ಕೊಣಾಜೆ ಕ್ಯಾಂಪಸ್‌ನ ಪ್ರ.ದ. ಕಾಲೇಜು ಬಂದ್‌

ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಆರ್ಥಿಕ ಹೊರೆ

Team Udayavani, Jun 22, 2020, 6:10 AM IST

ಕೊಣಾಜೆ ಕ್ಯಾಂಪಸ್‌ನ ಪ್ರ.ದ. ಕಾಲೇಜು ಬಂದ್‌

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯವು ಕೊಣಾಜೆಯ ಕ್ಯಾಂಪಸ್‌ನಲ್ಲಿ 2017ರಲ್ಲಿ ಆರಂಭಿಸಿದ್ದ ಪ್ರಥಮ ದರ್ಜೆ ಕಾಲೇಜಿಗೆ ಸರಕಾರದ ಅನುಮೋದನೆ ಲಭಿಸದಿರುವುದು ಹಾಗೂ ಆರ್ಥಿಕ ಹೊರೆ ಕಡಿಮೆಗೊಳಿಸುವ ಉದ್ದೇಶದಿಂದ ಮುಂದಿನ ಶೈಕ್ಷಣಿಕ ವರ್ಷದಿಂದ ಆ ಕಾಲೇಜನ್ನೇ ಬಂದ್‌ ಮಾಡಲು ವಿ.ವಿ. ತೀರ್ಮಾನಿಸಿದೆ.

2021-22ನೇ ಅವಧಿಗೆ ಪ್ರವೇಶಾತಿ ಸ್ಥಗಿತ ಗೊಳಿಸಿರುವುದಲ್ಲದೆ, ಮೊದಲ ಹಾಗೂ ದ್ವಿತೀಯ ವರ್ಷವನ್ನು ಈಗಾಗಲೇ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳನ್ನು ಅವರು ಅಪೇಕ್ಷಿಸುವ ಹತ್ತಿರದ ಕಾಲೇಜುಗಳಿಗೆ ವರ್ಗಾವಣೆ ಮಾಡುವ ಸಂಬಂಧ ವಿ.ವಿ. ಚಿಂತನೆ ನಡೆಸಿದೆ. ಜತೆಗೆ, ಹಂಪನಕಟ್ಟೆಯಲ್ಲಿರುವ ಮಂಗಳೂರು ವಿ.ವಿ. ಕಾಲೇಜಿನಲ್ಲಿ ಅವಕಾಶ ನೀಡುವ ಬಗ್ಗೆಯೂ ವಿ.ವಿ. ಮಾತುಕತೆ ನಡೆಸುತ್ತಿದೆ.

ಕರ್ನಾಟಕ ರಾಜ್ಯ ವಿ.ವಿ. ಕಾಯ್ದೆ ಪ್ರಕಾರ ಯಾವುದೇ ವಿ.ವಿ.ಗೆ ಪ್ರಥಮ ದರ್ಜೆ ಕಾಲೇಜು ಆರಂಭಿಸಲು ಅವಕಾಶವಿಲ್ಲ. ಆದರೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉನ್ನತ ಶಿಕ್ಷಣ ಕೈಗೆಟಕುವ ದರದಲ್ಲಿ ನೀಡಿ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಶಿಕ್ಷಣ ಕಲ್ಪಿಸುವ ಇರಾದೆಯೊಂದಿಗೆ 2017ರಲ್ಲಿ ಕೊಣಾಜೆಯಲ್ಲಿ ಪ್ರ.ದ. ಕಾಲೇಜು ಸ್ಥಾಪಿಸಲಾಗಿತ್ತು. ಬಿ.ಎ., ಬಿ.ಕಾಂ., ಬಿ.ಎಸ್ಸಿ. ಹಾಗೂ ಇತರ ಪದವಿ/ಡಿಪ್ಲೊಮಾ/ಸರ್ಟಿಫಿಕೆಟ್‌ ಕೋರ್ಸ್‌ ಇಲ್ಲಿ ಲಭ್ಯವಿತ್ತು.

ಡಿಗ್ರಿ ಸರ್ಟಿಫಿಕೇಟ್‌ ಹೇಗೆ?
ಕಳೆದೆರಡು ವರ್ಷಗಳಿಂದ ಇಲ್ಲಿ ಬಿಎ, ಬಿಕಾಂ ಮಾಡಿರುವವರಿಗೆ ಇದೀಗ ತೃತೀಯ ಶೈಕ್ಷಣಿಕ ವರ್ಷ ಇರುವುದರಿಂದ ಘಟಿಕೋತ್ಸವದ ವೇಳೆ ಆ ವಿದ್ಯಾರ್ಥಿಗಳಿಗೆ ವಿ.ವಿ. ಡಿಗ್ರಿ ನೀಡಬೇಕಾಗುತ್ತದೆ. ಆದರೆ ಸರಕಾರದ ಅನುಮತಿ ಇಲ್ಲದ ಕಾಲೇಜಿನ ವಿದ್ಯಾರ್ಥಿಗಳಿಗೆ ಯಾವ ಆಧಾರದಲ್ಲಿ ಡಿಗ್ರಿ ನೀಡಬೇಕು ಎಂಬ ಪ್ರಶ್ನೆ ಎದುರಾಗಿದೆ. ಸರಕಾರದಿಂದ ಅನುಮತಿ ಪಡೆಯದ ಕಾಲೇಜು ಎಂಬ ಕಾರಣದಿಂದಾಗಿ ಈ ವಿದ್ಯಾರ್ಥಿಗಳಿಗೆ “ಪೋಸ್ಟ್‌ ಮೆಟ್ರಿಕ್ಸ್‌’ ಸ್ಕಾಲರ್‌ಶಿಪ್‌ಗಾಗಿ ಆನ್‌ಲೈನ್‌ ಅರ್ಜಿ ಹಾಕಲೂ ಸಾಧ್ಯವಾಗುತ್ತಿಲ್ಲ.

ಬಂದ್‌ ಯಾಕಾಗಿ?
ಈ ಮಧ್ಯೆ ಸರಕಾರವು ವಿ.ವಿ.ಗೆ ಪತ್ರ ಬರೆದು ಕಾಲೇಜಿನ ಹುದ್ದೆಗಳ ಸೃಜನೆಗೆ ಅವಕಾಶ ನೀಡುವುದಿಲ್ಲ; ವಿ.ವಿ. ಆಂತರಿಕ ಸಂಪನ್ಮೂಲಗಳಿಂದಲೇ ಕಾಲೇಜಿನ ಖರ್ಚು ವೆಚ್ಚಗಳನ್ನು ನಡೆಸಬೇಕು ಎಂಬ ಷರತ್ತು ಹಾಕಿತ್ತು. ವಿ.ವಿ.ಯು ಪ್ರತೀ ವರ್ಷ ಸುಮಾರು 1 ಕೋ.ರೂ.ಗಳನ್ನು ಅತಿಥಿ ಉಪನ್ಯಾಸಕರ ವೇತನ ಇತ್ಯಾದಿಗಳಿಗೆ ಮೀಸಲಿಡಬೇಕಾಗುತ್ತದೆ. ಕೋವಿಡ್-19 ಕಾರಣದಿಂದ ಆರ್ಥಿಕ ಮಿತವ್ಯಯಕ್ಕೆ ಮುಂದಾಗಿರುವ ವಿ.ವಿ. ಕಾಲೇಜನ್ನು ಮುಚ್ಚುವುದೇ ಸೂಕ್ತ ಎಂದು ತೀರ್ಮಾನಿಸಿದೆ.

ಸ್ಥಳೀಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಿ.ವಿ. ಕ್ಯಾಂಪಸ್‌ನಲ್ಲಿ ಪ್ರ.ದ. ಕಾಲೇಜು ಆರಂಭಿಸಿದ್ದೆವು. ಆದರೆ ಸರಕಾರದ ಅನುಮೋದನೆ ದೊರಕದಿರುವುದು ಹಾಗೂ ವಿ.ವಿ.ಯ ಆಂತರಿಕ ಸಂಪನ್ಮೂಲವನ್ನೇ ಬಳಕೆ ಮಾಡಬೇಕು ಎಂಬ ಸೂಚನೆ ಬಂದಿರುವುದರಿಂದ ಆರ್ಥಿಕ ಹೊರೆ ತಪ್ಪಿಸಲು ಅನಿವಾರ್ಯವಾಗಿ ಮುಂದಿನ ವರ್ಷದಿಂದ ಪ್ರವೇಶಾತಿ ತಡೆಹಿಡಿಯಲು ನಿರ್ಧರಿಸಲಾಗಿದೆ.
– ಪ್ರೊ| ಪಿ.ಎಸ್‌. ಯಡಪಡಿತ್ತಾಯ,
ಕುಲಪತಿಗಳು, ಮಂಗಳೂರು ವಿ.ವಿ.

ವಿ.ವಿ. ಕ್ಯಾಂಪಸ್‌ನ ಪ್ರಥಮ ದರ್ಜೆ ಕಾಲೇಜನ್ನು ಬಂದ್‌ ಮಾಡಲು ತೀರ್ಮಾನಿಸಿರುವುದು ಗ್ರಾಮೀಣ ವಿದ್ಯಾರ್ಥಿಗಳಿಗೆ ಬಹುದೊಡ್ಡ ನಷ್ಟ. ಆ ಚಿಂತನೆಯನ್ನು ಕೈಬಿಟ್ಟು ಸರಕಾರ ಕಾಲೇಜನ್ನು ಮುಂದುವರಿಸಬೇಕು.
– ರಾಜೇಶ್‌ ಶೆಟ್ಟಿ ,
ಪಜೀರುಗುತ್ತು, ಹೋರಾಟಗಾರರು

 

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.