ಮೂಲ್ಕಿ: ಬೆಂಕಿ ಆಕಸ್ಮಿಕ: ನಗದು, 5 ಲ. ರೂ. ಬೆಲೆಬಾಳುವ ವಸ್ತು ನಾಶ


Team Udayavani, Aug 16, 2017, 8:30 AM IST

Fire-16-8.jpg

ಮೂಲ್ಕಿ: ವಿಜಯ ಕಾಲೇಜು ರಸ್ತೆಯ ಉಮಾಮಹೇಶ್ವರ ದೇವಸ್ಥಾನ ಸಮೀಪದ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಸುಮಾರು 5 ಲಕ್ಷ ರೂ.ಗಳಿಗೂ ಮಿಕ್ಕಿದ ಬೆಳೆ ಬಾಳುವ ವಸ್ತು ಹಾಗೂ ನಗದು ನಷ್ಟ ಉಂಟಾಗಿರುವುದಾಗಿ ಮೂಲ್ಕಿ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರದೀಪ್‌ ಕಾರ್ನಾಡ್‌ ಅವರ ಮಾಲಕತ್ವದ ಬಾಡಿಗೆ ಮನೆಯಲ್ಲಿ ವಾಸವಿರುವ ಮೂಲ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಚಂದ್ರಶೇಖರ್‌ ಅವರು ಬೆಳಗ್ಗೆ 8 ಗಂಟೆ ಸುಮಾರಿಗೆ ಕಾಲೇಜಿನಲ್ಲಿ ನಡೆಯುತ್ತಿದ್ದ ಸ್ವಾತಂತ್ರ್ಯ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಾಗಿ ತೆರಳಿದ್ದರು. ಸುಮಾರು 9 ಗಂಟೆ ಸುಮಾರಿಗೆ ಮನೆಯ ಒಂದು ಬದಿಯಲ್ಲಿ ಭಾರೀ ಪ್ರಮಾಣದ ಬೆಂಕಿ ಹತ್ತಿಕೊಂಡು ಉರಿಯಲಾರಂಭಿಸಿದಾಗ ಗಾಬರಿಗೊಂಡ ಪಕ್ಕದ ಮನೆಯವರು ಬೊಬ್ಬೆ ಹಾಕಿ ಜನ ಸೇರಿಸಿ ಬೆಂಕಿ ನಂದಿಸುವಲ್ಲಿ ಹರಸಾಹಸ ಪಟ್ಟರು.

ಆದರೆ ಬೆಂಕಿಯ ಕೆನ್ನಾಲಿಗೆ ಹರಡುತ್ತಿದ್ದಂತೆ ಭಯಭೀತರಾದ ಸ್ಥಳೀಯರು ಪೊಲೀಸರ ಮೂಲಕ ಅಗ್ನಿ ಶಾಮಕ ದಳಕ್ಕೆ ಕರೆ ಮಾಡಿದರು. ಮಂಗಳೂರಿನ ಅಗ್ನಿಶಾಮಕ ದಳದ ಸಿಬಂದಿ ಆಗಮಿಸುತ್ತಿದ್ದಂತೆ ಸ್ಥಳೀಯರು ಸೇರಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಮನೆಯ ಒಳಗೆ ಮೂರು ಗ್ಯಾಸ್‌ ಸಿಲಿಂಡರ್‌ ಹಾಗೂ ಪಕ್ಕದ ಮನೆಯ ಮಧುಸೂದನ್‌ ಅವರಿಗೆ ಸೇರಿದ ಟಿ.ವಿ.ಎಸ್‌. ವೆಗೋ ಸ್ಕೂಟರ್‌ಗೂ ಬೆಂಕಿ ತಗಲಿ ಅದರಲ್ಲಿ ಪೆಟ್ರೋಲ್‌ ಟ್ಯಾಂಕ್‌ಗೆ ಬೆಂಕಿ ಹತ್ತಿಕೊಂಡು ಬೆಂಕಿಯ ಜ್ವಾಲೆ ವಿಸ್ತರಿಸಿತು. ಒಳಗಿದ್ದ ಗ್ಯಾಸ್‌ ಸಿಲಿಂಡರ್‌ಗಳಲ್ಲಿ ಎರಡು ಸಿಲಿಂಡರ್‌ಗಳು ಬೆಂಕಿಗೆ ಸಿಲುಕಿ ಕರಕಲಾಗಿ ಹೋಗಿದ್ದವು. ಚಂದ್ರಶೇಖರ್‌ ಅವರಿಗೆ ಸೇರಿದ ವಿವಿಧ ದಾಖಲೆ ಪತ್ರಗಳು, ಕಂಪ್ಯೂಟರ್‌ ಲಾಬಟಾಪ್‌, ಪಾತ್ರೆಗಳು, ಕಪಾಟುಗಳು, ಕೆಮರಾ, ಮೊಬೈಲ್‌ ಮತ್ತು ಸುಮಾರು ಮೂವತ್ತು ಸಾವಿರ ನಗದು ಕೂಡ ಸುಟ್ಟು ಹೋಗಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ತೀರಾ ಹಳೆಯ ಕಟ್ಟಡವಾಗಿದ್ದು ವಿದ್ಯುತ್‌ ಸಂಪರ್ಕದ ವಯರ್‌ ಮತ್ತು ಇತರ ಸಾಧನಗಳು ಹಳೆಯದಾಗಿದ್ದು ಶಾರ್ಟ್‌ ಸರ್ಕ್ಯೂಟ್‌ ಉಂಟಾಗಿ ಬೆಂಕಿ ಅನಾಹುತ ಸಂಭವಿಸಿರಬೇಕು ಎಂದು ಅಂದಾಜಿಸಲಾಗಿದೆ. ಚಂದ್ರಶೇಖರ್‌ ಅವರು ಧರಿಸಿದ ಬಟ್ಟೆಯೊಂದು ಬಿಟ್ಟರೆ ಅವರ ಎಲ್ಲ ಸೊತ್ತುಗಳು ಸುಟ್ಟು ನಾಶವಾಗಿವೆ ಎಂದು ತಿಳಿದು ಬಂದಿದೆ. ಗ್ಯಾಸ್‌ ಸಿಲಿಂಡರ್‌ಗಳು ಒಳಗಿದ್ದ ಪರಿಣಾಮ ಬೆಂಕಿಯ ನಂದಿಲು ಸ್ಥಳೀಯರು ಆರಂಭದಲ್ಲಿ ಭಯಪಟ್ಟರು. ಬಳಿಕ ಅಗ್ನಿ ಶಾಮಕ ದಳದ ಸಿಬಂದಿ ಬೆಂಕಿ ಸಂಪೂರ್ಣ ಹತೋಟಿಗೆ ಬರುವ ತನಕ ಕಾರ್ಯಾ ಚರಣೆ ನಡೆಸಿ ತೆರಳಿದ್ದಾರೆ.

ಮಂಗಳೂರಿನಿಂದ ಬರುವ ಅಗ್ನಿಶಾಮಕ ದಳ
ಮೂಲ್ಕಿಗೆ ಸಮೀಪದಲ್ಲಿ ಅಗ್ನಿ ಶಾಮಕ ದಳ ಇಲ್ಲ. ಆ ಕಾರಣ ಹೆಚ್ಚಿನ ಎಲ್ಲ ಬೆಂಕಿ ಆಕಸ್ಮಿಕಗಳಲ್ಲಿ ಅಗ್ನಿ ಶಾಮಕ ದಳದ ಸಿಬಂದಿ ಮಂಗಳೂರಿನಿಂದ ಬರುವ ವೇಳೆಗಾಗಲೇ  ಹೆಚ್ಚಿನ ಹಾನಿಯಾಗಿರುತ್ತದೆ. ಅಗ್ನಿಶಾಮಕ ದಳವೊಂದು ಮೂಲ್ಕಿ ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪನೆಗೊಳ್ಳುವ ಹೆಚ್ಚಿನ ಸಾಧ್ಯತೆ ಇರುವುದಾಗಿ ಕೆಲವು ಮೂಲಗಳಿಂದ ತಿಳಿದುಬಂದೆ. ಇದು ಆದಷ್ಟು ಬೇಗ ಆರಂಭಗೊಂಡರೆ ಅನಾಹುತಗಳು ಸಂಭವಿಸಿದಾಗ ಆಗುವ ನಷ್ಟದ ಪ್ರಮಾಣಗಳನ್ನು ಕಡಿಮೆಗೊಳಿಸುವಲ್ಲಿ ಪರಿಣಾಮಕಾರಿ ಕ್ರಮವಾಗಬಹುದು. ಮೂಲ್ಕಿ ಪೊಲೀಸ್‌ ಮತ್ತು ಕಂದಾಯ ಅಧಿಕಾರಿಗಳು ಬೇಟಿ ನೀಡಿ ಮಹಜರು ನಡೆಸಿದ್ದಾರೆ. ಶಾಸಕ ಕೆ. ಅಭಯಚಂದ್ರ ಜೈನ್‌ ಅವಘಡ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.