ವಿಟ್ಲ, ಕನ್ಯಾನದಲ್ಲಿ ಮನೆಗಳಿಗೆ ಬೆಂಕಿ
Team Udayavani, Apr 10, 2018, 6:00 AM IST
ವಿಟ್ಲ: ವಿದ್ಯುತ್ ಅವಘಡದಿಂದ ಮನೆಯೊಂದು ಸಂಪೂರ್ಣ ವಾಗಿ ಸುಟ್ಟು ಕರಕಲಾಗಿ ಸುಮಾರು 20 ಲ.ರೂ. ನಷ್ಟ ಸಂಭವಿಸಿದ ಘಟನೆ ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ರವಿವಾರ ತಡರಾತ್ರಿ ಸಂಭವಿಸಿದೆ.
ಕಟ್ಟತ್ತಿಲ ಗೌರಿಕೋಡಿ ನಿವಾಸಿ ಸುನಂದಾ ಅವರ ಹಂಚಿನ ಮನೆಯಲ್ಲಿ ದುರುಂತ ಸಂಭವಿಸಿದೆ. ಮನೆಯಲ್ಲಿ ನಾಲ್ವರು ವಾಸಿಸುತ್ತಿದ್ದು, ಅವರು ರವಿವಾರ ಸಂಬಂಧಿಕರ ಮನೆಗೆ ತೆರಳಿದ್ದರು. ರವಿವಾರ ಸಂಜೆಯಿಂದಲೇ ಗುಡುಗು, ಮಿಂಚು ಸಹಿತ ಮಳೆ ಸುರಿಯುತ್ತಿತ್ತು. ಇದರ ಪರಿಣಾಮವಾಗಿ ಮನೆಯ ಸ್ವಿಚ್ ಬೋರ್ಡ್ನಲ್ಲಿ ಶಾರ್ಟ್ಸರ್ಕ್ನೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿದ್ದ ಟಿ.ವಿ., ಹೋಂ ಥಿಯೇಟರ್, ಫ್ಯಾನ್, ಡಿವಿಡಿ ಮೊದಲಾದ ವಿದ್ಯುತ್ ಉಪಕರಣಗಳು ಸುಟ್ಟು ಛಿದ್ರಗೊಂಡಿವೆ. ಮನೆಯ ಆರು ಕೋಣೆಗಳಲ್ಲಿ ಇದ್ದಂತಹ ಮನೆಯ ದಾಖಲೆ ಪತ್ರಗಳು, ಮೂರು ಕಪಾಟುಗಳು, ವಿವಿಧ ಫರ್ನಿಚರ್ಗಳು, ಬಟ್ಟೆಬರೆಗಳು, ಪಾತ್ರೆ ಸಾಮಗ್ರಿಗಳು, ಮನೆಯವರ ಇನ್ನಿತರ ದಾಖಲೆ ಪತ್ರಗಳು, 62 ಸಾ. ರೂ. ನಗದು ಬೂದಿಯಾಗಿದೆ. ಹೊಸ ಮನೆಯ ಕಾಮಗಾರಿಗಾಗಿ ತಂದಿರಿಸಿದ್ದ 4 ಲಕ್ಷ ರೂ. ಮೌಲ್ಯದ ಮರಮಟ್ಟುಗಳು, ಅಡಿಕೆಗಳು ಕೂಡ ಸುಟ್ಟು ಕರಕಲಾಗಿವೆ.
ಬೆಂಕಿಯ ತೀವ್ರತೆಗೆ ಮನೆಯ ಛಾವಣಿ ಕುಸಿದು ಬಿದ್ದಿದೆ. ರಾತ್ರಿ 11.45ರ ವೇಳೆಗೆ ಸ್ಥಳೀಯ ಮಹಿಳೆ ಯೊಬ್ಬರು ಘಟನೆ ಬಗ್ಗೆ ಪಕ್ಕದ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಅವರು ಬೆಂಕಿ ನಂದಿಸಲು ಪ್ರಯತ್ನಿ ಸಿದ್ದರೂ ಸಾಧ್ಯವಾಗಿಲ್ಲ. ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದು ಕಾರ್ಯಾ ಚರಣೆ ನಡೆಸಿದ್ದಾರೆ. ಇಡೀ ಮನೆಯ ಗೋಡೆಗಳು ಬಿರುಕು ಬಿಟ್ಟಿವೆ.
ಘಟನಾ ಸ್ಥಳಕ್ಕೆ ಸಾಲೆತ್ತೂರು ಗ್ರಾಮ ಪಂಚಾಯತ್ ಸದಸ್ಯ ದೇವಿಪ್ರಸಾದ್ ಶೆಟ್ಟಿ ಪಾಲ್ತಾಜೆ, ವಿಟ್ಲ ಕಂದಾಯ ನಿರೀಕ್ಷಕ ದಿವಾಕರ್, ಸಾಲೆತ್ತೂರು ಮೆಸ್ಕಾಂ ಶಾಖಾಧಿಕಾರಿ ಸತೀಶ್, ಗ್ರಾಮ ಕರಣಿಕ ಅನಿಲ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇಸ್ಮಾಯಿಲ್ ಮೊದಲಾದವರು ಭೇಟಿ ನೀಡಿದ್ದಾರೆ.
ಕನ್ಯಾನದಲ್ಲೂ ಮನೆಗೆ ಬೆಂಕಿ
ಕನ್ಯಾನದ ಕೇಪುಳಗುಡ್ಡೆಯಲ್ಲಿರುವ ಆಮೀನ ಅಬ್ದುಲ್ಲ ಬ್ಯಾರಿಗೆ ಸೇರಿದ ಹಂಚಿನ ಮನೆಯಲ್ಲಿಯೂ ರವಿವಾರ ರಾತ್ರಿ ದುರಂತ ಸಂಭವಿಸಿ ಮನೆ ಭಾಗಶಃ ಸುಟ್ಟು ಹೋಗಿದ್ದು, ಸುಮಾರು 8 ಲ.ರೂ.ಗಿಂತಲೂ ಅಧಿಕ ನಷ್ಟ ಸಂಭವಿಸಿದೆ. ಮನೆ ಮಂದಿ ಹೊಸದಾಗಿ ನಿರ್ಮಾಣಗೊಳ್ಳುತ್ತಿದ್ದ ಮನೆಯಲ್ಲಿ ಮಲಗಿದ್ದರು. ರಾತ್ರಿ 12 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿದ್ದ 50 ಸಾ. ರೂ. ನಗದು, ವಿದ್ಯುತ್ ಉಪಕರಣಗಳು, ಬಟ್ಟೆಬರೆಗಳು, ಫರ್ನಿಚರ್, ಮೊದಲಾದ ಸೊತ್ತುಗಳು ಸುಟ್ಟು ಕರಕಲಾಗಿವೆ. ಘಟನೆ ಬಗ್ಗೆ ಮಾಹಿತಿ ಪಡೆದ ಸ್ಥಳೀಯರು ಬೆಂಕಿ ನಂದಿಸಲು ಶ್ರಮಿಸಿದರೂ ಸಾಧ್ಯವಾಗಿಲ್ಲ. ವಿದ್ಯುತ್ ಕಾರಣದಿಂದ ಘಟನೆ ಸಂಭವಿಸಿರಬಹುದೆಂದು ಹೇಳಲಾಗುತ್ತಿದೆ. ಸ್ಥಳಕ್ಕೆ ವಿಟ್ಲ ಕಂದಾಯ ನಿರೀಕ್ಷಕ ದಿವಾಕರ್, ಗ್ರಾಮಕರಣಿಕ ಪ್ರಶಾಂತ್ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ