ಕಿನ್ನಿಗೋಳಿ: ಮನೆಗೆ ಆಕಸ್ಮಿಕ ಬೆಂಕಿ ಲಕ್ಷಾಂತರ ನಷ್ಟ
Team Udayavani, Dec 22, 2022, 6:09 PM IST
ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ಮಾರಡ್ಕ ಎಂಬಲ್ಲಿ ಸುನಂದ ಪೂಜಾರ್ತಿ ರವರ ಮನೆಗೆ ಬುಧವಾರ ಮಧ್ಯರಾತ್ರಿ ಆಕಸ್ಮಿಕ ಬೆಂಕಿ ತಗಲಿ ಲಕ್ಷಾಂತರ ರೂ ನಷ್ಟ ಸಂಭವಿಸಿದ್ದು ಮನೆಯಲ್ಲಿದ್ದ ಅವರ ಮಗ ನಿತ್ಯಾನಂದ ಪೂಜಾರಿ ಪವಾಡ ಸದೃಶ ಪರಾಗಿದ್ದಾರೆ.
ಮಾರಡ್ಕ ಮಾರಿಗುಡಿ ಬಳಿಯ ಸುನಂದ ಪೂಜಾರ್ತಿ ರವರ ಹಂಚಿನ ಮನೆಗೆ ಬುಧವಾರ ಮಧ್ಯರಾತ್ರಿ ಏಕಾಏಕಿ ಬೆಂಕಿ ತಗಲಿ ಧಗಧಗನೆ ಉರಿಯಲಾರಂಭಿಸಿದೆ. ಈ ಸಂದರ್ಭ ಮನೆಯಲ್ಲಿದ್ದ ಸುನಂದ ರವರ ಮಗ ಹೊರಗೆ ಓಡಿ ಬಾರಿ ಅನಾಹುತದಿಂದ ಪಾರಾಗಿದ್ದಾರೆ. ಕೂಡಲೇ ಸ್ಥಳೀಯರಾದ ರಾಜು . ವಿಕೇಶ್ . ಚಂದ್ರಹಾಸ . ಸುರೇಶ್ ಮತ್ತಿತರರು ಸೇರಿ ಬೆಂಕಿಯನ್ನು ನಂದಿಸಲು ನೀರನ್ನು ಹಾಯಿಸಿದ್ದು ಬಳಿಕ ಅಗ್ನಿಶಾಮಕದಳ ಬಂದು ಹೆಚ್ಚಿನ ಅನಾಹುತ ವಾಗದಂತೆ ಬೆಂಕಿಯನ್ನು ನಂದಿಸಿದ್ದಾರೆ.
ಸ್ಥಳಕ್ಕೆ ಮಾಜೀ ಪಂಚಾಯತ್ ಸದಸ್ಯ ಮೋರ್ಗನ್ ವಿಲಿಯಂ, ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸಾಯೀಶ್ ಚೌಟ ಹಾಗೂ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಘಟನೆ ನಡೆದ ದಿನ ಸುನಂದರವರು ಸಂಬಂಧಿಕರ ಮನೆಗೆ ಹೋಗಿದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ