ಮೀನುಗಾರಿಕೆ: ಕೊನೆಗೂ ತುಸು ಚೇತರಿಕೆ


Team Udayavani, Mar 25, 2018, 10:45 AM IST

25-March-3.jpg

ಮಹಾನಗರ: ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯು ಭಾರ ಕುಸಿತದಿಂದ ಬಹುತೇಕ ಸ್ಥಗಿತಗೊಂಡಿದ್ದ ಮೀನುಗಾರಿಕೆ ನಿಧಾನವಾಗಿ ಆರಂಭವಾಗಿದೆ. ಎರಡು ದಿನಗಳಿಂದ ಕೆಲವು ಬೋಟುಗಳು ಮೀನುಗಾರಿಕೆಗೆ ತೆರಳುತ್ತಿರುವುದರಿಂದ ಮಾರುಕಟ್ಟೆಯಲ್ಲೂ ಮೀನಿನ ಲಭ್ಯತೆ ಹೆಚ್ಚುವ ಸಂಭವವಿದೆ.

ಆದರೆ ಕೆಲವು ದಿನಗಳಿಂದ ಮೀನುಗಾರಿಕೆ ಸ್ಥಗಿತಗೊಂಡು ಮಾರುಕಟ್ಟೆಯಲ್ಲಿ ಮೀನುಗಳ ಕೊರತೆ ಉದ್ಭವಿಸಿತ್ತು. ದರದಲ್ಲೂ ಏರಿಕೆಯಾಗಿತ್ತು. ವಾಯುಭಾರ ಕುಸಿತದಿಂದ ಸಮುದ್ರ ಪ್ರಕ್ಷುಬ್ಧಗೊಂಡ ಹಿನ್ನೆಲೆಯಲ್ಲಿ ಮೀನುಗಾರಿಕೆಗೆ ತೆರಳುವಂತಿರಲಿಲ್ಲ. ಹೆಚ್ಚಿನ ಬೋಟುಗಳು ನಗರದ ಮೀನುಗಾರಿಕಾ ಬಂದರಿನಲ್ಲಿ ಲಂಗರು ಹಾಕಿಕೊಂಡಿದ್ದವು. ಮತ್ಸ್ಯೋದ್ಯಮಕ್ಕೆ ಕೋಟಿ ರೂ.ಗಿಂತಲೂ ಹೆಚ್ಚು ನಷ್ಟವಾಗಿತ್ತು. ಸಾಮಾನ್ಯವಾಗಿ ಒಂದು ಬೋಟ್‌ ಆಳದ ಸಮುದ್ರ ಮೀನುಗಾರಿಕೆಗೆ ತೆರಳಿದರೆ 11 ದಿನಗಳ ಬಳಿಕವಷ್ಟೇ ವಾಪಾಸ್‌ ಆಗಮಿಸುತ್ತದೆ. ಹೀಗಾಗಿ, ಕಾರ್ಮಿಕರು ಕೆಲಸವಿಲ್ಲದೆ ಒಂದು ವಾರದಿಂದ ಬೋಟಿನಲ್ಲಿಯೇ ಜೀವನ ನಡೆಸುವಂತಾಗಿತ್ತು.

ಮಂಗಳೂರಿನ ಬಂದರಿನಿಂದ ಸಾಮಾನ್ಯವಾಗಿ ಮಹಾರಾಷ್ಟ್ರ ಕಡೆಗೆ ಮೀನುಗಾರಿಕೆಗೆ ಅನೇಕ ಬೋಟುಗಳು ತೆರಳುತ್ತವೆ. ಒಂದು ಬೋಟು ಸುಮಾರು 7 ಲಕ್ಷ ರೂ. ಬೆಲೆಯ ಮೀನುಗಳನ್ನು ಹೊತ್ತು ತರುತ್ತದೆ. ಆದರೆ, ಇದೀಗ ಮೀನುಗಾರರು ಸಮುದ್ರಕ್ಕೆ ಇಳಿಯುವುದನ್ನು ಎದುರು ನೋಡುತ್ತಾ ದಿನ ದೂಡುವಂತಾಗಿತ್ತು ಎಂದು ಮೀನುಗಾರಿಕಾ ಸಂಘಟನೆಯವರು ‘ಉದಯವಾಣಿ’ಗೆ ತಿಳಿಸಿದ್ದಾರೆ.

ಮೀನುಗಳ ದರ ಹೆಚ್ಚಳ
ಸಾಮಾನ್ಯವಾಗಿ ಜನವರಿ, ಫೆಬ್ರವರಿ ತಿಂಗಳಿನಲ್ಲಿ ಸಮುದ್ರದಲ್ಲಿ ಮೀನುಗಳು ಕಡಿಮೆ ಪ್ರಮಾಣದಲ್ಲಿ ಸಿಗುತ್ತವೆ. ಆದರೆ ಈ ವರ್ಷ ಮೀನುಗಳ ತುಸು ಸಂಖ್ಯೆ ಹೆಚ್ಚಿದ್ದು, ಇದರಿಂದಾಗಿ ಮೀನುಗಾರರು ಕೂಡ ಖುಷಿಯಲ್ಲಿದ್ದರು. ಅನಿರೀಕ್ಷಿತವೆಂಬಂತೆ ಕೇರಳದ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಳದಿಂದಾಗಿ ಬೋಟುಗಳು ಸಮುದ್ರಕ್ಕೆ ಇಳಿಯದಂತಾಗಿದ್ದು, ಇದರ ಪರಿಣಾಮ ಗ್ರಾಹಕರೂ ಎದುರಿಸುವಂತಾಗಿತ್ತು.

ಸಾಲು ಸಾಲು ರಜೆಯ ಸಮಯದಲ್ಲಿ, ವೀಕೆಂಡ್‌ ಸಮಯದಲ್ಲಿ ಹಲವರು ಮೀನು ಖಾದ್ಯಗಳನ್ನು ಬಳಸುತ್ತಾರೆ. ಆದರೆ ಎರಡು ವಾರಗಳ ಹಿಂದೆ ಕಡಿಮೆ ಇದ್ದ ಮೀನಿನ ದರ ಹೆಚ್ಚಾಗಿತ್ತು. ಅಂಜಲ್‌ ಮೀನು ಕೆ.ಜಿ.ಗೆ 450 ರೂ. ಇದ್ದದ್ದು 650 ರೂ. ಆಗಿತ್ತು. 80 ರೂ. ಇದ್ದ ಬಂಗುಡೆ ಮೀನು ದೊಡ್ಡದು ಸುಮಾರು 180 ರೂ.ಗೆ ಏರಿಕೆಯಾಗಿತ್ತು ಬೂತಾಯಿ ಮೀನು ಸಮರ್ಪಕವಾಗಿ ಪೂರೈಕೆಯಾಗುತ್ತಿರಲಿಲ್ಲ.

ದಿನಗೂಲಿ ಕೆಲಸಗಾರರಿಗೆ ಸಂಕಷ್ಟ
ಮೀನುಗಾರಿಕಾ ಬಂದರಿನಲ್ಲಿ ಸುಮಾರು 30 ಸಾವಿರ ಮಂದಿ ನೇರವಾಗಿ ಕೆಲಸ ಮಾಡುತ್ತಿದ್ದಾರೆ. ಪರೋಕ್ಷವಾಗಿ ಇಷ್ಟೇ ಮಂದಿ ಅವಲಂಬಿಸಿದ್ದು, ಇವರೆಲ್ಲರೂ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಸಾಮಾನ್ಯವಾಗಿ ಒಂದು ಬೋಟು ಸಮುದ್ರದಲ್ಲಿ ಮೀನು ಹಿಡಿದು ತಂದರೆ, ಅದರಿಂದ ಐಸ್‌ ಮಾರಾಟಗಾರರು, ಬೋಟುಗಳಿಂದ ಮೀನು ತೆಗೆಯುವ ಕಾರ್ಮಿಕರಿಗೂ ಕೆಲಸ ಸಿಗುವ ಜತೆಗೆ ವ್ಯಾಪಾರವೂ ಆಗುತ್ತದೆ. ಬೋಟುಗಳು ಲಂಗರು ಹಾಕಿರುವುದರಿಂದ ಮೀನುಗಾರರು ಮಾತ್ರವಲ್ಲ ಅವರನ್ನು ಅವಲಂಬಿಸಿಕೊಂಡು ಜೀವನ ಸಾಗಿಸುತ್ತಿರುವ ಇತರೆ ಕಾರ್ಮಿಕರು ಹಾಗೂ ವ್ಯಾಪಾರಸ್ಥರೂ ಸಂಕಷ್ಟ ಎದುರಿಸುವಂತಾಗಿತ್ತು.

ಮಾಲಕರಿಗೆ ಸಂಕಷ್ಟ
ವಾಯುಭಾರ ಕುಸಿತದ ಕಾರಣದಿಂದಾಗಿ ಸಮರ್ಪಕವಾಗಿ ಮೀನುಗಾರಿಕೆ ನಡೆಯುತ್ತಿಲ್ಲ. ಅನೇಕ ಬೋಟ್‌ಗಳು ಬಂದರಿನಲ್ಲಿಯೇ ಲಂಗರು ಹಾಕಿದ್ದವು. ಇದರಿಂದಾಗಿ ಮಾಲಕರು ಕಾರ್ಮಿಕರಿಗೆ ನೀಡುವ ಸಂಬಳವನ್ನು ನೀಡುತ್ತಿದ್ದು, ಸಂಕಷ್ಟ ಅನುಭವಿಸುವಂತಾಗಿತ್ತು.
– ರತ್ನಾಕರ ಸುವರ್ಣ,
ಜಿಲ್ಲಾಧ್ಯಕ್ಷ,ಆಲ್‌ ಇಂಡಿಯ
ಮೊಗವೀರ ಅಸೋಸಿಯೇಷನ್ 

ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.