ಎಲ್ಲ ಠಾಣೆಗಳಲ್ಲಿಯೂ ಸೈಬರ್‌ ಪ್ರಕರಣ ದಾಖಲು

ಸೈಬರ್‌ ಠಾಣೆಗಳ ಮೇಲಿನ ಒತ್ತಡ ತಗ್ಗಿಸಲು, ಪರಿಣಾಮಕಾರಿ ತನಿಖೆಗೆ ಕ್ರಮ

Team Udayavani, May 26, 2024, 7:38 AM IST

ಎಲ್ಲ ಠಾಣೆಗಳಲ್ಲಿಯೂ ಸೈಬರ್‌ ಪ್ರಕರಣ ದಾಖಲು

ಮಂಗಳೂರು: ಆನ್‌ಲೈನ್‌ ವಂಚನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ಪೊಲೀಸ್‌ ಠಾಣೆಗಳ ಲ್ಲಿಯೂ ಸೈಬರ್‌ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಎಲ್ಲ ಠಾಣೆಗಳನ್ನು ಸಜ್ಜುಗೊಳಿಸಲಾಗುತ್ತಿದ್ದು, ಇನ್ನು ಸಾರ್ವಜನಿಕರು ಸೈಬರ್‌ ಸಂಬಂಧಿತ ಪ್ರಕರಣಗಳಿಗೆ ಸೈಬರ್‌ ಠಾಣೆಗೇ ಹೋಗಬೇಕಿಲ್ಲ.

ಎಲ್ಲ ಜಿಲ್ಲಾ ಪೊಲೀಸ್‌ ವ್ಯಾಪ್ತಿಯಲ್ಲಿ 1 ಸೆನ್‌ (ಸೈಬರ್‌, ಎಕನಾಮಿಕ್‌ ಆ್ಯಂಡ್‌ ನಾರ್ಕೊಟಿಕ್‌) ಪೊಲೀಸ್‌ ಠಾಣೆ ಇದೆ. ಪೊಲೀಸ್‌ ಕಮಿಷನರೆಟ್‌ ಇರುವ ಕಡೆಗಳಲ್ಲಿ ನಗರ ಸೆನ್‌ ಠಾಣೆ ಕೂಡ ಇರುತ್ತದೆ. ಇದುವರೆಗೆ ಸೆನ್‌ ಪೊಲೀಸ್‌ ಠಾಣೆಗಳಲ್ಲಿ ಮಾತ್ರವೇ ಸೈಬರ್‌ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿತ್ತು. ಆದರೆ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿರುವುದರಿಂದ ಸೆನ್‌ ಠಾಣೆಗಳ ಮೇಲೆ ಒತ್ತಡ ಉಂಟಾಗುತ್ತಿದೆ. ಅಲ್ಲದೆ ಸಾರ್ವಜನಿಕರು ತಮ್ಮ ದೂರು ದಾಖಲಿಸಲು ಸೆನ್‌ ಪೊಲೀಸ್‌ ಠಾಣೆಗೆ ತೆರಳಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಸೈಬರ್‌ ಪೊಲೀಸ್‌ ಠಾಣೆಯ ಜತೆಗೆ ಇತರೆ ಸ್ಥಳೀಯ ಠಾಣೆಗಳಲ್ಲಿಯೂ ದೂರು ದಾಖಲಿಸಲು ಅವಕಾಶ ನೀಡಲಾಗಿದೆ.

ನಿರ್ವಹಣೆಗೆ ಸಜ್ಜು : ಎಲ್ಲ ಪೊಲೀಸ್‌ ಠಾಣೆಗಳ ಅಧಿಕಾರಿ, ಸಿಬಂದಿಗೂ ಸೈಬರ್‌ ತಜ್ಞರಿಂದ ಸೈಬರ್‌ ಠಾಣೆಯ ಅಧಿಕಾರಿಗಳಿಂದ ತರಬೇತಿ ನೀಡಲಾಗಿದೆ. ಮಂಗಳೂರು ಪೊಲೀಸ್‌ ಕಮಿಷನರೆಟ್‌ನಲ್ಲಿಯೂ ಸೈಬರ್‌ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಸೆನ್‌ ಠಾಣೆಯಲ್ಲಿ ಅಧಿಕಾರಿ, ಸಿಬಂದಿಯ ಬಲ ಹೆಚ್ಚಿಸಲಾಗಿದೆ. ಇತರ ಪೊಲೀಸ್‌ ಠಾಣೆಗಳಲ್ಲಿಯೂ ಸೈಬರ್‌ ಪ್ರಕರಣಗಳನ್ನು ದಾಖಲಿಸಿ ತನಿಖೆ ನಡೆಸಲು ಸೂಚಿಸಲಾಗಿದೆ. ಅಲ್ಲದೆ ಹೊಸದಾಗಿ ನೇರವಾಗಿ ನೇಮಕಗೊಳ್ಳುವ ಪಿಎಸ್‌ಐಗಳು ಕನಿಷ್ಠ 2 ಸೈಬರ್‌ ಪ್ರಕರಣಗಳನ್ನು ಕಡ್ಡಾಯವಾಗಿ ತನಿಖೆ ನಡೆಸುವಂತೆ ಆದೇಶಿಸಲಾಗಿದೆ ಎಂದು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ತಿಳಿಸಿದ್ದಾರೆ.

ದೊಡ್ಡ ಪ್ರಕರಣ ಸೆನ್‌ಗೆ: ತುಂಬಾ ಕ್ಲಿಷ್ಟಕರ ಮತ್ತು ದೊಡ್ಡಮಟ್ಟದ ಸೈಬರ್‌ ಪ್ರಕರಣಗಳನ್ನು ಹೊರತುಪಡಿಸಿ ಉಳಿದ ಎಲ್ಲವನ್ನು ಸ್ಥಳೀಯ ಠಾಣೆಗಳಲ್ಲಿಯೇ ದಾಖಲಿಸಿ ತನಿಖೆ ನಡೆಸಲು ಸೂಚಿಸಲಾಗಿದೆ. ಸೈಬರ್‌ ತಜ್ಞರಿಂದ ಸೂಕ್ತ ತರಬೇತಿ ಕೂಡ ನೀಡಲಾಗಿದೆ. ಸಾರ್ವಜನಿಕರು ತಮಗೆ ಸೈಬರ್‌ ವಂಚನೆಯಾದ ಕೂಡಲೇ ಸ್ಥಳೀಯ ಠಾಣೆಗೆ ದೂರು ನೀಡಬಹುದು ಎಂದು ದ.ಕ. ಎಸ್‌ಪಿ ಸಿಬಿ ರಿಷ್ಯಂತ್‌ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿಯು ಸೆನ್‌ ಠಾಣೆ ಮಾತ್ರವಲ್ಲದೆ ಇತರ ಠಾಣೆಗಳಲ್ಲಿಯೂ ಸೈಬರ್‌ ಸಂಬಂಧಿ ಪ್ರಕರಣ ದಾಖಲಿಸಿ ತನಿಖೆಗೆ ಆದೇಶಿಸಲಾಗಿದೆ ಎಂದು ಉಡುಪಿ ಎಸ್‌ಪಿ ಡಾ| ಕೆ. ಅರುಣ್‌ ತಿಳಿಸಿದ್ದಾರೆ.

285 ಪ್ರಕರಣ: ಮಂಗಳೂರು ಕಮಿಷನರೆಟ್‌ ವ್ಯಾಪ್ತಿಯಲ್ಲಿ ಎರಡೂವರೆ ವರ್ಷಗಳಲ್ಲಿ 285 ಸೈಬರ್‌ ಅಪರಾಧ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಪಾರ್ಟ್‌ ಟೈಮ್‌ ಜಾಬ್‌ ಹೆಸರಿನಲ್ಲಿ ನಡೆದಿರುವ ವಂಚನೆಗಳು 72. ವೈವಾಹಿಕ/ಉಡುಗೊರೆ ವಂಚನೆಗೆ ಸಂಬಂಧಿಸಿ 58 ಪ್ರಕರಣಗಳು ದಾಖಲಾಗಿವೆ. ಹೂಡಿಕೆ ಮಾಡಿಸಿ ವಂಚಿಸಿರುವ ಬಗ್ಗೆ 10 ಮತ್ತು ಡೆಬಿಟ್‌/ಕ್ರೆಡಿಟ್‌ ಕಾರ್ಡ್‌/ಟಿಪಿ ವಂಚನೆ ಪ್ರಕರಣಗಳು 26 ದಾಖಲಾಗಿವೆ.

ಅಸಲಿ ಅಧಿಕಾರಿಗಳು ಬ್ಯಾಂಕ್‌
ಮಾಹಿತಿ ಕೇಳುವುದಿಲ್ಲ
ಸೈಬರ್‌ ವಂಚನೆಯ ಬಗ್ಗೆ ವೀಡಿಯೋ, ಬುಕ್‌ಲೆಟ್‌ಗಳ ಮೂಲಕ ಮಹಿಳೆಯರು, ಹಿರಿಯ ನಾಗರಿಕರು ಸೇರಿದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು. ಸುಲಭವಾಗಿ ಹಣ ಗಳಿಸುವ ಆಮಿಷಕ್ಕೆ ಸಾರ್ವಜನಿಕರು ಒಳಗಾಗಬಾರದು. ಕಸ್ಟಮ್ಸ್‌, ಆದಾಯ ತೆರಿಗೆ, ಸಿಬಿಐ ಸೇರಿದಂತೆ ಯಾವುದೇ ಅಧಿಕಾರಿಗಳು ಪೋನ್‌ನಲ್ಲಿ ಅಥವಾ ಇ-ಮೇಲ್‌ನಲ್ಲಿ ಬ್ಯಾಂಕ್‌ ಖಾತೆಯ ಮಾಹಿತಿ ಕೇಳುವುದಿಲ್ಲ. ವಂಚನೆ ಗೊತ್ತಾದ ಕೂಡಲೇ ಪಕ್ಕದ ಠಾಣೆಗೆ ಅಥವಾ 1930 ಸಹಾಯವಾಣಿಗೆ ತಿಳಿಸಬೇಕು ಎಂದು ಆಯುಕ್ತರು ತಿಳಿಸಿದ್ದಾರೆ.

ಸೈಬರ್‌ ಪ್ರಕರಣಗಳ ಪರಿಣಾಮ ಕಾರಿ, ತ್ವರಿತ ತನಿಖೆ, ಎಲ್ಲ ಪೊಲೀಸರೂ ಸೈಬರ್‌ ಪ್ರಕರಣಗಳಲ್ಲಿ ಅನುಭವ ಪಡೆಯುವಂತಾಗಲು ಹಾಗೂ ಸಾರ್ವಜನಿಕರಿಗೆ ಶೀಘ್ರ ಸ್ಪಂದನೆ ನೀಡುವ ಉದ್ದೇಶದಿಂದ ಸೆನ್‌ ಮಾತ್ರವಲ್ಲದೆ ಇತರ ಎಲ್ಲ ಠಾಣೆಗಳಲ್ಲಿಯೂ ಸೈಬರ್‌ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತದೆ. ಇದಕ್ಕಾಗಿ
ಮಾರ್ಗಸೂಚಿ (ಎಸ್‌ಒಪಿ) ನೀಡಲಾಗಿದೆ. ವಂಚನೆ ಗೊತ್ತಾದ ಕೂಡಲೇ 1930 ಸಹಾಯವಾಣಿ ಮತ್ತು ಪೊಲೀಸರಿಗೆ ಮಾಹಿತಿ ನೀಡಿದರೆ ಕಳೆದುಕೊಂಡ ಹಣ ವಾಪಸ್‌ ಪಡೆಯಲು ಸಾಧ್ಯವಿದೆ. ಈ ರೀತಿ ಶೇ. 20 ಹಣ ವಂಚಕರ ಖಾತೆಯಿಂದ ವಾಪಸ್‌ ಪಡೆದುಕೊಳ್ಳಲಾಗಿದೆ.
-ಅನುಪಮ್‌ ಅಗರ್‌ವಾಲ್‌, ಪೊಲೀಸ್‌ ಆಯುಕ್ತರು, ಮಂಗಳೂರು

-ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

panaji

Panaji: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಹೆಸರಲ್ಲಿ ವಂಚನೆ; ದೂರು ದಾಖಲು

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

rachana-rai

Devil ಚಿತ್ರದ ನಾಯಕಿ ರಚನಾ ರೈ ಕನಸು ಭಗ್ನ

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

9-bantwala

Bantwala: ಚರಂಡಿಯಲ್ಲಿ ಪ್ರಾಣಿಯ ಅವಶೇಷಗಳು ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

ಕರಾವಳಿಯಲ್ಲಿ ಇಲ್ಲ ವಾಡಿಕೆ ಮಳೆ!

Rain ಕರಾವಳಿಯಲ್ಲಿ ಇಲ್ಲ ವಾಡಿಕೆ ಮಳೆ!

Mangaluru ಬ್ರೇಕ್‌ ಸಮಸ್ಯೆ; ಬಸ್‌ ಚಾಲಕನ ಸಮಯಪ್ರಜ್ಞೆ; ತಪ್ಪಿದ ದುರಂತ

Mangaluru ಬ್ರೇಕ್‌ ಸಮಸ್ಯೆ; ಬಸ್‌ ಚಾಲಕನ ಸಮಯಪ್ರಜ್ಞೆ; ತಪ್ಪಿದ ದುರಂತ

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Nalin Kumar Kateel ವಿರುದ್ಧ ಸುಳ್ಳು ಸಂದೇಶ: ಕ್ರಮಕ್ಕೆ ಬಿಜೆಪಿ ಒತ್ತಾಯ

Nalin Kumar Kateel ವಿರುದ್ಧ ಸುಳ್ಳು ಸಂದೇಶ: ಕ್ರಮಕ್ಕೆ ಬಿಜೆಪಿ ಒತ್ತಾಯ

MUST WATCH

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

ಹೊಸ ಸೇರ್ಪಡೆ

panaji

Panaji: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಹೆಸರಲ್ಲಿ ವಂಚನೆ; ದೂರು ದಾಖಲು

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

rachana-rai

Devil ಚಿತ್ರದ ನಾಯಕಿ ರಚನಾ ರೈ ಕನಸು ಭಗ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.