ಅಗ್ನಿ ಸುರಕ್ಷೆ: ಅಣುಕು ಪ್ರದರ್ಶನ, ತುರ್ತು ಚಿಕಿತ್ಸೆ ಪ್ರಾತ್ಯಕ್ಷಿಕೆ
Team Udayavani, Feb 5, 2018, 1:38 PM IST
ಮಹಾನಗರ : ನಗರದ ಡೊಂಗರಕೇರಿ ಕೆನರಾ ಹೈಸ್ಕೂಲ್ ಸಿ.ಬಿಎಸ್.ಇ. ಶಾಲೆಯಲ್ಲಿ ಫೆ. 3ರಂದು ಸುರಕ್ಷಣಾ ದಳ ಹಾಗೂ ತುರ್ತು ಚಿಕಿತ್ಸೆಯ ಬಗ್ಗೆ ರೆಡ್ ಕ್ರಾಸ್ ಇದರ ಆಶ್ರಯದಲ್ಲಿ ಪ್ರಾತ್ಯಕ್ಷಿಕೆಯನ್ನು ನಡೆಸಲಾಯಿತು.
ಕರ್ನಾಟಕ ರಾಜ್ಯ ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಯ ಸಿಬಂದಿ ಆಗಮಿಸಿದ್ದರು. ಬೆಂಕಿ ದುರಂತವಾದಾಗ ಪಾರಾಗುವ ರೀತಿಗಳನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು. ಅನಿಲ, ನೀರು, ಮರಳು, ಗೋಣಿ ಚೀಲ ಮುಂತಾದವುಗಳನ್ನು ಉಪಯೋಗಿಸಿ ಬೆಂಕಿಯನ್ನು ನಂದಿಸುವುದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವುದು ಹಾಗೂ ಬೆಂಕಿ ಅವಘಡವಾದಾಗ ಸ್ವರಕ್ಷಣೆ ಮಾಡಿಕೊಳ್ಳುವ ಬಗ್ಗೆ ಅರಿವು ಮೂಡಿಸಿದರು.
ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ರಕ್ಷಣಾ ಹಾಗೂ ತುರ್ತು ಚಿಕಿತ್ಸೆಯ ಮಾದರಿಯನ್ನು ಪ್ರದರ್ಶಿಸುವಲ್ಲಿ ಸಹಕರಿಸಿದರು. ಪ್ರಾತ್ಯಕ್ಷಿಕೆಯಲ್ಲಿ ಶಾಲಾ ಪ್ರಾಂಶುಪಾಲೆ ಜೋಯ್ ಜೆ. ರೈ ಉಪಸ್ಥಿತರಿದ್ದರು ಹಾಗೂ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ; ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್’
Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು
Mangaluru ಫಾತಿಮಾ ರಲಿಯಾ ಸಹಿತ ಆರು ಮಂದಿಗೆ ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ
Surathkal ಶಬರಿಮಲೆ ಯಾತ್ರೆ ಸಂದರ್ಭ ಹೃದಯಾಘಾತದಿಂದ ಸಾವು
Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು