ಮುಗಿದ ಮತದಾನ ; ಆರಂಭವಾದ ಗೆಲುವಿನ ಗಣಿತ


Team Udayavani, Apr 20, 2019, 6:05 AM IST

1804mlr15-ladyhill2

ಮಂಗಳೂರು: ಸುಮಾರು ಒಂದು ತಿಂಗಳಿನಿಂದ ಕರಾವಳಿಯಲ್ಲಿ ಬಿಸಿಯೇರಿದ್ದ ಚುನಾವಣೆಯ ಹವಾ
ತಣ್ಣಗಾಗಿದೆ. ಮೇ 23ರ ಮತ ಎಣಿಕೆಯತ್ತ ಎಲ್ಲರ ಗಮನ ಕೇಂದ್ರೀಕೃತಗೊಂಡಿದೆ. ಮತಯಂತ್ರದೊಳಗೆ ಭದ್ರವಾಗಿರುವ ಜನಾದೇಶ ಪ್ರಕಟಗೊಳ್ಳಲು ಇನ್ನು 34 ದಿನಗಳು ಬಾಕಿಯಿದ್ದು, ಸೋಲು ಗೆಲುವಿನ ಬಗ್ಗೆ ಲೆಕ್ಕಾಚಾರ, ವಿಶ್ಲೇಷಣೆ ಆರಂಭಗೊಂಡಿದೆ.

ಕರಾವಳಿಯ ಕಡು ಬಿಸಿಲ ಬೇಗೆಯನ್ನು ಚುನಾವಣೆಯ ಕಾವು ಇನ್ನಷ್ಟು ಏರಿಸಿತ್ತು. ಮತದಾರರ ಮನಸ್ಸು ಗೆಲ್ಲಲು ಪಕ್ಷಗಳು ನಾನಾ ರೀತಿಯ ಕಸರತ್ತು, ಕಾರ್ಯತಂತ್ರ ಅನುಸರಿಸಿದ್ದವು. ಆರೋಪ ಪ್ರತ್ಯಾರೋಪ, ವಾದ ವಿವಾದ, ಭರವಸೆ, ಆಶ್ವಾಸನೆಗಳು ಕಣದಲ್ಲಿ ಸಾಕಷ್ಟು ಹರಿದಾಡಿದ್ದವು. ಬಹಿರಂಗ ಪ್ರಚಾರ, ರೋಡ್‌ಶೋಗಳು ನಡೆದಿದ್ದವು. ಮತದಾರರ ಮನೆಯೆಡೆಗೆ ಅಭ್ಯರ್ಥಿಗಳು, ಕಾರ್ಯಕರ್ತರ ನಡಿಗೆಯಿತ್ತು. ಪ್ರಭಾವಿ ನಾಯಕರು ಆಗಮಿಸಿ ಪ್ರಖರ ಭಾಷಣದ ಮೂಲಕ ಸಂಚಲನ ಮೂಡಿಸಿದ್ದರು. ಎ.18ರ ಮತದಾನದ ಜತೆಗೆ ಇದೆಲ್ಲದಕ್ಕೂ ತೆರೆಬಿದ್ದಿದೆ.

ದಾಖಲೆ ಮತದಾನ; ಗೆಲುವಿನ ಲೆಕ್ಕಚಾರ
ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಈ ಹಿಂದಿನ ಎಲ್ಲ ಲೆಕ್ಕಾಚಾರಗಳನ್ನು ಮೀರಿಸಿ ದಾಖಲೆಯ ಶೇ.77.90 ಮತ ದಾನವಾಗಿದೆ. ಸುಳ್ಯದಲ್ಲಿ ಆಗಿರುವ ಶೇ.84 ಮತದಾನ ಜಿಲ್ಲೆಯ ಗರಿಷ್ಠ. ಹೆಚ್ಚಿದ ಮತದಾನ ಮತ್ತು ಕ್ಷೇತ್ರದಲ್ಲಿ ವ್ಯಕ್ತವಾಗಿರುವ ರಾಜಕೀಯ ಟ್ರೆಂಡ್‌ ಆಧರಿಸಿ ಪಕ್ಷಗಳಲ್ಲಿ ಗೆಲುವಿನ ಸಾಧ್ಯತೆಗಳ ಬಗ್ಗೆ ವಿಶ್ಲೇಷಣೆ ಆರಂಭಗೊಂಡಿದೆ. ಇದರ ಜತೆಗೆ ಗರಿಷ್ಠ ಮತದಾನ ಯಾವ ರಾಜಕೀಯ ಪಕ್ಷಕ್ಕೆ ಹೆಚ್ಚು ಅನುಕೂಲ ಎಂಬ ವಿಶ್ಲೇಷಣೆಯೂ ನಡೆಯುತ್ತಿದೆ.

ಬೂತ್‌ ಮಟ್ಟದಲ್ಲಿ ಲೆಕ್ಕಚಾರ
ಕ್ಷೇತ್ರದ ಎಲ್ಲ 1,861 ಬೂತ್‌ಗಳ ಮತದಾರರ ಪಟ್ಟಿಯನ್ನು ಹಿಡಿದುಕೂಡಿಸಿ ಕಳೆಯುವ ಲೆಕ್ಕಾಚಾರ ನಡೆಯುತ್ತಿದೆ. ಪ್ರತೀ ಬೂತ್‌ನಲ್ಲಿ ತಮ್ಮ ಪಕ್ಷಕ್ಕೆ ಬರುವ ಪಕ್ಕಾ ಮತಗಳು, ಎದುರಾಳಿ ಅಭ್ಯರ್ಥಿಗೆ ಹೋಗಿರಬಹುದಾದ ಮತಗಳು, ಶೇ.50-50ರ ಅಂಚಿನಲ್ಲಿರುವ ಮತಗಳನ್ನು ಅಂದಾಜಿಸಿ ಮತಗಳಿಕೆ ಲೆಕಾಚಾರ ಆರಂಭಗೊಂಡಿದೆ. ಇದನ್ನು ಕ್ರೋಡೀಕರಿಸಿ ಗೆಲುವಿನ ಸಾಧ್ಯತೆ, ಅಂತರಗಳ ಒಟ್ಟು ರೇಖಾಚಿತ್ರಣ ರೂಪಿಸುವುದರಲ್ಲಿ ಪಕ್ಷಗಳು, ಅಭ್ಯರ್ಥಿಗಳು ವ್ಯಸ್ತರಾಗಿದ್ದಾರೆ.

ಇನ್ನೊಂದೆಡೆ ಗೆಲುವು ಯಾರದಾಗಿರಬಹುದು ಎಂಬ ಕುತೂಹಲ ಮತದಾರರಲ್ಲೂ ಮನೆ ಮಾಡಿದೆ.ಮದುವೆ ಸಹಿತ ಶುಭ ಸಮಾರಂಭಗಳು, ಇತರ ಕಾರ್ಯಕ್ರಮಗಳಲ್ಲಿ ಮತದಾನೋತ್ತರ ಚರ್ಚೆಯೇ ಮುಖ್ಯಾಂಶ.

ಹರಕೆ, ಹಾರೈಕೆ
ಪ್ರಚಾರದ ಸಂದರ್ಭದಲ್ಲಿ ಅಭ್ಯರ್ಥಿಗಳಿಂದ ಟೆಂಪಲ್‌ ರನ್‌ ನಡೆದಿದ್ದರೆ ಮತದಾನದ ಬಳಿಕ ಅಭ್ಯರ್ಥಿಗಳ ಬೆಂಬಲಿಗರು, ರಾಜಕೀಯ ಪಕ್ಷಗಳ ಕಾರ್ಯಕರ್ತರಿಂದ ಹರಕೆ ಪರ್ವ ಆರಂಭಗೊಂಡಿದೆ. ತಮ್ಮ ಅಭ್ಯರ್ಥಿ ಗೆದ್ದರೆ ದೇವರಿಗೆ, ದೈವಗಳಿಗೆ ವಿವಿಧ ರೀತಿಯ ಹರಕೆಗಳನ್ನು ಹೇಳಿ ಪ್ರಾರ್ಥನೆ ಸಲ್ಲಿಸುವ ಕಾರ್ಯ ನಡೆಯುತ್ತಿದೆ. ಇದು ಸಾವಿರ ರೂ.ನಿಂದ ಆರಂಭವಾದದ್ದು ಲಕ್ಷಗಟ್ಟಲೆ ರೂ.ವರೆಗೂ ಇದೆ. ಕದ್ದುಮುಚ್ಚಿದ ಬೆಟ್ಟಿಂಗ್‌ ನಡೆಯುತ್ತಿರುವುದು ಕೂಡ ಸುಳ್ಳಲ್ಲ.

-ಕೇಶವ ಕುಂದರ್‌

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.