‘ಜಪ್ಪು-ಬಪ್ಪಾಲ್ನ ಒಳಚರಂಡಿ ಅವ್ಯವಸ್ಥೆ ಸರಿಪಡಿಸಿ’
Team Udayavani, Nov 10, 2017, 11:06 AM IST
ಮಹಾನಗರ: ಮಹಾನಗರ ಪಾಲಿಕೆ ವ್ಯಾಪ್ತಿಯ ಜಪ್ಪು-ಬಪ್ಪಾಲ್ ವಾರ್ಡಿನಲ್ಲಿ ಒಳಚರಂಡಿ ಅವ್ಯವಸ್ಥೆಯಿಂದ ಆ ಭಾಗದ ಜನರು ರೋಗ ಭೀತಿಯಿಂದಲೇ ಬದುಕುತ್ತಿದ್ದಾರೆ. ಅವರ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು ಎಂದು ಬಿಜೆಪಿ ಮಂಗಳೂರು ನಗರ ದಕ್ಷಿಣ ಅಧ್ಯಕ್ಷ ವೇದವ್ಯಾಸ ಕಾಮತ್ ಆಗ್ರಹಿಸಿದ್ದಾರೆ.
ವಾರ್ಡಿಗೆ ಭೇಟಿಕೊಟ್ಟು ಅಲ್ಲಿನ ನಾಗರಿಕರೊಂದಿಗೆ ಮಾತನಾಡಿದ ಅವರು, ಶಾಸಕರು ಮತ್ತು ಕಾರ್ಪೊರೇಟರ್ ಜನರಿಗೆ ಅಗತ್ಯವಿರುವಲ್ಲಿ ಕಾಮಗಾರಿ ಮಾಡಬೇಕೇ ಹೊರತು ತಮಗೆ ಬೇಕಾದ ಕಡೆ ಮಾಡುವುದಲ್ಲ. ತನಗೆ ವೋಟ್ ಕೊಟ್ಟವರಿಗೆ ಮಾತ್ರ ಕೆಲಸ ಮಾಡಿ ಕೊಡುತ್ತೇನೆ ಎಂದು ಅಪ್ಪಿ ಅವರು ಹೇಳಿದ್ದು ಖಂಡನೀಯ. ಹಾಗಾದರೆ ಉಳಿದವರು ನಾವು ತೆರಿಗೆ ಕಟ್ಟೋದಿಲ್ಲ, ನಿಮಗೆ ವೋಟ್ ಕೊಟ್ಟವರಿಂದ ಮಾತ್ರ ತೆರಿಗೆ ಕಟ್ಟಿಸಿಕೊಳ್ಳಿ ಎಂದು ಹೇಳಿದರೆ ಆಗುತ್ತದೆಯೇ ಎಂದು ಅವರು ಪ್ರಶ್ನಿಸಿದರು.
ಸಮಸ್ಯೆ ಪರಿಹಾರಕ್ಕಾಗಿ ಪಾಲಿಕೆಯ ಕಮಿಷನರ್ಗೆ ದೂರು ನೀಡಲು ನಿರ್ಧರಿಸಿದ್ದೇವೆ ಎಂದು ಸ್ಥಳೀಯ ಮುಂದಾಳು ಭರತ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು
“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’
Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ
Kerala “ವೆಸ್ಟ್ನೈಲ್’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ
ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ