈದ್ಯರೂ ಸಲಹೆ ಮಾಡಿದ್ದಾರೆ. ಸೊಳ್ಳೆಗಳ ಲಾರ್ವಾ ನಾಶವೊಂದೇ ಸದ್ಯದ ಪರಿಹಾರ. ಅದಕ್ಕೆ ಹೆಚ್ಚಿನ ಆದ್ಯತೆ ಮತ್ತು ಗಮನವನ್ನು ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ವಿವರಿಸಿದರು.

ಪರಿಹಾರಕ್ಕೆ ಮನವಿ
ಸಾಂಕ್ರಾಮಿಕ ರೋಗಗಳಿಂದ ಸಾವ ನ್ನಪ್ಪಿದವರಿಗೆ ಸರಕಾರದಿಂದ ಪರಿಹಾರ ಲಭ್ಯವಿಲ್ಲ. ಆದರೆ ಡೆಂಗ್ಯೂನಿಂದ ಸಾವನ್ನಪ್ಪಿದವರಿಗೆ ಪರಿಹಾರ ಒದಗಿಸುವಂತೆ ಮನವಿ ಮಾಡಲಾಗುವುದು ಎಂದರು.

ಎಜೆ ಆಸ್ಪತ್ರೆಯ ಡೀನ್‌ ಡಾ| ಅಶೋಕ್‌ ಹೆಗ್ಡೆ, ಕಾ.ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು.

ಸಂವಾದಕ್ಕೆ ಮುನ್ನ ಪತ್ರಕರ್ತರು ಮತ್ತು ಕುಟುಂಬದವರ ಉಚಿತ ರಕ್ತ ತಪಾಸಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ದ.ಕ. 46; ಉಡುಪಿ 97 ಪ್ರಕರಣ
ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಒಟ್ಟು 46 ಡೆಂಗ್ಯೂ ಪ್ರಕರಣ ದಾಖಲಾಗಿದೆ. ಶುಕ್ರವಾರ ದಾಖಲಾಗಿರುವ 46 ಪ್ರಕರಣಗಳ ಪೈಕಿ 40 ಮಂಗಳೂರು ತಾಲೂಕು, 4 ಬಂಟ್ವಾಳ ತಾಲೂಕು ಮತ್ತು 2 ಪ್ರಕರಣ ಇತರ ಜಿಲ್ಲೆಗಳದು.

35 ಸಾವಿರ ರೂ. ದಂಡ
ಸೊಳ್ಳೆ ಉತ್ಪತ್ತಿಗೆ ಪೂರಕ ತಾಣಗಳಿರುವ ಕಟ್ಟಡಗಳಿಗೆ ದಂಡ ಮುಂದುವರಿದಿದ್ದು, ಶುಕ್ರವಾರ 35 ಸಾವಿರ ರೂ. ದಂಡ ಸಂಗ್ರಹವಾಗಿದೆ. ಪಾಂಡೇಶ್ವರ, ಬಂದರು ಪ್ರದೇಶಗಳಲ್ಲಿ ದಂಡ ವಿಧಿಸಲಾಗಿದೆ.

ಉಡುಪಿ: 97 ಡೆಂಗ್ಯೂ 50 ಮಲೇರಿಯಾ
ಉಡುಪಿ: ಜಿಲ್ಲೆಯಲ್ಲಿ ಜು.26ರ ವರೆಗೆ ಒಟ್ಟು 97 ಡೆಂಗ್ಯೂ ಮತ್ತು 50 ಮಲೇರಿಯಾ ಪ್ರಕರಣಗಳು ದಾಖಲಾಗಿವೆ. ಹೆಚ್ಚು ಡೆಂಗ್ಯೂ ಪತ್ತೆ ಯಾದ ವಾರಂಬಳ್ಳಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಫಾಗಿಂಗ್‌ ಮಾಡಲಾಗಿದೆ. ಸೊಳ್ಳೆ ಉತ್ಪತ್ತಿ ತಾಣ ನಾಶವೇ ಮುಖ್ಯ ಗುರಿ,ಇದರಲ್ಲಿ ಆಶಾ ಕಾರ್ಯಕರ್ತರು ಕೈ ಜೋಡಿಸುತ್ತಿದ್ದಾರೆಎಂದು ರಾ. ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ| ಪ್ರಶಾಂತ್‌ ಭಟ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.