ಪಿಲಿಕುಳ: ಮೀನುಪ್ರಿಯರ ಮನಸೆಳೆದ ಮತ್ಸ್ಯೋತ್ಸವ


Team Udayavani, Jul 17, 2017, 2:05 AM IST

Matsyodhyama-16-7.jpg

ಮಂಗಳೂರು: ಕೆರೆಯಿಂದ ಆಗತಾನೆ ಹಿಡಿದ ಮೀನುಗಳನ್ನು ನೇರ ಖರೀದಿಸುವ ಅವಕಾಶ, ಸಮುದ್ರದ ತಾಜಾ ಮೀನುಗಳ ವಿವಿಧ ಖಾದ್ಯಗಳನ್ನು ಸ್ಥಳದಲ್ಲೇ ತಯಾರಿಸಿ ಮಾರಾಟ, ಸಮುದ್ರ ಮೀನುಗಳ ಹಾಗೂ ಮೀನಿನ ಮೌಲ್ಯವರ್ಧಿತ ಉತ್ಪನ್ನ, ಅಲಂಕಾರಿಕಾ ಮೀನುಗಳ ಪ್ರದರ್ಶನ, ಮಾರಾಟ ಪಿಲಿಕುಳದ ಡಾ| ಶಿವರಾಮ ಕಾರಂತ ನಿಸರ್ಗಧಾಮದಲ್ಲಿ ರವಿವಾರ ಆಯೋಜಿಸಿದ್ದ ಪಿಲಿಕುಳ ಮತ್ಸ್ಯೋತ್ಸವ ಹಾಗೂ ಕ್ಷೇತ್ರೋತ್ಸವ ಮೀನು ಪ್ರಿಯರ, ಸಾರ್ವಜನಿಕರ ಮನ ಸೆಳೆಯಿತು. ಕರ್ನಾಟಕ ಮೀನುಗಾರಿಕಾ ಇಲಾಖೆ, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ ಹಾಗೂ ಪಿಲಿಕುಳ ಡಾ| ಶಿವರಾಮ ಕಾರಂತ ನಿಸರ್ಗಧಾಮದ ಜಂಟಿ ಆಶ್ರಯದಲ್ಲಿ  ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಮೀನು ಹಿಡಿದು ಸ್ಥಳದಲ್ಲೇ ಹರಾಜು
ಪಿಲಿಕುಳದ ದೋಣಿ ವಿಹಾರ ಕೆರೆಯಲ್ಲಿ ಬೆಳೆಸಲಾಗಿದ್ದ ಕಾಟ್ಲಾ, ರೋಹ, ಮುರುಗಲ್‌ ಮೀನುಗಳನ್ನು ಸಾರ್ವಜನಿಕರ ಸಮ್ಮುಖದಲ್ಲೇ ಬಲೆಯಿಂದ ತೆಗೆದು ಹರಾಜು ಹಾಕಲಾಯಿತು. 5 ರಿಂದ 10 ಕಿಲೋ ತೂಕದವರೆಗಿನ ಮೀನುಗಳಿದ್ದು, ಕಿಲೋಗೆ ಕನಿಷ್ಠ 150 ರೂ.ನಿಂದ ಪ್ರಾರಂಭವಾಗಿ ಹರಾಜು ನಡೆಯಿತು. 2 ವರ್ಷಗಳ ಹಿಂದೆ ಕೆರೆಯಲ್ಲಿ ಬಿಡಲಾಗಿದ್ದ ಮೀನುಮರಿಗಳು ಬೆಳೆದಿದ್ದು, ಇವುಗಳನ್ನು ರವಿವಾರ ಬಲೆ ಹಾಕಿ ಹಿಡಿದು ಮಾರಾಟ ಮಾಡಲಾಯಿತು. ಒಂದೊಂದು ಮೀನು 600 ರಿಂದ 700 ರೂ. ವರೆಗೆ ಮಾರಾಟವಾಯಿತು.

ಅಲಂಕಾರಿಕಾ ಮೀನುಗಳ ಆಕರ್ಷಣೆ
ಕರ್ನಾಟಕ ಮೀನುಗಾರಿಕಾ ಕಾಲೇಜಿನ ವತಿಯಿಂದ ಅಲಂಕಾರಿಕಾ ಮೀನು ಮರಿಗಳ  ಪ್ರದರ್ಶನ ಹಾಗೂ ಮಾರಾಟ ಆಯೋಜಿಸಲಾಗಿತ್ತು. ವಿವಿಧ ಜಾತಿಯ ಮೀನುಮರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಯಿತು. ಮೀನು ಸಂತತಿ ವೃದ್ಧಿಸುವ ನಿಟ್ಟಿನಲ್ಲಿ ಕೆರೆಗೆ ಹೊಸದಾಗಿ ಮೀನಿನ ಮರಿಗಳನ್ನು ಬಿಡಲಾಯಿತು. ರೋಟರಿ ಕ್ಲಬ್‌ ಮಂಗಳೂರು ಇದಕ್ಕೆ ಪ್ರಾಯೋಜಕತ್ವ ನೀಡಿತ್ತು. ಪ್ರವಾಸಿಗರಿಗಾಗಿ ದೋಣಿ ವಿಹಾರ ಕಲ್ಪಿಸಲಾಗಿತ್ತು.

ರಾಜ್ಯ ಮೀನುಗಾರಿಕಾ ಹಾಗೂ ಯುವ ಜನ ಖಾತೆ ಸಚಿವ  ಪ್ರಮೋದ್‌ ಮಧ್ವರಾಜ್‌ ಮತ್ಸ್ಯೋತ್ಸವವನ್ನು ಉದ್ಘಾಟಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಶಾಸಕರಾದ ಅಭಯಚಂದ್ರ ಜೈನ್‌, ಜೆ.ಆರ್‌. ಲೋಬೋ, ವಿಧಾನ ಪರಿಷತ್‌ ಮುಖ್ಯ ಸಚೇತಕ  ಐವನ್‌ ಡಿ’ಸೋಜಾ, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ  ಶಾಂತಿಗೋಡು, ಮೂಡುಶೆಡ್ಡೆ  ಗ್ರಾ.ಪಂ. ಅಧ್ಯಕ್ಷ  ಹರಿ ಪ್ರಸಾದ್‌ ಶೆಟ್ಟಿ, ಮೀನುಗಾರಿಕಾ ನಿಗಮದ ಅಧ್ಯಕ್ಷ  ವಿ.ಕೆ. ಶೆಟ್ಟಿ, ರೋಟರಿ ಕ್ಲಬ್‌ ಮಂಗಳೂರು ಅಧ್ಯಕ್ಷ  ವಸಂತ್‌ ಶೆಣೈ, ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ, ಜೈವಿಕ ಉದ್ಯಾನದ ಜಯಪ್ರಕಾಶ್‌ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.


ಮೌಲ್ಯವರ್ಧಿತ ಉತ್ಪನ್ನಗಳ ಮಾರಾಟ

ಕರ್ನಾಟಕ ಮೀನುಗಾರಿಕಾ ನಿಗಮದ ವತಿಯಿಂದ ತಯಾರಿಸಲಾಗಿದ್ದ ಮೀನುಗಳ ವಿವಿಧ ಮೌಲ್ಯವರ್ಧಿತ ಉತ್ಪನ್ನಗಳ ಮಾರಾಟ ಆಯೋಜಿಸಲಾಗಿತ್ತು. ಮೀನಿನ ಚಟ್ನಿ ಪುಡಿ, ಸಿಗಡಿಯ ಉಪ್ಪಿನಕಾಯಿ, ವೇವ್ಸ್‌, ಒಣಗಿಸಿದ ಬಂಗುಡೆ ಮೀನು ಒಂದೆಡೆಯಾದರೆ ಇನ್ನೊಂದೆಡೆ ಮೀನಿನ ಕಟ್ಲೆಟ್‌, ಸಿಗಡಿ ಪಾಪ್‌ಕಾರ್ನ್, ಮೀನಿನ ಸಮೋಸ, ಫಿಶ್‌ ಕಬಾಬ್‌ಗಳು, ಮೀನು ಬಿರಿಯಾನಿ, ಸಿಗಡಿ ಬಿರಿಯಾನಿ, ಮೀನಿನ ಸಾಸೆಜ್‌ ಗಮನ ಸೆಳೆಯಿತು. ಬಿಳಿ ಮಾಂಜಿ, ಕಾಣೆ, ಮಾಲ, ಅಂಜಲ್‌, ನಂಗ್‌, ಬಂಗುಡೆ, ಮೆಲುಗು, ನಂಗ್‌, ಬೊಳೆಂಜಿರ್‌ ಫ್ತೈಗಳನ್ನು ಸ್ಥಳದಲ್ಲೇ ತಯಾರಿಸಿ ಗ್ರಾಹಕರಿಗೆ ನೀಡಲಾಗುತ್ತಿತ್ತು. ಇದಲ್ಲದೆ ಸಮುದ್ರ ಮೀನುಗಳ ಮಾರಾಟವೂ ಇತ್ತು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.