ಭತ್ತಕ್ಕೆ ಬೆಂಕಿ ರೋಗ: ಎಕರೆಗಟ್ಟಲೆ ಬೆಳೆ ನಾಶ 


Team Udayavani, Sep 10, 2018, 11:21 AM IST

sepctember-6.jpg

ಆಲಂಕಾರು: ಹದಿನೈದು ದಿನಗಳ ಹಿಂದೆ ಸುರಿದ ಭಾರಿ ಮಳೆಗೆ ನೆರೆ ಉಕ್ಕೇರಿ, ಗದ್ದೆಗಳಲ್ಲಿ ವಾರಗಟ್ಟಲೆ ನೀರು ನಿಂತು ಪೈರು ಮೂಡುವ ಹಂತದಲ್ಲಿದ್ದ ಭತ್ತದ ಸಸಿಗಳು ಕೊಳೆತು ಹೋಗಿದ್ದವು. ಅದಾಗಿ ಅಳಿದುಳಿದ ಭತ್ತದ ಗದ್ದೆಗಳಲ್ಲಿ ಈಗ ಬೆಂಕಿ ರೋಗ ಕಾಣಿಸಿಕೊಂಡಿದೆ. ಇದರಿಂದ ಎಕರೆಗಟ್ಟಲೆ ಬೆಳೆ ಹಾನಿಯಾಗಿದ್ದು, ಸಂಪೂರ್ಣ ನಾಶವಾಗುವ ಭೀತಿ ರೈತರನ್ನು ಕಾಡುತ್ತಿದೆ.

ನಾಟಿ ಮಾಡಿ ತೆನೆ ಕಟ್ಟುವ ಹಂತದಲ್ಲಿರುವ ಎರಡು ತಿಂಗಳ ಅವಧಿಯ ಪೈರಿಗೆ ಬೆಂಕಿ ರೋಗ ಕಾಣಿಸಿಕೊಂಡಿದೆ. ಕಡಬ ತಾಲೂಕಿನ ಆಲಂಕಾರು ಗ್ರಾಮದ ನಡುಮನೆ ಸಹಿತ ಕುಮಾರಧಾರಾ ನದಿ ತಟದಲ್ಲಿರುವ ಬುಡೇರಿಯಾ, ಪಜ್ಜಡ್ಕ, ಪೊಯ್ಯಲಡ್ಡ, ಶರವೂರು ಮೊದಲಾದ ಪ್ರದೇಶಗಳಲ್ಲಿ ಈ ರೋಗ ಅತೀ ಹೆಚ್ಚು ಪ್ರಮಾಣದಲ್ಲಿ ಕಾಣಿಸಿಕೊಂಡಿದೆ.

ಕುಮಾರಧಾರಾ ನದಿ ತಟದಲ್ಲಿಯೇ ಅಪಾರ ಪ್ರಮಾಣದ ಭತ್ತದ ಗದ್ದೆಗಳಿದ್ದು, ಪ್ರತೀ ವರ್ಷವು ನೆರೆ ನೀರು ಆಕ್ರಮಿಸುವುದು ಸಹಜ. ನೆರೆ ನೀರು ಮೂರ್ನಾಲ್ಕು ದಿನ ಭತ್ತದ ಗದ್ದೆಯಲ್ಲಿದ್ದು, ಅನಂತರ ಇಳಿಮುಖವಾಗುತ್ತಿತ್ತು. ಇದರಿಂದ ಭತ್ತದ ಕೃಷಿಗೆ ಅಂತಹ ತೊಂದರೆ ಆಗುತ್ತಿರಲಿಲ್ಲ. ಆದರೆ ಈ ಬಾರಿ ಏರಿದ ನೆರೆ ಹತ್ತು ದಿನ ಗದ್ದೆಯಲ್ಲೇ ನಿಂತ ಕಾರಣ ನಾಟಿ ಮಾಡಿದ ಪೈರು ಸಂಪೂರ್ಣ ಕೊಳೆತುಹೋಗಿದೆ. ಕಡಬ ತಾಲೂಕಿನ ಆಲಂಕಾರು ಗ್ರಾಮವೊಂದರಲ್ಲೇ 17 ಎಕರೆ ಗದ್ದೆಯಲ್ಲಿ ನಾಟಿ ಮಾಡಿದ ಪೈರು ನಾಶವಾಗಿತ್ತು. ಈಗ ಬೆಂಕಿ ರೋಗ ಕಾಣಿಸಿಕೊಂಡು ರೈತರ ಚಿಂತೆ ಹೆಚ್ಚಿಸಿದೆ.

ಪ್ರಾಣಿ ಪಕ್ಷಿಗಳ ದಾಳಿ ಭೀತಿ
ಮೊದಲ ಅವಧಿಯ ಬೆಳೆ (ಏನೇಲು) ಫ‌ಸಲನ್ನು ರೈತರು ಕಳೆದುಕೊಂಡಿದ್ದಾರೆ. ಮುಂದೆ ಸುಗ್ಗಿಯ ಕಾಲಕ್ಕೆ ಸರಿಯಾಗುವಂತೆ ನಾಟಿ ಕಾರ್ಯ ಮಾಡಬೇಕಾಗಿದೆ. ಆದರೆ ಅಲ್ಲಿಯವರೆಗೆ ಗದ್ದೆಯನ್ನು ಖಾಲಿ ಬಿಡುವ ಹಾಗಿಲ್ಲ. ಈ ಕಾರಣಕ್ಕಾಗಿ ಮುಂದಿನ 15 ದಿನಗಳಲ್ಲೇ ಮರು ನಾಟಿಗೆ ಸಿದ್ಧತೆಗಳು ನಡೆಯುತ್ತಿವೆ. ಇದರ ಕಟಾವು ಕಾರ್ಯ ಮೂರು ತಿಂಗಳ ಬಳಿಕ ನಡೆಯುತ್ತದೆ. ಆಗ ಗದ್ದೆಗಳಿಗೆ ಕಾಡು ಪ್ರಾಣಿ, ಪಕ್ಷಿಗಳು ದಾಳಿ ಮಾಡಿ, ಫ‌ಸಲು ಹಾಳು ಮಾಡುತ್ತವೆ. ಆಗಲೂ ರೈತರು ನಷ್ಟ ಅನುಭವಿಸುತ್ತಾರೆ.

ಎಲೆ ಮಡಚುವ ರೋಗ
ಬೆಂಕಿ ರೋಗದ ಜತೆಗೆ ಭತ್ತದ ಪೈರಿಗೆ ಎಲೆ ಮಡಚುವ ರೋಗವು ಅಲ್ಲಲ್ಲಿ ಕಾಣಿಸಿಕೊಂಡಿದೆ. ಇದರ ನಿಯಂತ್ರಣಕ್ಕೆ ಕ್ಲೋರೋಪೋಯಿರಿಪಾಸ್‌ ಮತ್ತು ಎಕೋಲೆಕ್ಸ್‌ ದ್ರಾವಣವನ್ನು 1ಲೀ. ನೀರಿಗೆ 2 ಮಿ.ಮೀ. ಪ್ರಮಾಣದಲ್ಲಿ ಮಿಶ್ರಣ ಮಾಡಿ ಸಿಂಪಡಿಸುವುದರಿಂದ ರೋಗ ನಿಯಂತ್ರಣ ಸಾಧ್ಯ ಎಂದು ಸಹಾಯಕ ಕೃಷಿ ಅಧಿಕಾರಿ ತಿಮ್ಮಪ್ಪ ಗೌಡ ಹೇಳಿದ್ದಾರೆ. 

ಫ‌ಸಲು ನಷ್ಟ; ಮರು ನಾಟಿ
ಭತ್ತದ ಕೃಷಿಗೆ ಕೂಲಿ ಕಾರ್ಮಿಕರ ಕೊರತೆಯಿಂದಾಗಿ ದುಬಾರಿ ಸಂಬಳ ನೀಡಿ ನಾಟಿ ಕಾರ್ಯ ಮಾಡಿಸಬೇಕಾಗಿದೆ. ನೆರೆ ನೀರಿ ನಿಂದಾಗಿ ಪೈರು ಕೊಳೆತಿರುವ ಗದ್ದೆಗಳಲ್ಲಿ ಮರು ನಾಟಿ ಮಾಡಬೇಕಾಗಿದೆ. ಅಷ್ಟಿಷ್ಟು ಉಳಿದಿರುವ ಗದ್ದೆಗಳಲ್ಲಿ ಬೆಂಕಿ ರೋಗ ಕಾಣಿಸಿದ್ದು, ಇಲ್ಲಿಯೂ ಬೆಳೆಯನ್ನು ಪೂರ್ಣವಾಗಿ ನಾಶಮಾಡಿ, ಹೊಸದಾಗಿ ನಾಟಿ ಮಾಡಬೇಕಾದ ಸ್ಥಿತಿ ಉದ್ಭವಿಸಿದೆ. ಹೀಗಾಗಿ, ಈ ಸಲ ನಿರೀಕ್ಷಿತ ಫ‌ಸಲು ಪಡೆಯುವುದು ಅಸಾಧ್ಯವಾಗಿದೆ.

ವಿಟಮಿನ್‌ ಕೊರತೆಯಿಂದ ರೋಗ
ವಿಪರೀತ ಮಳೆಯ ಕಾರಣ ಮಣ್ಣಿನಲ್ಲಿ ವಿಟಮಿನ್‌ ಕೊರತೆ ಉಂಟಾಗಿ ಬೆಂಕಿ ರೋಗ ಕಾಣಿಸಿಕೊಂಡಿದೆ. ಕಡಬ ತಾಲೂಕಿನ ಆಲಂಕಾರಿನಲ್ಲಿ ಪ್ರಥಮ ಪ್ರಕರಣ ಬೆಳಕಿಗೆ ಬಂದಿತ್ತು. ಇದರ ನಿಯಂತ್ರಣಕ್ಕೆ ಕಾರ್ಬನ್‌ ಡೈಜಿನ್‌ ಕೀಟನಾಶಕವನ್ನು ಒಂದು ಲೀಟರ್‌ಗೆ ಒಂದು ಮಿ.ಮೀ. ಸಮ ಪ್ರಮಾಣದಲ್ಲಿ ಬೆರೆಸಿ ಸಿಂಪಡಣೆ ಮಾಡಬೇಕು ಅಥವಾ ಯೂರಿಯಾ ಮತ್ತು ಪೊಟಾಶ್‌ ಅನ್ನು ಸಮ ಪ್ರಮಾಣದಲ್ಲಿ ಬೆರೆಸಿ ಪೈರಿಗೆ ಹಾಕಬೇಕು. ಎನ್‌ಪಿಕೆ 19-19-19ನ್ನು 1 ಲೀ. ನೀರಿಗೆ 5 ಗ್ರಾಂ. ಅನ್ನು ಸಮ ಪ್ರಮಾಣದಲ್ಲಿ ಬೆರೆಸಿ ಸಿಂಪಡಣೆ ಮಾಡುವುದರಿಂದ ಬೆಂಕಿ ರೋಗ ನಿಯಂತ್ರಣ ಸಾಧ್ಯ.
– ತಿಮ್ಮಪ್ಪ ಗೌಡ,
ಕಡಬ ಹೋಬಳಿ ಸಹಾಯಕ ಕೃಷಿ ಅಧಿಕಾರಿ

ಸದಾನಂದ ಆಲಂಕಾರು

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.