ಚಾಮೆತಡ್ಕ : ಮನೆಗಳಿಗೆ ನುಗ್ಗಿದ ನೆರೆ ನೀರು


Team Udayavani, Aug 15, 2018, 10:58 AM IST

15-agust-4.jpg

ಆಲಂಕಾರು: ಮಳೆ ಅಬ್ಬರಕ್ಕೆ ಕುಮಾರಧಾರಾ ನದಿ ಉಕ್ಕಿ ಹರಿಯುತ್ತಿದೆ. ಆಲಂಕಾರು ಹಾಗೂ ಕುಂತೂರು ಗ್ರಾಮದ ಹಲವು ಮನೆಗಳಿಗೆ ನೆರೆ ನೀರು ನುಗ್ಗಿದ್ದು, ಹಲವು ತೋಟ ಗಳು ಜಲಾವೃತವಾಗಿವೆ. ಪೆರಾಬೆ ಗ್ರಾಮದ ನಾಲ್ಕು ಮನೆಗಳಿಗೆ ನೀರು ನುಗ್ಗಿದ್ದು, ಸಂತ್ರಸ್ತರು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಂಡಿದ್ದಾರೆ.

ಆಲಂಕಾರು ಗ್ರಾಮದ ಚಾಮೆತ್ತಡ್ಕ ನಿವಾಸಿ ಇಸ್ಮಾಯಿಲ್‌ ಮನೆಗೆ ನೆರೆ ನೀರು ನುಗ್ಗಿದೆ. ಹನೀಫ್, ಇಸುಬು, ಬುಡೋನ್‌ ಸಾಹೇಬ್‌ ಹಾಗೂ ಇಬ್ರಾಹಿಂ ಅವರ ಮನೆಗಳೂ ಜಲಾವೃತವಾಗಿವೆ. ಇವರಿಗೆ ಸದ್ಯ ಮಹಮ್ಮದ್‌ ಪಿ.ಆರ್‌. ತಮ್ಮ ಮನೆಯಲ್ಲಿ ಆಶ್ರಯ ನೀಡಿದ್ದಾರೆ. ಮನೆ ಸಾಮಾನು, ಜಾನುವಾರುಗಳಿಗೂ ಜಾಗ ಕೊಟ್ಟಿದ್ದಾರೆ. ಇಸುಬು ಅವರ ಎಂಡೋ ಪೀಡಿತ ಮಗುವನ್ನು ಸ್ಥಳೀಯರು ಸುರಕ್ಷಿತವಾಗಿ ಕರೆ ತಂದಿದ್ದಾರೆ.

ನೀರಿನ ಮಟ್ಟ ಏರುತ್ತಿದ್ದು, ಮನೆಗಳೂ ಅಪಾಯದ ಅಂಚಿನಲ್ಲಿವೆ. ಈ ಮನೆಗಳನ್ನು ಸಂಪರ್ಕಿಸುವ ರಸ್ತೆಗಳೂ ಜಲಾವೃತವಾಗಿವೆ. ಆಲಂಕಾರು ಗ್ರಾಮದ ಕಮ್ತೀಲು ನಿವಾಸಿ ಹುಕ್ರಪ್ಪ ಅವರ ಮನೆ ಹೊರ ಜಗತ್ತಿನ ಸಂಪರ್ಕ ಕಳೆದುಕೊಂಡಿದೆ. ಕೋಡಾಡಿ ನಿವಾಸಿ ಚೆನ್ನಯ ಪೂಜಾರಿ ಅವರ ಒಂದು ಎಕರೆ ಭತ್ತದ ಗದ್ದೆ ಮುಳುಗಿದೆ.

1974ರಲ್ಲಿ ಚಾಮೆತ್ತಡ್ಕಕ್ಕೆ ನೆರೆ ಬಂದಿತ್ತು. 44 ವರ್ಷ ಗಳ ಬಳಿಕ ಮತ್ತೆ ನೆರೆ ನೀರು ಆವರಿಸಿದ್ದು, ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಆಲಂಕಾರು ಗ್ರಾ.ಪಂ. ಅಧ್ಯಕ್ಷೆ ಸುನಂದಾ ಬಾರ್ಕುಲಿ, ಉಪಾಧ್ಯಕ್ಷ ಸುಧಾಕರ ಪೂಜಾರಿ ಕಲ್ಲೇರಿ, ಪೆರಾಬೆ ಗ್ರಾ.ಪಂ. ಕಾರ್ಯದರ್ಶಿ ಲಲಿತಾ ಜಿ.ಡಿ. ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ.

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.