ದಕ್ಷಿಣ ಕನ್ನಡ ಜಿಲ್ಲೆಯ ಪ್ರಥಮ ಆಕ್ಸಿಜನ್ ಉತ್ಪಾದನಾ ಘಟಕ ಲೋಕಾರ್ಪಣೆ
Team Udayavani, Jun 5, 2021, 4:05 PM IST
ಪುಂಜಾಲಕಟ್ಟೆ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಥಮ ಆಕ್ಸಿಜನ್ ಉತ್ಪಾದನಾ ಘಟಕ ಬಂಟ್ವಾಳ ತಾಲೂಕಿನ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಶನಿವಾರ (ಜೂ.5) ಲೋಕಾರ್ಪಣೆ ಗೊಂಡಿತು.
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ನೂತನ ಘಟಕವನ್ನು ಉದ್ಘಾಟಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೊರೋನಾ ನಿಗ್ರಹಕ್ಕೆ ಪೂರಕವಾಗಿ ಆಕ್ಸಿಜನ್ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಸ್ಥಾಪನೆಯಾದ ಪ್ರಥಮ ಆಕ್ಸಿಜನ್ ಘಟಕ ಇದಾಗಿದೆ ಎಂದರು.
ಬಂಟ್ವಾಳದಲ್ಲಿ ಕೊರೋನಾ ವಿರುದ್ಧದ ಹೋರಾಟ ವ್ಯವಸ್ಥಿತವಾಗಿ ನಡೆಯುತ್ತಿದ್ದು, ಸಂಸದರಾದ ನಳಿನ್ ಕುಮಾರ್ ಕಟೀಲು, ಶಾಸಕ ರಾಜೇಶ್ ನಾಕ್ ಹಾಗೂ ಅಧಿಕಾರಿ ವೃಂದದ ಶ್ರಮವನ್ನು ಅವರು ಶ್ಲಾಘಿಸಿದರಲ್ಲದೆ ಸರಕಾರದ ಮತ್ತು ಜಿಲ್ಲಾಡಳಿತದ ಪರವಾಗಿ ಅಭಿನಂದಿಸಿದರು.
ಈ ಘಟಕದಲ್ಲಿ ಪ್ರತಿ ನಿಮಿಷಕ್ಕೆ 46 ಲೀಟರ್ ಆಕ್ಸಿಜನ್ ಉತ್ಪಾದನಾ ಸಾಮರ್ಥ್ಯ ಹೊಂದಿದ್ದು, ಜಿಲ್ಲೆಯ ವಿವಿಧ ತಾಲೂಕುಗಳಲ್ಲಿಯೂ ಹಂತ ಹಂತವಾಗಿ ಆಕ್ಸಿಜನ್ ಉತ್ಪಾದನ ಘಟಕ ಸ್ಥಾಪನೆಯಾಗಲಿದೆ ಎಂದವರು ಹೇಳಿದರು.
ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್,ಶಾಸಕ ರಾಜೇಶ್ ಉಳಿಪ್ಪಾಡಿಗುತ್ತು, ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಜಿ.ಪ. ಸದಸ್ಯ ಎಂ.ತುಂಗಪ್ಪ ಬಂಗೇರ, ನೀರು ಸರಬರಾಜು ಮತ್ತು ಒಳಚರಂಡಿ ನಿಗಮದ ನಿರ್ದೇಶಕಿ ಸುಲೋಚನಾ ಜಿ.ಕೆ.ಭಟ್, ತಾ.ಪಂ.ಸದಸ್ಯ ಪ್ರಭಾಕರ ಪ್ರಭು, ಚೆನ್ನೈತ್ತೋಡಿ ಗ್ರಾ.ಪಂ.ಅಧ್ಯಕ್ಷೆ ಭಾರತಿ ರಾಜೇಂದ್ರ ಪೂಜಾರಿ,ಉಪಾಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಕುಕ್ಕಿಪಾಡಿ ಗ್ರಾ.ಪಂ. ಅಧ್ಯಕ್ಷೆ ಸುಜಾತ ಆರ್.ಪೂಜಾರಿ, ಉಪಾಧ್ಯಕ್ಷ ಯೋಗೀಶ್ ಆಚಾರ್ಯ,ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ದೇವದಾಸ್ ಶೆಟ್ಟಿ,ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಮಂಗಳೂರು ಸಹಾಯಕ ಕಮೀಷನರ್ ಮದನ್ ಮೋಹನ್, ತಹಶಿಲ್ದಾರ್ ರಶ್ಮೀ ಎಸ್. ಆರ್, ಎಂಜಿನಿಯರ್ ಕೃಷ್ಣ, ತಾಲೂಕು ಪ್ರಭಾರ ಆರೋಗ್ಯ ಅಧಿಕಾರಿ ಜಯಪ್ರಕಾಶ್, ಆರೋಗ್ಯ ಕೇಂದ್ರದ ವೈದ್ಯರಾದ ಡಾ.ನಿತೀಶ್, ಡಾ.ಜವಾಬುಲ್ಲ, ಡಾ.ವಸುಧಾ, ಡಾ.ಅಕ್ಷತಾ, ಪುಂಜಾಲಕಟ್ಟೆ ಪ್ರಾ.ಕೇಂದ್ರದ ಆಯುಷ್ ವೈದ್ಯಾಧಿಕಾರಿ ಡಾ. ಸೋಹನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ವಾಮದಪದವು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಉಮೇಶ್ ಅಡ್ಯಂತಾಯ ಸ್ವಾಗತಿಸಿ,ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
MUST WATCH
ಹೊಸ ಸೇರ್ಪಡೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ